<p><strong>ಸಿದ್ದಾಪುರ</strong>: ‘ಹವಾಮಾನ ವೈಪರಿತ್ಯ ಹಾಗೂ ವಿವಿಧ ರೋಗದಿಂದಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ರೈತರು ಉಪಬೆಳೆಗಳತ್ತ ಗಮನಹರಿಸಬೇಕು’ ಎಂದು ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ಪಟ್ಟಣದ ಹೊಸೂರಿನ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ ತಾಳೆ ಬೆಳೆ ಬೇಸಾಯ ಕ್ರಮ ಹಾಗೂ ಮಾರುಕಟ್ಟೆ ವ್ಯವಸ್ಥೆ ಕುರಿತು ಬುಧವಾರ ನಡೆದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>‘ರೈತರು ಸರ್ಕಾರದ ಸೌಲಭ್ಯ ಪಡೆದು ಉಪಬೆಳೆ ಬೆಳೆಯಲು ಮುಂದಾಗಬೇಕು. ಸರ್ಕಾರ ತಾಳೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ರೈತರು ಸರಿಯಾದ ಮಾಹಿತಿ ಪಡೆದು ತಾಳೆ ಕೃಷಿ ಮಾಡಬೇಕು’ ಎಂದರು.</p>.<p>ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಬಿ.ಪಿ. ಸತೀಶ ಮಾತನಾಡಿ, ‘ಜಿಲ್ಲೆ ತೋಟಗಾರಿಕಾ ಕ್ಷೇತ್ರವಾಗಿದ್ದು, ಅಡಿಕೆ ಬಿಟ್ಟು ಬೇರೆ ಬೆಳೆಯತ್ತ ಗಮನ ಹರಿಸಲಿಲ್ಲ. ದೇಶದಲ್ಲಿ ಅಡುಗೆ ಎಣ್ಣೆಗೆ ಭಾರಿ ಬೇಡಿಕೆಯಿದ್ದು, ಉತ್ಪಾದನೆ ತೀರಾ ಕಡಿಮೆಯಿದೆ. ಕಾರಣ ಸರ್ಕಾರ ತಾಳೆ ಬೆಳೆಗೆ ಪ್ರೋತ್ಸಾಹ ನೀಡುತ್ತಿದೆ’ ಎಂದರು.</p>.<p>ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವೇಳೆ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ವೀರಭದ್ರ ನಾಯ್ಕ, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಶೈಲ ಕುಪ್ಪಗಡ್ಡಿ, ಶ್ರೀಕಾಂತ ಇದ್ದರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಅರುಣ ಎಚ್.ಜಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ‘ಹವಾಮಾನ ವೈಪರಿತ್ಯ ಹಾಗೂ ವಿವಿಧ ರೋಗದಿಂದಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ರೈತರು ಉಪಬೆಳೆಗಳತ್ತ ಗಮನಹರಿಸಬೇಕು’ ಎಂದು ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ಪಟ್ಟಣದ ಹೊಸೂರಿನ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ ತಾಳೆ ಬೆಳೆ ಬೇಸಾಯ ಕ್ರಮ ಹಾಗೂ ಮಾರುಕಟ್ಟೆ ವ್ಯವಸ್ಥೆ ಕುರಿತು ಬುಧವಾರ ನಡೆದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>‘ರೈತರು ಸರ್ಕಾರದ ಸೌಲಭ್ಯ ಪಡೆದು ಉಪಬೆಳೆ ಬೆಳೆಯಲು ಮುಂದಾಗಬೇಕು. ಸರ್ಕಾರ ತಾಳೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ರೈತರು ಸರಿಯಾದ ಮಾಹಿತಿ ಪಡೆದು ತಾಳೆ ಕೃಷಿ ಮಾಡಬೇಕು’ ಎಂದರು.</p>.<p>ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಬಿ.ಪಿ. ಸತೀಶ ಮಾತನಾಡಿ, ‘ಜಿಲ್ಲೆ ತೋಟಗಾರಿಕಾ ಕ್ಷೇತ್ರವಾಗಿದ್ದು, ಅಡಿಕೆ ಬಿಟ್ಟು ಬೇರೆ ಬೆಳೆಯತ್ತ ಗಮನ ಹರಿಸಲಿಲ್ಲ. ದೇಶದಲ್ಲಿ ಅಡುಗೆ ಎಣ್ಣೆಗೆ ಭಾರಿ ಬೇಡಿಕೆಯಿದ್ದು, ಉತ್ಪಾದನೆ ತೀರಾ ಕಡಿಮೆಯಿದೆ. ಕಾರಣ ಸರ್ಕಾರ ತಾಳೆ ಬೆಳೆಗೆ ಪ್ರೋತ್ಸಾಹ ನೀಡುತ್ತಿದೆ’ ಎಂದರು.</p>.<p>ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವೇಳೆ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ವೀರಭದ್ರ ನಾಯ್ಕ, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಶೈಲ ಕುಪ್ಪಗಡ್ಡಿ, ಶ್ರೀಕಾಂತ ಇದ್ದರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಅರುಣ ಎಚ್.ಜಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>