<p><strong>ಶಿರಸಿ:</strong> ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಪಂಡಿತ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ವೇಗ ನೀಡುವ ಜತೆ ತ್ವರಿತವಾಗಿ ಕಾಮಗಾರಿ ಮುಗಿಸಲು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು. </p>.<p>ಆಸ್ಪತ್ರೆ ಕಾಮಗಾರಿ ಜಾಗಕ್ಕೆ ಮಂಗಳವಾರ ತೆರಳಿ ಕಾಮಗಾರಿ ವೀಕ್ಷಿಸಿದ ಅವರು, ‘ 250 ಹಾಸಿಗೆಗಳ ಸೌಲಭ್ಯವುಳ್ಳ ಆಸ್ಪತ್ರೆ ಸೇವೆ ಕ್ಷೇತ್ರದ ಜನರಿಗೆ ಶೀಘ್ರ ದೊರೆಯಬೇಕು. ಈ ನಿಟ್ಟಿನಲ್ಲಿ ಗುತ್ತಿಗೆದಾರರಿಗೆ ವೇಗವಾಗಿ ಕಾಮಗಾರಿ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಬೇಕು’ ಎಂದರು. </p>.<p>ಇದಕ್ಕೂ ಮೊದಲು ಆಸ್ಪತ್ರೆಯಲ್ಲಿ ಆರೋಗ್ಯ ಸುರಕ್ಷಾ ಸಮಿತಿ ಸಭೆ ನಡೆಸಿ, ವೈದ್ಯಕೀಯ ಸೌಲಭ್ಯಗಳು ರೋಗಿಗಳಿಗೆ ಸಮರ್ಪಕ ಬಳಕೆ ಆಗುತ್ತಿರುವ ಬಗ್ಗೆ ಮಾಹಿತಿ ಪಡೆದರು.</p>.<p>‘ರೋಗಿಗಳಿಗೆ ಒದಗಿಸಲಾಗುತ್ತಿರುವ ಸವಲತ್ತು, ಶೌಚಾಲಯ ವ್ಯವಸ್ಥೆ, ವೈದ್ಯಕೀಯ ಸೇವೆ, ಆಸ್ಪತ್ರೆಯ ಸ್ವಚ್ಛತೆ, ಆಂಬುಲೆನ್ಸ್ ಸೇವೆ, ಔಷಧೋಪಚಾರಗಳು ಸಮರ್ಪಕವಾಗಿ ರೋಗಿಗಳಿಗೆ ಬಳಕೆಯಾಗುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೆ ಪರಿಹರಿಸಬೇಕು’ ಎಂದು ವೈದ್ಯಾಧಿಕಾರಿ ನೇತ್ರಾವತಿ ಶಿರಸಿಕರ ಅವರಿಗೆ ಸೂಚನೆ ನೀಡಿದರು.</p>.<p>ಉಪವಿಭಾಗಾಧಿಕಾರಿ ಕೆ.ವಿ.ಕಾವ್ಯಾರಾಣಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಪಂಡಿತ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ವೇಗ ನೀಡುವ ಜತೆ ತ್ವರಿತವಾಗಿ ಕಾಮಗಾರಿ ಮುಗಿಸಲು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು. </p>.<p>ಆಸ್ಪತ್ರೆ ಕಾಮಗಾರಿ ಜಾಗಕ್ಕೆ ಮಂಗಳವಾರ ತೆರಳಿ ಕಾಮಗಾರಿ ವೀಕ್ಷಿಸಿದ ಅವರು, ‘ 250 ಹಾಸಿಗೆಗಳ ಸೌಲಭ್ಯವುಳ್ಳ ಆಸ್ಪತ್ರೆ ಸೇವೆ ಕ್ಷೇತ್ರದ ಜನರಿಗೆ ಶೀಘ್ರ ದೊರೆಯಬೇಕು. ಈ ನಿಟ್ಟಿನಲ್ಲಿ ಗುತ್ತಿಗೆದಾರರಿಗೆ ವೇಗವಾಗಿ ಕಾಮಗಾರಿ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಬೇಕು’ ಎಂದರು. </p>.<p>ಇದಕ್ಕೂ ಮೊದಲು ಆಸ್ಪತ್ರೆಯಲ್ಲಿ ಆರೋಗ್ಯ ಸುರಕ್ಷಾ ಸಮಿತಿ ಸಭೆ ನಡೆಸಿ, ವೈದ್ಯಕೀಯ ಸೌಲಭ್ಯಗಳು ರೋಗಿಗಳಿಗೆ ಸಮರ್ಪಕ ಬಳಕೆ ಆಗುತ್ತಿರುವ ಬಗ್ಗೆ ಮಾಹಿತಿ ಪಡೆದರು.</p>.<p>‘ರೋಗಿಗಳಿಗೆ ಒದಗಿಸಲಾಗುತ್ತಿರುವ ಸವಲತ್ತು, ಶೌಚಾಲಯ ವ್ಯವಸ್ಥೆ, ವೈದ್ಯಕೀಯ ಸೇವೆ, ಆಸ್ಪತ್ರೆಯ ಸ್ವಚ್ಛತೆ, ಆಂಬುಲೆನ್ಸ್ ಸೇವೆ, ಔಷಧೋಪಚಾರಗಳು ಸಮರ್ಪಕವಾಗಿ ರೋಗಿಗಳಿಗೆ ಬಳಕೆಯಾಗುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೆ ಪರಿಹರಿಸಬೇಕು’ ಎಂದು ವೈದ್ಯಾಧಿಕಾರಿ ನೇತ್ರಾವತಿ ಶಿರಸಿಕರ ಅವರಿಗೆ ಸೂಚನೆ ನೀಡಿದರು.</p>.<p>ಉಪವಿಭಾಗಾಧಿಕಾರಿ ಕೆ.ವಿ.ಕಾವ್ಯಾರಾಣಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>