<p><strong>ಶಿರಸಿ: ‘</strong>ಮಕ್ಕಳಿಗೆ ಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಣದ ಪ್ರಭಾವ ಹೆಚ್ಚಾಗಿರುತ್ತಿದೆ. ಹೀಗಾಗಿ ಮನೆಯಲ್ಲಿ ಮಕ್ಕಳಿಗೆ ಧಾರ್ಮಿಕ ಹಾಗೂ ಸಂಸ್ಕೃತಿಯ ಶಿಕ್ಷಣ ದೊರೆಯುವಂತೆ ಮಾಡುವುದು ಪೋಷಕರ ಜವಾಬ್ದಾರಿಯಾಗಿದೆ’ ಎಂದು ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.</p>.<p>ನಗರದ ವಿಕಾಸಾಶ್ರಮ ಮೈದಾನದಲ್ಲಿ ಯುಗಾದಿ ಉತ್ಸವ ಸಮಿತಿ ಗುರುವಾರ ಆಯೋಜಿಸಿದ್ದ ಯುಗಾದಿ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.</p>.<p>‘ಹಿಂದೂ ಹಬ್ಬಗಳಲ್ಲಿ ಸಾಮಾಜಿಕ, ಕೌಟುಂಬಿಕ ಹಾಗೂ ವೈಯಕ್ತಿಕ ಹಿತಚಿಂತನೆಯಿದೆ. ಯುಗಾದಿ ಹೊಸ ವರ್ಷದ ಆರಂಭ ಮತ್ತು ಹಿಂದುತ್ವದ ಬುನಾದಿ. ಅದನ್ನು ಸರಿಯಾಗಿ ಆಚರಿಸಿದರೆ ನಮಗೆ ಶಕ್ತಿ ಸಿಗುತ್ತದೆ. ಇಡೀ ವರ್ಷ ಒಳ್ಳೆಯ ಕೆಲಸ ಮಾಡುವ ಸಂಕಲ್ಪ ಮಾಡಬೇಕು’ ಎಂದು ತಿಳಿಸಿದರು.</p>.<p>ಬಣ್ಣದ ಮಠದ ಶಿವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ‘ಪಾಶ್ಚಾತ್ಯ ಶಿಕ್ಷಣದ ಪ್ರಭಾವದಿಂದ ನಮ್ಮ ಶಿಕ್ಷಣ ಪದ್ಧತಿಯಲ್ಲಿ ಸಂಸ್ಕೃತಿ, ನೈತಿಕತೆ ನಾಶವಾಗಿದೆ. ನಮ್ಮ ಪಂಚಾಂಗದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿ ಶಿಕ್ಷಣ ಪದ್ಧತಿಯನ್ನು ಸರಿದಾರಿಗೆ ತರಬೇಕು’ ಎಂದರು.</p>.<p>ಸ್ವಾದಿ ಜೈನ ಮಠದ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಮಾತನಾಡಿ, ‘ಭಗವಂತನನ್ನು ನಂಬಿ ಕೆಟ್ಟವರಿಲ್ಲ, ಭಕ್ತಿ ಹೆಚ್ಚಾಗಬೇಕು' ಎಂದರು. ದಿಕ್ಸೂಚಿ ಭಾಷಣ ಮಾಡಿದ ಗಜಾನನ ಪೈ,'ಸಮಾಜ ವಿರೋಧಿ ಸಂಗತಿಗಳನ್ನು ಪರಾಭವಗೊಳಿಸಬೇಕು. ಧರ್ಮ, ಸಂಸ್ಕೃತಿ ಕೇವಲ ಪುಸ್ತಕಕ್ಕೆ ಸೀಮಿತವಾಗದೇ ಆಚರಣೆಗೆ ಬರಬೇಕು’ ಎಂದರು.</p>.<p>ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ರಮೇಶ ದುಭಾಶಿ, ಸಂಚಾಲಕ ಕೃಷ್ಣ ಎಸಳೆ, ಮುಖಂಡ ಅಶ್ವಿನ ಭೀಮಣ್ಣ ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260321-20-6148422</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: ‘</strong>ಮಕ್ಕಳಿಗೆ ಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಣದ ಪ್ರಭಾವ ಹೆಚ್ಚಾಗಿರುತ್ತಿದೆ. ಹೀಗಾಗಿ ಮನೆಯಲ್ಲಿ ಮಕ್ಕಳಿಗೆ ಧಾರ್ಮಿಕ ಹಾಗೂ ಸಂಸ್ಕೃತಿಯ ಶಿಕ್ಷಣ ದೊರೆಯುವಂತೆ ಮಾಡುವುದು ಪೋಷಕರ ಜವಾಬ್ದಾರಿಯಾಗಿದೆ’ ಎಂದು ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.</p>.<p>ನಗರದ ವಿಕಾಸಾಶ್ರಮ ಮೈದಾನದಲ್ಲಿ ಯುಗಾದಿ ಉತ್ಸವ ಸಮಿತಿ ಗುರುವಾರ ಆಯೋಜಿಸಿದ್ದ ಯುಗಾದಿ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.</p>.<p>‘ಹಿಂದೂ ಹಬ್ಬಗಳಲ್ಲಿ ಸಾಮಾಜಿಕ, ಕೌಟುಂಬಿಕ ಹಾಗೂ ವೈಯಕ್ತಿಕ ಹಿತಚಿಂತನೆಯಿದೆ. ಯುಗಾದಿ ಹೊಸ ವರ್ಷದ ಆರಂಭ ಮತ್ತು ಹಿಂದುತ್ವದ ಬುನಾದಿ. ಅದನ್ನು ಸರಿಯಾಗಿ ಆಚರಿಸಿದರೆ ನಮಗೆ ಶಕ್ತಿ ಸಿಗುತ್ತದೆ. ಇಡೀ ವರ್ಷ ಒಳ್ಳೆಯ ಕೆಲಸ ಮಾಡುವ ಸಂಕಲ್ಪ ಮಾಡಬೇಕು’ ಎಂದು ತಿಳಿಸಿದರು.</p>.<p>ಬಣ್ಣದ ಮಠದ ಶಿವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ‘ಪಾಶ್ಚಾತ್ಯ ಶಿಕ್ಷಣದ ಪ್ರಭಾವದಿಂದ ನಮ್ಮ ಶಿಕ್ಷಣ ಪದ್ಧತಿಯಲ್ಲಿ ಸಂಸ್ಕೃತಿ, ನೈತಿಕತೆ ನಾಶವಾಗಿದೆ. ನಮ್ಮ ಪಂಚಾಂಗದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿ ಶಿಕ್ಷಣ ಪದ್ಧತಿಯನ್ನು ಸರಿದಾರಿಗೆ ತರಬೇಕು’ ಎಂದರು.</p>.<p>ಸ್ವಾದಿ ಜೈನ ಮಠದ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಮಾತನಾಡಿ, ‘ಭಗವಂತನನ್ನು ನಂಬಿ ಕೆಟ್ಟವರಿಲ್ಲ, ಭಕ್ತಿ ಹೆಚ್ಚಾಗಬೇಕು' ಎಂದರು. ದಿಕ್ಸೂಚಿ ಭಾಷಣ ಮಾಡಿದ ಗಜಾನನ ಪೈ,'ಸಮಾಜ ವಿರೋಧಿ ಸಂಗತಿಗಳನ್ನು ಪರಾಭವಗೊಳಿಸಬೇಕು. ಧರ್ಮ, ಸಂಸ್ಕೃತಿ ಕೇವಲ ಪುಸ್ತಕಕ್ಕೆ ಸೀಮಿತವಾಗದೇ ಆಚರಣೆಗೆ ಬರಬೇಕು’ ಎಂದರು.</p>.<p>ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ರಮೇಶ ದುಭಾಶಿ, ಸಂಚಾಲಕ ಕೃಷ್ಣ ಎಸಳೆ, ಮುಖಂಡ ಅಶ್ವಿನ ಭೀಮಣ್ಣ ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260321-20-6148422</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>