<p>ಶಿರಸಿ: ‘ಅಭಿವೃದ್ಧಿಯಲ್ಲಿ ಕೇವಲ ಸರ್ಕಾರ ಮಾತ್ರವಲ್ಲದೆ, ಸೇವಾ ಸಂಸ್ಥೆಗಳ ಪಾತ್ರವೂ ಅಪಾರವಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು.</p>.<p>ನಗರದ ಎಂ.ಎಂ. ಜೋಶಿ ಗಣೇಶ ನೇತ್ರಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೇತ್ರ ಉಚಿತ ತಪಾಸಣೆ, ಟೈಲರಿಂಗ್ ತರಬೇತಿ ಸಮಾರೋಪ ಹಾಗೂ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರೋಟರಿ ಶಿರಸಿ ಘಟಕ, ಇನ್ನರ್ ವೀಲ್ ಕ್ಲಬ್ ಆಫ್ ಶಿರಸಿ ಹೆರಿಟೇಜ್, ಎಂ.ಎಂ. ಜೋಶಿ ಗಣೇಶ ನೇತ್ರಾಲಯ ಹಾಗೂ ಪ್ರಣತಿ ಟೈಲರಿಂಗ್ ಕೇಂದ್ರಗಳು ಒಗ್ಗೂಡಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮವು ಮಹಿಳಾ ಸಬಲೀಕರಣ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಒಂದು ಪ್ರಮುಖ ಮೈಲಿಗಲ್ಲಾಗಿದೆ’ ಎಂದರು.</p>.<p>‘ಸ್ವಾವಲಂಬಿ ಬದುಕಿಗಾಗಿ ತರಬೇತಿ ಪಡೆದ ಮಹಿಳೆಯರಿಗೆ ಗೌರವ ಸಲ್ಲಿಕೆ ಹಾಗೂ ಸಾರ್ವಜನಿಕರಿಗೆ ಕಣ್ಣಿನ ಉಚಿತ ತಪಾಸಣೆಯಂತಹ ಜನಪರ ಕಾರ್ಯಗಳು ಸದೃಢ ಸಮಾಜ ನಿರ್ಮಾಣಕ್ಕೆ ಸಾಕ್ಷಿಯಾಗಿವೆ. ಇಂತಹ ಮಹತ್ಕಾರ್ಯಗಳಲ್ಲಿ ಪಾಲ್ಗೊಳ್ಳುವುದು ಜನಸೇವೆಯ ಒಂದು ಅವಿಭಾಜ್ಯ ಭಾಗವಾಗಿದೆ’ ಎಂದರು.</p>.<p>ಸಮಾರಂಭದಲ್ಲಿ ತರಬೇತಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ನೇತ್ರ ತಪಾಸಣಾ ಶಿಬಿರದಲ್ಲಿ ಅನೇಕ ಜನರು ಭಾಗವಹಿಸಿದ್ದರು. ವಿವಿಧ ಸಂಸ್ಥೆಗಳ ಪದಾಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ತರಬೇತಿ ಪಡೆದ ಮಹಿಳೆಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-20-107398604</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ಅಭಿವೃದ್ಧಿಯಲ್ಲಿ ಕೇವಲ ಸರ್ಕಾರ ಮಾತ್ರವಲ್ಲದೆ, ಸೇವಾ ಸಂಸ್ಥೆಗಳ ಪಾತ್ರವೂ ಅಪಾರವಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು.</p>.<p>ನಗರದ ಎಂ.ಎಂ. ಜೋಶಿ ಗಣೇಶ ನೇತ್ರಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೇತ್ರ ಉಚಿತ ತಪಾಸಣೆ, ಟೈಲರಿಂಗ್ ತರಬೇತಿ ಸಮಾರೋಪ ಹಾಗೂ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರೋಟರಿ ಶಿರಸಿ ಘಟಕ, ಇನ್ನರ್ ವೀಲ್ ಕ್ಲಬ್ ಆಫ್ ಶಿರಸಿ ಹೆರಿಟೇಜ್, ಎಂ.ಎಂ. ಜೋಶಿ ಗಣೇಶ ನೇತ್ರಾಲಯ ಹಾಗೂ ಪ್ರಣತಿ ಟೈಲರಿಂಗ್ ಕೇಂದ್ರಗಳು ಒಗ್ಗೂಡಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮವು ಮಹಿಳಾ ಸಬಲೀಕರಣ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಒಂದು ಪ್ರಮುಖ ಮೈಲಿಗಲ್ಲಾಗಿದೆ’ ಎಂದರು.</p>.<p>‘ಸ್ವಾವಲಂಬಿ ಬದುಕಿಗಾಗಿ ತರಬೇತಿ ಪಡೆದ ಮಹಿಳೆಯರಿಗೆ ಗೌರವ ಸಲ್ಲಿಕೆ ಹಾಗೂ ಸಾರ್ವಜನಿಕರಿಗೆ ಕಣ್ಣಿನ ಉಚಿತ ತಪಾಸಣೆಯಂತಹ ಜನಪರ ಕಾರ್ಯಗಳು ಸದೃಢ ಸಮಾಜ ನಿರ್ಮಾಣಕ್ಕೆ ಸಾಕ್ಷಿಯಾಗಿವೆ. ಇಂತಹ ಮಹತ್ಕಾರ್ಯಗಳಲ್ಲಿ ಪಾಲ್ಗೊಳ್ಳುವುದು ಜನಸೇವೆಯ ಒಂದು ಅವಿಭಾಜ್ಯ ಭಾಗವಾಗಿದೆ’ ಎಂದರು.</p>.<p>ಸಮಾರಂಭದಲ್ಲಿ ತರಬೇತಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ನೇತ್ರ ತಪಾಸಣಾ ಶಿಬಿರದಲ್ಲಿ ಅನೇಕ ಜನರು ಭಾಗವಹಿಸಿದ್ದರು. ವಿವಿಧ ಸಂಸ್ಥೆಗಳ ಪದಾಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ತರಬೇತಿ ಪಡೆದ ಮಹಿಳೆಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-20-107398604</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>