<p><strong>ಸಿದ್ದಾಪುರ</strong>: ತಾಲ್ಲೂಕಿನ ತ್ಯಾಗಲಿಯ ಲಕ್ಷ್ಮೀನರಸಿಂಹ ದೇವರ ರಥೋತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶನಿವಾರ ನಡೆಯಿತು.</p>.<p>ತ್ಯಾಗಲಿ ರಥಬೀದಿಯ ಸದಾಸನ್ಮಯ ವೇದಿಕೆ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಂತರ ಸೇವಾಭಿನಂದನೆ ಹಾಗೂ ಸಾಧನಾಭಿನಂದನೆ ಕಾರ್ಯಕ್ರಮ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.</p>.<p>ನಂತರ ಶಬರ ಸಂಸ್ಥೆ ಸೋಂದಾ ಹಾಗೂ ಸರಸ್ವತಿ ಕಲಾಟ್ರಸ್ಟ್ ಹೊಸಗದ್ದೆ ಇದರ ಬಾಲಕಲಾವಿದರಿಂದ ಸುಧನ್ವಾರ್ಜುನ ಯಕ್ಷಗಾನ ಪ್ರದರ್ಶನಗೊಂಡಿತು.</p>.<p>ಹಿಮ್ಮೇಳದಲ್ಲಿ ಶ್ರೀಪಾದ ಹೆಗಡೆ ಬಾಳೆಗದ್ದೆ, ಮಂಜುನಾಥ ಹೆಗಡೆ ಕಂಚಿಮನೆ, ಗಣೇಶ ಗಾಂವ್ಕರ್ ಯಲ್ಲಾಪುರ ಸಹಕರಿಸಿದರು.</p>.<p>ಮುಮ್ಮೇಳದಲ್ಲಿ ಅಭಯ ಹೆಗಡೆ ಹೊಸಗದ್ದೆ, ಭೂಮಿಕಾ ಹೆಗಡೆ ಹೊಸಗದ್ದೆ, ಮೌಲ್ಯ ಹೆಗಡೆ ಕಸೆಕುಣಿ, ಆದಿತ್ಯ ಹೆಗಡೆ ಹೊನ್ನೆಹದ್ದ, ಅಮಿತ್ ಭಟ್ಟ ಮಾಣಿಕ್ಯನಮನೆ, ಜನಾರ್ಧನ ತೊಂಡೆಮಡಕಿ ವಿವಿಧ ಪಾತ್ರನಿರ್ವಹಿಸಿ ಮೆಚ್ಚುಗೆಗಳಿಸಿದರು.</p>.<p>ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟರಮಣ ಎಂ. ಹೆಗಡೆ ಶಿಂಗು, ಕಾರ್ಯದರ್ಶಿ ರವಿ ಗೋಪಾಲ ಹೆಗಡೆ ಹಾಗೂ ಪದಾಧಿಕಾರಿಗಳು, ಶಬರ ಸಂಸ್ಥೆಯ ನಾಗರಾಜ ಜೋಶಿ ಸೋಂದಾ, ಸರಸ್ವತಿ ಕಲಾಟ್ರಸ್ಟ್ನ ಪಿ.ವಿ.ಹೆಗಡೆ ಹೊಸಗದ್ದೆ, ಪ್ರಸನ್ನ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ತಾಲ್ಲೂಕಿನ ತ್ಯಾಗಲಿಯ ಲಕ್ಷ್ಮೀನರಸಿಂಹ ದೇವರ ರಥೋತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶನಿವಾರ ನಡೆಯಿತು.</p>.<p>ತ್ಯಾಗಲಿ ರಥಬೀದಿಯ ಸದಾಸನ್ಮಯ ವೇದಿಕೆ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಂತರ ಸೇವಾಭಿನಂದನೆ ಹಾಗೂ ಸಾಧನಾಭಿನಂದನೆ ಕಾರ್ಯಕ್ರಮ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.</p>.<p>ನಂತರ ಶಬರ ಸಂಸ್ಥೆ ಸೋಂದಾ ಹಾಗೂ ಸರಸ್ವತಿ ಕಲಾಟ್ರಸ್ಟ್ ಹೊಸಗದ್ದೆ ಇದರ ಬಾಲಕಲಾವಿದರಿಂದ ಸುಧನ್ವಾರ್ಜುನ ಯಕ್ಷಗಾನ ಪ್ರದರ್ಶನಗೊಂಡಿತು.</p>.<p>ಹಿಮ್ಮೇಳದಲ್ಲಿ ಶ್ರೀಪಾದ ಹೆಗಡೆ ಬಾಳೆಗದ್ದೆ, ಮಂಜುನಾಥ ಹೆಗಡೆ ಕಂಚಿಮನೆ, ಗಣೇಶ ಗಾಂವ್ಕರ್ ಯಲ್ಲಾಪುರ ಸಹಕರಿಸಿದರು.</p>.<p>ಮುಮ್ಮೇಳದಲ್ಲಿ ಅಭಯ ಹೆಗಡೆ ಹೊಸಗದ್ದೆ, ಭೂಮಿಕಾ ಹೆಗಡೆ ಹೊಸಗದ್ದೆ, ಮೌಲ್ಯ ಹೆಗಡೆ ಕಸೆಕುಣಿ, ಆದಿತ್ಯ ಹೆಗಡೆ ಹೊನ್ನೆಹದ್ದ, ಅಮಿತ್ ಭಟ್ಟ ಮಾಣಿಕ್ಯನಮನೆ, ಜನಾರ್ಧನ ತೊಂಡೆಮಡಕಿ ವಿವಿಧ ಪಾತ್ರನಿರ್ವಹಿಸಿ ಮೆಚ್ಚುಗೆಗಳಿಸಿದರು.</p>.<p>ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟರಮಣ ಎಂ. ಹೆಗಡೆ ಶಿಂಗು, ಕಾರ್ಯದರ್ಶಿ ರವಿ ಗೋಪಾಲ ಹೆಗಡೆ ಹಾಗೂ ಪದಾಧಿಕಾರಿಗಳು, ಶಬರ ಸಂಸ್ಥೆಯ ನಾಗರಾಜ ಜೋಶಿ ಸೋಂದಾ, ಸರಸ್ವತಿ ಕಲಾಟ್ರಸ್ಟ್ನ ಪಿ.ವಿ.ಹೆಗಡೆ ಹೊಸಗದ್ದೆ, ಪ್ರಸನ್ನ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>