<p><strong>ಶಿರಸಿ:</strong> 'ಸಚಿವರ ಆಯ್ಕೆ ಪಕ್ಷದ ಹೈಕಮಾಂಡ್ ಹಾಗೂ ನೂತನ ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು. ಹುದ್ದೆ ಬೇಡ ಎನ್ನಲು ನಾನೇನು ಸನ್ಯಾಸಿಯಲ್ಲ' ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಮಂಗಳವಾರ ಇಲ್ಲಿನ ಟಿ.ಎಂ.ಎಸ್.ಸಂಸ್ಥೆ ಆರಂಭಿಸಿರುವ ಸುಪರ್ ಮಾರ್ಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಮಾಧ್ಯಮದವರೊಡನೆ ಅವರು ಮಾತನಾಡಿದರು.</p>.<p>'ಬಾಂಬೆ ಟೀಮ್ ಎಂಬುದು ಈಗ ಮುಗಿದ ಅಧ್ಯಾಯ. ನಾವೆಲ್ಲ ಬಿಜೆಪಿ ಶಾಸಕರು. ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಹಿರಿಯರೇ ತೀರ್ಮಾನಿಸುತ್ತಾರೆ' ಎಂದರು.</p>.<p><a href="https://www.prajavani.net/sports/sports-extra/tokyo-olympics-silver-medalist-mirabai-chanu-rewardwd-rs-2-crore-and-promotion-in-her-railway-job-by-852100.html" itemprop="url">ಬೆಳ್ಳಿ ವಿಜೇತೆ ಮೀರಾಬಾಯಿ ಚಾನುಗೆ ₹2 ಕೋಟಿ ಬಹುಮಾನ, ರೈಲ್ವೆ ಹುದ್ದೆಯಲ್ಲಿ ಬಡ್ತಿ </a></p>.<p>'ಪಕ್ಷದ ಶಿಸ್ತು, ಸಿದ್ಧಾಂತಕ್ಕೆ ತಲೆಬಾಗಿ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಬೇಸರವಿಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಕಾಲಕಾಲಕ್ಕೆ ತಕ್ಕಂತೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ತಲೆಬಾಗುತ್ತೇವೆ' ಎಂದರು.</p>.<p>'ಯಡಿಯೂರಪ್ಪ ನಾಯಕತ್ವದಲ್ಲಿ ಹದಿನೇಳು ತಿಂಗಳು ಕಾರ್ಮಿಕ ಖಾತೆ ನಿಭಾಯಿಸಿದ ನೆಮ್ಮದಿ ಇದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> 'ಸಚಿವರ ಆಯ್ಕೆ ಪಕ್ಷದ ಹೈಕಮಾಂಡ್ ಹಾಗೂ ನೂತನ ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು. ಹುದ್ದೆ ಬೇಡ ಎನ್ನಲು ನಾನೇನು ಸನ್ಯಾಸಿಯಲ್ಲ' ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಮಂಗಳವಾರ ಇಲ್ಲಿನ ಟಿ.ಎಂ.ಎಸ್.ಸಂಸ್ಥೆ ಆರಂಭಿಸಿರುವ ಸುಪರ್ ಮಾರ್ಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಮಾಧ್ಯಮದವರೊಡನೆ ಅವರು ಮಾತನಾಡಿದರು.</p>.<p>'ಬಾಂಬೆ ಟೀಮ್ ಎಂಬುದು ಈಗ ಮುಗಿದ ಅಧ್ಯಾಯ. ನಾವೆಲ್ಲ ಬಿಜೆಪಿ ಶಾಸಕರು. ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಹಿರಿಯರೇ ತೀರ್ಮಾನಿಸುತ್ತಾರೆ' ಎಂದರು.</p>.<p><a href="https://www.prajavani.net/sports/sports-extra/tokyo-olympics-silver-medalist-mirabai-chanu-rewardwd-rs-2-crore-and-promotion-in-her-railway-job-by-852100.html" itemprop="url">ಬೆಳ್ಳಿ ವಿಜೇತೆ ಮೀರಾಬಾಯಿ ಚಾನುಗೆ ₹2 ಕೋಟಿ ಬಹುಮಾನ, ರೈಲ್ವೆ ಹುದ್ದೆಯಲ್ಲಿ ಬಡ್ತಿ </a></p>.<p>'ಪಕ್ಷದ ಶಿಸ್ತು, ಸಿದ್ಧಾಂತಕ್ಕೆ ತಲೆಬಾಗಿ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಬೇಸರವಿಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಕಾಲಕಾಲಕ್ಕೆ ತಕ್ಕಂತೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ತಲೆಬಾಗುತ್ತೇವೆ' ಎಂದರು.</p>.<p>'ಯಡಿಯೂರಪ್ಪ ನಾಯಕತ್ವದಲ್ಲಿ ಹದಿನೇಳು ತಿಂಗಳು ಕಾರ್ಮಿಕ ಖಾತೆ ನಿಭಾಯಿಸಿದ ನೆಮ್ಮದಿ ಇದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>