<p>ಸಿದ್ದಾಪುರ: ‘ಸಾಮಾನ್ಯ ಜನರು ತಮ್ಮು ಕೆಲಸಕ್ಕಾಗಿ ಇಲಾಖೆಯಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಜನಸ್ಪಂದನ ಕಾರ್ಯಕ್ರಮ ಜಾರಿಗೊಳಿಸಿದೆ. ಜನರ ಸಮಸ್ಯೆಯನ್ನು ಸಾಧ್ಯವಾದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಪ್ರಯತ್ನಿಸುತ್ತೇವೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ಪಟ್ಟಣದ ಶಂಕರ ಮಠದಲ್ಲಿ ಸೋಮವಾರ ನಡೆದ ಕೊಂಡ್ಲಿ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಯೋಜನೆಯ ಉದ್ದೇಶವಾಗಿದೆ. ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಗೆ ₹16 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ’ ಎಂದು ತಿಳಿಸಿದರು.</p>.<p>ಈ ವೇಳೆ ಸಾರ್ವಜನಿಕರಿಂದ ಒಟ್ಟು 93 ಅರ್ಜಿಗಳು ಸ್ವೀಕೃತವಾದವು. ಅರ್ಜಿಗಳನ್ನು ಪರಿಶೀಲಿಸಿದ ಶಾಸಕರು, ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಉಳಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಶಿರಸ್ತೇದಾರ ಜಿ.ಎಲ್. ಶ್ಯಾಮಸುಂದರ ಸ್ವಾಗತಿಸಿ, ನಿರೂಪಿಸಿದರು. ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ತಾಲ್ಲೂಕು ಪಂಚಾಯಿತಿ ಇಒ ದೇವರಾಜ ಹಿತ್ತಲಕೊಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-20-632088701</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ‘ಸಾಮಾನ್ಯ ಜನರು ತಮ್ಮು ಕೆಲಸಕ್ಕಾಗಿ ಇಲಾಖೆಯಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಜನಸ್ಪಂದನ ಕಾರ್ಯಕ್ರಮ ಜಾರಿಗೊಳಿಸಿದೆ. ಜನರ ಸಮಸ್ಯೆಯನ್ನು ಸಾಧ್ಯವಾದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಪ್ರಯತ್ನಿಸುತ್ತೇವೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ಪಟ್ಟಣದ ಶಂಕರ ಮಠದಲ್ಲಿ ಸೋಮವಾರ ನಡೆದ ಕೊಂಡ್ಲಿ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಯೋಜನೆಯ ಉದ್ದೇಶವಾಗಿದೆ. ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಗೆ ₹16 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ’ ಎಂದು ತಿಳಿಸಿದರು.</p>.<p>ಈ ವೇಳೆ ಸಾರ್ವಜನಿಕರಿಂದ ಒಟ್ಟು 93 ಅರ್ಜಿಗಳು ಸ್ವೀಕೃತವಾದವು. ಅರ್ಜಿಗಳನ್ನು ಪರಿಶೀಲಿಸಿದ ಶಾಸಕರು, ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಉಳಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಶಿರಸ್ತೇದಾರ ಜಿ.ಎಲ್. ಶ್ಯಾಮಸುಂದರ ಸ್ವಾಗತಿಸಿ, ನಿರೂಪಿಸಿದರು. ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ತಾಲ್ಲೂಕು ಪಂಚಾಯಿತಿ ಇಒ ದೇವರಾಜ ಹಿತ್ತಲಕೊಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-20-632088701</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>