<p><strong>ಸಿದ್ದಾಪುರ:</strong> ಎಲೆಚುಕ್ಕೆ ರೋಗದಿಂದ ಕಂಗೆಟ್ಟಿರುವ ಅಡಿಕೆ ಬೆಳೆಗಾರರಿಗೆ ಕೃಷಿಯೇತರ ಉತ್ಪನ್ನಗಳ ಖರೀದಿಯ ಮೂಲಕ ಹೊಸ ಭರವಸೆ ನೀಡಿದ ಕದಂಬ ಮಾರ್ಕೆಟಿಂಗ್ ಸಂಸ್ಥೆಯ ಕಾರ್ಯ ಸ್ತುತ್ಯಾರ್ಹ ಎಂದು ಸ್ಥಳೀಯ ಟಿಎಂಎಸ್ ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ಹೇಳಿದರು.</p>.<p>ಶಿರಸಿಯ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಂಸ್ಥೆ ಪಟ್ಟಣದ ಪ್ಯಾಡಿ ಸೊಸೈಟಿಯಲ್ಲಿ ನೂತನವಾಗಿ ಆರಂಭಿಸಿದ ಕೃಷಿ ಉತ್ಪನ್ನ ಖರೀದಿ ಕೇಂದ್ರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.</p>.<p>ಸಹಕಾರಿ ಸಂಘವೊಂದು ಇಂತಹ ವಿಭಿನ್ನ ಹಾಗೂ ಸವಾಲಿನ ಕೆಲಸಕ್ಕೆ ಕೈಹಾಕಿ ಯಶಸ್ವಿಯಾಗಿರುವುದು ಹೆಮ್ಮೆಯ ವಿಷಯ. ರೈತರು ಇನ್ಮುಂದೆಯಾದರೂ ಕೃಷಿಯೇತರ ಬೆಳೆಗಳತ್ತ ಹೆಚ್ಚಿನ ಗಮನ ಹರಿಸಿದರೆ ಜೀವನ ಮಟ್ಟ ಸಮತೋಲನದಲ್ಲಿರಲು ಸಾಧ್ಯವಾಗುತ್ತದೆ ಎಂದರು.</p>.<p>ಶಶಿಭೂಷಣ ಹೆಗಡೆ ದೊಡ್ಮನೆ ಮಾತನಾಡಿ, ಕಳೆದ ಎಂಟು ದಶಕಗಳಿಂದ ಅಡಿಕೆಗೆ ಇರುವಂತಹ ಸುಭದ್ರ ಮಾರುಕಟ್ಟೆ ವ್ಯವಸ್ಥೆ ಇತರ ಕೃಷಿಯೇತರ ಉತ್ಪನ್ನಗಳಿಗೆ ಇಲ್ಲದಿರುವುದು ರೈತರ ಹಿನ್ನಡೆಗೆ ಕಾರಣವಾಗಿದೆ. ಈ ಮಾರುಕಟ್ಟೆ ಕೊರತೆಯನ್ನು ನೀಗಿಸಲು ಕದಂಬ ಸಂಸ್ಥೆಯು ಕಳೆದ ಎರಡು ದಶಕಗಳಿಂದ ಶ್ರಮಿಸುತ್ತಿದ್ದು, ಇಂದು ಈ ಉತ್ಪನ್ನಗಳಿಗೆ ಮೌಲ್ಯ ತಂದುಕೊಡುವಲ್ಲಿ ಯಶಸ್ವಿಯಾಗಿದೆ ಎಂದರು.</p>.<p>ಕದಂಬ ಮಾರ್ಕೆಟಿಂಗ್ ಸಂಸ್ಥೆಯ ಅಧ್ಯಕ್ಷ ಶಂಭುಲಿಂಗ ಹೆಗಡೆ ನೀಡಗೋಡ ಮಾತನಾಡಿದರು. ತಹಶೀಲ್ದಾರ್ ಎಂ.ಆರ್. ಕುಲಕರ್ಣಿ, ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಆರ್.ಎಸ್. ಹೆಗಡೆ, ಪ್ಯಾಡಿ ಸಂಸ್ಥೆಯ ಅಧ್ಯಕ್ಷ ರಮಾನಂದ ಹೆಗಡೆ, ಉಪಾಧ್ಯಕ್ಷ ಚಂದ್ರಶೇಖರ ನಾಯ್ಕ ಕುಂಬ್ರಿಗದ್ದೆ ಇದ್ದರು.</p>.<p>ಕದಂಬ ನಿರ್ದೇಶಕ ನರೇಂದ್ರ ಹೊಂಡಗಾಶಿ ನಿರ್ವಹಿಸಿದರು. ನಾಗೇಂದ್ರ ಜೋಶಿ ಸ್ವಾಗತಿಸಿದರು. ವಿಶ್ವೇಶ್ವರ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-20-513472996</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ಎಲೆಚುಕ್ಕೆ ರೋಗದಿಂದ ಕಂಗೆಟ್ಟಿರುವ ಅಡಿಕೆ ಬೆಳೆಗಾರರಿಗೆ ಕೃಷಿಯೇತರ ಉತ್ಪನ್ನಗಳ ಖರೀದಿಯ ಮೂಲಕ ಹೊಸ ಭರವಸೆ ನೀಡಿದ ಕದಂಬ ಮಾರ್ಕೆಟಿಂಗ್ ಸಂಸ್ಥೆಯ ಕಾರ್ಯ ಸ್ತುತ್ಯಾರ್ಹ ಎಂದು ಸ್ಥಳೀಯ ಟಿಎಂಎಸ್ ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ಹೇಳಿದರು.</p>.<p>ಶಿರಸಿಯ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಂಸ್ಥೆ ಪಟ್ಟಣದ ಪ್ಯಾಡಿ ಸೊಸೈಟಿಯಲ್ಲಿ ನೂತನವಾಗಿ ಆರಂಭಿಸಿದ ಕೃಷಿ ಉತ್ಪನ್ನ ಖರೀದಿ ಕೇಂದ್ರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.</p>.<p>ಸಹಕಾರಿ ಸಂಘವೊಂದು ಇಂತಹ ವಿಭಿನ್ನ ಹಾಗೂ ಸವಾಲಿನ ಕೆಲಸಕ್ಕೆ ಕೈಹಾಕಿ ಯಶಸ್ವಿಯಾಗಿರುವುದು ಹೆಮ್ಮೆಯ ವಿಷಯ. ರೈತರು ಇನ್ಮುಂದೆಯಾದರೂ ಕೃಷಿಯೇತರ ಬೆಳೆಗಳತ್ತ ಹೆಚ್ಚಿನ ಗಮನ ಹರಿಸಿದರೆ ಜೀವನ ಮಟ್ಟ ಸಮತೋಲನದಲ್ಲಿರಲು ಸಾಧ್ಯವಾಗುತ್ತದೆ ಎಂದರು.</p>.<p>ಶಶಿಭೂಷಣ ಹೆಗಡೆ ದೊಡ್ಮನೆ ಮಾತನಾಡಿ, ಕಳೆದ ಎಂಟು ದಶಕಗಳಿಂದ ಅಡಿಕೆಗೆ ಇರುವಂತಹ ಸುಭದ್ರ ಮಾರುಕಟ್ಟೆ ವ್ಯವಸ್ಥೆ ಇತರ ಕೃಷಿಯೇತರ ಉತ್ಪನ್ನಗಳಿಗೆ ಇಲ್ಲದಿರುವುದು ರೈತರ ಹಿನ್ನಡೆಗೆ ಕಾರಣವಾಗಿದೆ. ಈ ಮಾರುಕಟ್ಟೆ ಕೊರತೆಯನ್ನು ನೀಗಿಸಲು ಕದಂಬ ಸಂಸ್ಥೆಯು ಕಳೆದ ಎರಡು ದಶಕಗಳಿಂದ ಶ್ರಮಿಸುತ್ತಿದ್ದು, ಇಂದು ಈ ಉತ್ಪನ್ನಗಳಿಗೆ ಮೌಲ್ಯ ತಂದುಕೊಡುವಲ್ಲಿ ಯಶಸ್ವಿಯಾಗಿದೆ ಎಂದರು.</p>.<p>ಕದಂಬ ಮಾರ್ಕೆಟಿಂಗ್ ಸಂಸ್ಥೆಯ ಅಧ್ಯಕ್ಷ ಶಂಭುಲಿಂಗ ಹೆಗಡೆ ನೀಡಗೋಡ ಮಾತನಾಡಿದರು. ತಹಶೀಲ್ದಾರ್ ಎಂ.ಆರ್. ಕುಲಕರ್ಣಿ, ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಆರ್.ಎಸ್. ಹೆಗಡೆ, ಪ್ಯಾಡಿ ಸಂಸ್ಥೆಯ ಅಧ್ಯಕ್ಷ ರಮಾನಂದ ಹೆಗಡೆ, ಉಪಾಧ್ಯಕ್ಷ ಚಂದ್ರಶೇಖರ ನಾಯ್ಕ ಕುಂಬ್ರಿಗದ್ದೆ ಇದ್ದರು.</p>.<p>ಕದಂಬ ನಿರ್ದೇಶಕ ನರೇಂದ್ರ ಹೊಂಡಗಾಶಿ ನಿರ್ವಹಿಸಿದರು. ನಾಗೇಂದ್ರ ಜೋಶಿ ಸ್ವಾಗತಿಸಿದರು. ವಿಶ್ವೇಶ್ವರ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-20-513472996</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>