<p>ಸಿದ್ದಾಪುರ: ಅಸಲಿ ಬಂಗಾರವೆಂದು ನಂಬಿಸಿ ನಕಲಿ ಬಂಗಾರದ ನಾಣ್ಯಗಳನ್ನು ನೀಡಿ ₹10 ಲಕ್ಷ ದೋಚಿದ್ದ ಅಂತರ ಜಿಲ್ಲಾ ವಂಚಕರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.</p>.<p>ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಮುದ್ದೇಶನಹಳ್ಳಿಯ ನಿವಾಸಿ ಗಜೇಂದ್ರ ಹಾಲೇಶಪ್ಪ ಕೊರಚರ (34) ಬಂಧಿತ. ಆರೋಪಿ ಆಕಾಶ ಎಂಬುವವನಿಗೆ ಒಂದು ಕೆ.ಜಿ. ತೂಕದ ಅಸಲಿ ಬಂಗಾರದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ, ಅವರಿಂದ ₹10 ಲಕ್ಷ ಪಡೆದುಕೊಂಡು ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ ವಂಚಿಸಿದ್ದ.</p>.<p>ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಈ ತಂಡವು ಬನವಾಸಿ, ಆನವಟ್ಟಿ, ಶಿಕಾರಿಪುರ ಮತ್ತು ಶಿರಾಲಕೊಪ್ಪದಂತಹ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ, ಖಚಿತ ಮಾಹಿತಿ ಹಾಗೂ ತಾಂತ್ರಿಕ ಮಾಹಿತಿಯ ಸಹಾಯದಿಂದ ಆರೋಪಿ ಪತ್ತೆಹಚ್ಚಿದೆ. ಬಂಧಿತನಿಂದ ₹10 ಲಕ್ಷ ನಗದು ಮಾತ್ರವಲ್ಲದೆ, ಕೃತ್ಯಕ್ಕೆ ಬಳಸಿದ್ದ ₹20 ಸಾವಿರ ಮೌಲ್ಯದ ಬಜಾಜ್ ಡಿಸ್ಕವರಿ ಮೋಟಾರ್ ಸೈಕಲ್ ಮತ್ತು ಒಂದು ಮೊಬೈಲ್ ಜಪ್ತಿ ಮಾಡಲಾಗಿದೆ.</p>.<p>ಸ್ಥಳೀಯ ಠಾಣೆಯಲ್ಲಿ ಫೆ.23ರಂದು ಪ್ರಕರಣ ದಾಖಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಸಿದ್ದಾಪುರ ಸಿಪಿಐ ಜಿ.ಬಿ. ಸೀತಾರಾಮ, ಪಿಎಸ್ಐ ಶಾಂತಿನಾಥ ಕೆ. ಪಾಸಾನೆ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-20-1437167339</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ಅಸಲಿ ಬಂಗಾರವೆಂದು ನಂಬಿಸಿ ನಕಲಿ ಬಂಗಾರದ ನಾಣ್ಯಗಳನ್ನು ನೀಡಿ ₹10 ಲಕ್ಷ ದೋಚಿದ್ದ ಅಂತರ ಜಿಲ್ಲಾ ವಂಚಕರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.</p>.<p>ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಮುದ್ದೇಶನಹಳ್ಳಿಯ ನಿವಾಸಿ ಗಜೇಂದ್ರ ಹಾಲೇಶಪ್ಪ ಕೊರಚರ (34) ಬಂಧಿತ. ಆರೋಪಿ ಆಕಾಶ ಎಂಬುವವನಿಗೆ ಒಂದು ಕೆ.ಜಿ. ತೂಕದ ಅಸಲಿ ಬಂಗಾರದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ, ಅವರಿಂದ ₹10 ಲಕ್ಷ ಪಡೆದುಕೊಂಡು ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ ವಂಚಿಸಿದ್ದ.</p>.<p>ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಈ ತಂಡವು ಬನವಾಸಿ, ಆನವಟ್ಟಿ, ಶಿಕಾರಿಪುರ ಮತ್ತು ಶಿರಾಲಕೊಪ್ಪದಂತಹ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ, ಖಚಿತ ಮಾಹಿತಿ ಹಾಗೂ ತಾಂತ್ರಿಕ ಮಾಹಿತಿಯ ಸಹಾಯದಿಂದ ಆರೋಪಿ ಪತ್ತೆಹಚ್ಚಿದೆ. ಬಂಧಿತನಿಂದ ₹10 ಲಕ್ಷ ನಗದು ಮಾತ್ರವಲ್ಲದೆ, ಕೃತ್ಯಕ್ಕೆ ಬಳಸಿದ್ದ ₹20 ಸಾವಿರ ಮೌಲ್ಯದ ಬಜಾಜ್ ಡಿಸ್ಕವರಿ ಮೋಟಾರ್ ಸೈಕಲ್ ಮತ್ತು ಒಂದು ಮೊಬೈಲ್ ಜಪ್ತಿ ಮಾಡಲಾಗಿದೆ.</p>.<p>ಸ್ಥಳೀಯ ಠಾಣೆಯಲ್ಲಿ ಫೆ.23ರಂದು ಪ್ರಕರಣ ದಾಖಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಸಿದ್ದಾಪುರ ಸಿಪಿಐ ಜಿ.ಬಿ. ಸೀತಾರಾಮ, ಪಿಎಸ್ಐ ಶಾಂತಿನಾಥ ಕೆ. ಪಾಸಾನೆ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-20-1437167339</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>