<p>ಶಿರಸಿ: ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ಕಾರ್ಮಿಕರನ್ನು ಬಳಸಿ ಶೌಚಗುಂಡಿ ಸ್ವಚ್ಛಗೊಳಿಸಿದ ಘಟನೆಯ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪ್ರಕರಣ ಸಂಬಂಧ ಕಂದಾಯ ಅಧಿಕಾರಿಗಳು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. </p>.<p>ನಗರದ ಭಗತ್ಸಿಂಗ್ ರಸ್ತೆಯ ಸಮೀಪ ಹಳೆ ಕಟ್ಟಡ ತೆರವು ಮಾಡಿ ಹೊಸ ಕಟ್ಟಡ ನಿರ್ಮಿಸಲಾಗುತ್ತಿದೆ. ಶೌಚದ ಹಳೆಯ ಗುಂಡಿಯನ್ನು ಕಾರ್ಮಿಕರಿಬ್ಬರು ಶನಿವಾರ ಸ್ವಚ್ಛಗೊಳಿಸಿದ್ದಾರೆ. ಅಲ್ಲದೇ, ಗುಂಡಿಯಿಂದ ಹೊರತೆಗೆದ ತ್ಯಾಜ್ಯವನ್ನು ತಲೆಯ ಮೇಲೆ ಹೊತ್ತು ಸಮೀಪದ ವಾಹನಕ್ಕೆ ಹಾಕಿದ್ದಾರೆ. ಈ ದೃಶ್ಯವನ್ನು ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ವಿಡಿಯೊ ಮಾಡಿ ತಹಶೀಲ್ದಾರ್ ಅವರಿಗೆ ದೂರು ನೀಡಿದ್ದಾರೆ. </p>.<p>ಪ್ರಕರಣ ಸಂಬಂಧ ತಹಶೀಲ್ದಾರ್ ಶ್ರೀಧರ ಮುಂದಲಮನಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದು, ‘ಶೌಚಾಲಯದ ಗುಂಡಿಯನ್ನು ಕಾರ್ಮಿಕರಿಂದ ಸ್ವಚ್ಛಗೊಳಿಸಿದ ವಿಷಯಕ್ಕೆ ಸಂಬಂಧಿಸಿ ಸ್ಥಳಕ್ಕೆ ಕಂದಾಯ ಅಧಿಕಾರಿಯನ್ನು ಕಳುಹಿಸಿ ಪ್ರಾಥಮಿಕ ವರದಿಯನ್ನು ಈಗಾಗಲೇ ಪಡೆಯಲಾಗಿದೆ. ಈ ಬಗ್ಗೆ ನಗರಸಭೆಯಿಂದಲೂ ವರದಿ ನೀಡುವಂತೆ ಪೌರಾಯುಕ್ತರಿಗೆ ಸೂಚಿಸಲಾಗಿದೆ. ಉಪವಿಭಾಗಾಧಿಕಾರಿ ಅಧ್ಯಕ್ಷತೆಯ ಸಫಾಯಿ ಕರ್ಮಚಾರಿ ಆಯೋಗಕ್ಕೆ ಈ ಬಗ್ಗೆ ಸಮಗ್ರ ವರದಿ ಸಲ್ಲಿಸಲಾಗುವುದು’ ಎಂದರು.</p>.<p>‘ಘಟನೆಗೆ ಕಾರಣರಾದವರ ವಿರುದ್ಧ ನಗರಸಭೆಯು ಸ್ವಯಂಪ್ರೇರಿತ ಪ್ರಕರಣವನ್ನು ಸೋಮವಾರ ದಾಖಲಿಸಲಿದೆ' ಎಂದು ಪೌರಾಯುಕ್ತ ಕಾಂತರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ಕಾರ್ಮಿಕರನ್ನು ಬಳಸಿ ಶೌಚಗುಂಡಿ ಸ್ವಚ್ಛಗೊಳಿಸಿದ ಘಟನೆಯ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪ್ರಕರಣ ಸಂಬಂಧ ಕಂದಾಯ ಅಧಿಕಾರಿಗಳು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. </p>.<p>ನಗರದ ಭಗತ್ಸಿಂಗ್ ರಸ್ತೆಯ ಸಮೀಪ ಹಳೆ ಕಟ್ಟಡ ತೆರವು ಮಾಡಿ ಹೊಸ ಕಟ್ಟಡ ನಿರ್ಮಿಸಲಾಗುತ್ತಿದೆ. ಶೌಚದ ಹಳೆಯ ಗುಂಡಿಯನ್ನು ಕಾರ್ಮಿಕರಿಬ್ಬರು ಶನಿವಾರ ಸ್ವಚ್ಛಗೊಳಿಸಿದ್ದಾರೆ. ಅಲ್ಲದೇ, ಗುಂಡಿಯಿಂದ ಹೊರತೆಗೆದ ತ್ಯಾಜ್ಯವನ್ನು ತಲೆಯ ಮೇಲೆ ಹೊತ್ತು ಸಮೀಪದ ವಾಹನಕ್ಕೆ ಹಾಕಿದ್ದಾರೆ. ಈ ದೃಶ್ಯವನ್ನು ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ವಿಡಿಯೊ ಮಾಡಿ ತಹಶೀಲ್ದಾರ್ ಅವರಿಗೆ ದೂರು ನೀಡಿದ್ದಾರೆ. </p>.<p>ಪ್ರಕರಣ ಸಂಬಂಧ ತಹಶೀಲ್ದಾರ್ ಶ್ರೀಧರ ಮುಂದಲಮನಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದು, ‘ಶೌಚಾಲಯದ ಗುಂಡಿಯನ್ನು ಕಾರ್ಮಿಕರಿಂದ ಸ್ವಚ್ಛಗೊಳಿಸಿದ ವಿಷಯಕ್ಕೆ ಸಂಬಂಧಿಸಿ ಸ್ಥಳಕ್ಕೆ ಕಂದಾಯ ಅಧಿಕಾರಿಯನ್ನು ಕಳುಹಿಸಿ ಪ್ರಾಥಮಿಕ ವರದಿಯನ್ನು ಈಗಾಗಲೇ ಪಡೆಯಲಾಗಿದೆ. ಈ ಬಗ್ಗೆ ನಗರಸಭೆಯಿಂದಲೂ ವರದಿ ನೀಡುವಂತೆ ಪೌರಾಯುಕ್ತರಿಗೆ ಸೂಚಿಸಲಾಗಿದೆ. ಉಪವಿಭಾಗಾಧಿಕಾರಿ ಅಧ್ಯಕ್ಷತೆಯ ಸಫಾಯಿ ಕರ್ಮಚಾರಿ ಆಯೋಗಕ್ಕೆ ಈ ಬಗ್ಗೆ ಸಮಗ್ರ ವರದಿ ಸಲ್ಲಿಸಲಾಗುವುದು’ ಎಂದರು.</p>.<p>‘ಘಟನೆಗೆ ಕಾರಣರಾದವರ ವಿರುದ್ಧ ನಗರಸಭೆಯು ಸ್ವಯಂಪ್ರೇರಿತ ಪ್ರಕರಣವನ್ನು ಸೋಮವಾರ ದಾಖಲಿಸಲಿದೆ' ಎಂದು ಪೌರಾಯುಕ್ತ ಕಾಂತರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>