ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಚಲಾಯಿಸಿ ಚಾಲಕರನ್ನು ಪ್ರೇರೆಪಿಸಿದ ಈಶ್ವರ ಕಾಂದೂ

Published 27 ಅಕ್ಟೋಬರ್ 2023, 14:38 IST
Last Updated 27 ಅಕ್ಟೋಬರ್ 2023, 14:38 IST
ಅಕ್ಷರ ಗಾತ್ರ

ಸಿದ್ದಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಭೇಟಿ ನೀಡಿದರು.

ಕಾನಗೋಡ ಗ್ರಾಮ ಪಂಚಾಯಿತಿಗೆ ತೆರಳಿದ ಅವರು ಸ್ವತಃ ವಾಹನ ಚಾಲನೆ ಮಾಡುವ ಮೂಲಕ ಚಾಲಕರಾದವರು ವಾಹನ ಚಾಲನೆ ಸಂದರ್ಭದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಚಾಲಕರಿಗೆ ಮಾಹಿತಿ ನೀಡಿದರು.

ಕಾನಗೋಡ ಗ್ರಾಮ ಪಂಚಾಯಿತಿಯ ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ಮಹಿಳಾ ಚಾಲಕಿ ಲೀಲಾವತಿ ಮಡಿವಾಳ ಅವರ ಚಾಲನೆಯನ್ನು ಪರಿಶೀಲಿಸಿ ಉತ್ತಮವಾಗಿ ವಾಹನ ಚಲಾಹಿಸುವಂತೆ ಪ್ರೇರೆಪಿಸಿದರು.

ತಾಲ್ಲೂಕು ಪಂಚಾಯಿತಿ ಇಒ ದೇವರಾಜ್ ಹಿತ್ತಲಕೊಪ್ಪ, ನರೇಗಾ ಎಡಿ ವಿದ್ಯಾ ದೇಸಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು, ಪಿಡಿಒ, ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT