ಸಿದ್ದಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಭೇಟಿ ನೀಡಿದರು.
ಕಾನಗೋಡ ಗ್ರಾಮ ಪಂಚಾಯಿತಿಗೆ ತೆರಳಿದ ಅವರು ಸ್ವತಃ ವಾಹನ ಚಾಲನೆ ಮಾಡುವ ಮೂಲಕ ಚಾಲಕರಾದವರು ವಾಹನ ಚಾಲನೆ ಸಂದರ್ಭದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಚಾಲಕರಿಗೆ ಮಾಹಿತಿ ನೀಡಿದರು.
ಕಾನಗೋಡ ಗ್ರಾಮ ಪಂಚಾಯಿತಿಯ ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ಮಹಿಳಾ ಚಾಲಕಿ ಲೀಲಾವತಿ ಮಡಿವಾಳ ಅವರ ಚಾಲನೆಯನ್ನು ಪರಿಶೀಲಿಸಿ ಉತ್ತಮವಾಗಿ ವಾಹನ ಚಲಾಹಿಸುವಂತೆ ಪ್ರೇರೆಪಿಸಿದರು.