<p><strong>ಸಿದ್ದಾಪುರ</strong>: ಅರಣ್ಯವಾಸಿ ಮತ್ತು ಅಘನಾಶಿನಿ ನದಿ ಜೋಡಣೆ ವಿರೋಧಿ ಸಭೆಯನ್ನು ಮೇ 15ರಂದು ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ರಾಘವೇಂದ್ರ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಹೋರಟಗಾರರ ವೇದಿಕೆಯ ಪ್ರಧಾನ ಸಂಚಾಲಕ ಮಾಬ್ಲೇಶ್ವರ ನಾಯ್ಕ ಬೇಡ್ಕಣಿ ತಿಳಿಸಿದ್ದಾರೆ.</p>.<p>ರಾಜ್ಯ ಸರ್ಕಾರದ ನೀತಿಗೆ ವಿರುದ್ಧವಾಗಿ ಅರಣ್ಯ ಅತಿಕ್ರಮಣದಾರರ ಮಹಜರ್ ಜರುಗುತ್ತಿರುವುದು ಮತ್ತು ಅರಣ್ಯವಾಸಿಗಳು ಅತಿಕ್ರಮಿಸಿರುವ ಮೂರು ಎಕರೆ ಸಾಗುವಳಿಗೆ ಆತಂಕ ಮಾಡಬಾರದೆಂಬ ರಾಜ್ಯ ಸರ್ಕಾರದ ಆದೇಶ ರದ್ದಿಗೆ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಾಗಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಅಘನಾಶಿನಿ ನದಿ ಜೋಡಣೆ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಆಕ್ಷೇಪಣಾ ಪತ್ರದ ಸ್ವೀಕೃತಿ ಪ್ರತಿ ವಿತರಿಸುವ ವಿಧಾನ ಹಾಗೂ ಯುನೆಸ್ಕೋ ವಿಶ್ವ ಪರಂಪರೆಯ ಕೇಂದ್ರದಿಂದ ಹೋರಾಟಗಾರರ ವೇದಿಕೆಗೆ ಬಂದಿರುವ ಉತ್ತರದ ಮಾಹಿತಿಯ ವಿಷಯವನ್ನು ಸಭೆಯಲ್ಲಿ ಚರ್ಚಿಸಲಾಗುವುದು.</p>.<p>ಹೋರಟಗಾರರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ನಾಯ್ಕ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ನದಿ ಜೋಡಣೆ ಆಯೋಗಕ್ಕೆ ಸ್ಥಳೀಯರಿಂದ ಆಕ್ಷೇಪಣೆಗೆ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-20-1590953928</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ಅರಣ್ಯವಾಸಿ ಮತ್ತು ಅಘನಾಶಿನಿ ನದಿ ಜೋಡಣೆ ವಿರೋಧಿ ಸಭೆಯನ್ನು ಮೇ 15ರಂದು ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ರಾಘವೇಂದ್ರ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಹೋರಟಗಾರರ ವೇದಿಕೆಯ ಪ್ರಧಾನ ಸಂಚಾಲಕ ಮಾಬ್ಲೇಶ್ವರ ನಾಯ್ಕ ಬೇಡ್ಕಣಿ ತಿಳಿಸಿದ್ದಾರೆ.</p>.<p>ರಾಜ್ಯ ಸರ್ಕಾರದ ನೀತಿಗೆ ವಿರುದ್ಧವಾಗಿ ಅರಣ್ಯ ಅತಿಕ್ರಮಣದಾರರ ಮಹಜರ್ ಜರುಗುತ್ತಿರುವುದು ಮತ್ತು ಅರಣ್ಯವಾಸಿಗಳು ಅತಿಕ್ರಮಿಸಿರುವ ಮೂರು ಎಕರೆ ಸಾಗುವಳಿಗೆ ಆತಂಕ ಮಾಡಬಾರದೆಂಬ ರಾಜ್ಯ ಸರ್ಕಾರದ ಆದೇಶ ರದ್ದಿಗೆ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಾಗಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಅಘನಾಶಿನಿ ನದಿ ಜೋಡಣೆ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಆಕ್ಷೇಪಣಾ ಪತ್ರದ ಸ್ವೀಕೃತಿ ಪ್ರತಿ ವಿತರಿಸುವ ವಿಧಾನ ಹಾಗೂ ಯುನೆಸ್ಕೋ ವಿಶ್ವ ಪರಂಪರೆಯ ಕೇಂದ್ರದಿಂದ ಹೋರಾಟಗಾರರ ವೇದಿಕೆಗೆ ಬಂದಿರುವ ಉತ್ತರದ ಮಾಹಿತಿಯ ವಿಷಯವನ್ನು ಸಭೆಯಲ್ಲಿ ಚರ್ಚಿಸಲಾಗುವುದು.</p>.<p>ಹೋರಟಗಾರರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ನಾಯ್ಕ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ನದಿ ಜೋಡಣೆ ಆಯೋಗಕ್ಕೆ ಸ್ಥಳೀಯರಿಂದ ಆಕ್ಷೇಪಣೆಗೆ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-20-1590953928</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>