<p><strong>ಸಿದ್ದಾಪುರ:</strong> ತಾಲ್ಲೂಕಿನ ಸಾಂಸ್ಕೃತಿಕ ಸಂಘಟನೆಯಾದ ಇಟಗಿಯ ಕಲಾಭಾಸ್ಕರದ ವತಿಯಿಂದ ಬಿದ್ರಕಾನ್ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಮೇ 28ರಿಂದ 31ರ ವರೆಗೆ ನಾಲ್ಕು ದಿನಗಳ ಕಾಲ ‘ನವರಸ ಯಕ್ಷೋತ್ಸವ’ ಹಮ್ಮಿಕೊಳ್ಳಲಾಗಿದೆ.</p>.<p>ಮೇ 28 ರಂದು ಸಂಜೆ 6.15ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ನಂತರ ಇಟಗಿ ಮಹಾಬಲೇಶ್ವರ ಭಟ್ಟ ವಿರಚಿತ ‘ಗೋ ಮಹಿಮೆ’ ಹಾಗೂ ಕವಿ ಮಾಲೆಕೊಡಲು ಶಂಭು ಗಣಪತಿ ಭಟ್ಟ ವಿರಚಿತ ‘ಚಂದ್ರಹಾಸ ಚರಿತ್ರ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.</p>.<p>ಮೇ 29ರ ಸಂಜೆ ಕನ್ಯಾನ ವೆಂಕಟರಮಣ ಭಟ್ಟ ವಿರಚಿತ ‘ಭಸ್ಮಾಸುರ ಮೋಹಿನಿ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಮೇ 30 ರಂದು ಕವಿ ತಿರುಮಲ ವಿರಚಿತ ‘ಕಾರ್ತವೀರ್ಯಾರ್ಜುನ ಕಾಳಗ’ ಎಂಬ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.</p>.<p>ಮೇ 31 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ನಂತರ ಕವಿ ದೇವಿದಾಸ ವಿರಚಿತ ದಕ್ಷಯಜ್ಞ ಎಂಬ ಯಕ್ಷಗಾನ ಪ್ರರ್ಶನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಲಾಸಕ್ತರು ಭಾಗಿಯಾಗಿ ಕಲೆಯನ್ನು ಪ್ರೋತ್ಸಾಹಿಸಬೇಕೆಂದು ಕಲಾಭಾಸ್ಕರದ ಅಧ್ಯಕ್ಷ ಇಟಗಿಮಹಾಬಲೇಶ್ವರ ಹಾಗೂ ಕಾರ್ಯದರ್ಶಿ ವಿನಾಯಕ ಹೆಗಡೆ ಕವಲಕೊಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-20-799877292</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ತಾಲ್ಲೂಕಿನ ಸಾಂಸ್ಕೃತಿಕ ಸಂಘಟನೆಯಾದ ಇಟಗಿಯ ಕಲಾಭಾಸ್ಕರದ ವತಿಯಿಂದ ಬಿದ್ರಕಾನ್ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಮೇ 28ರಿಂದ 31ರ ವರೆಗೆ ನಾಲ್ಕು ದಿನಗಳ ಕಾಲ ‘ನವರಸ ಯಕ್ಷೋತ್ಸವ’ ಹಮ್ಮಿಕೊಳ್ಳಲಾಗಿದೆ.</p>.<p>ಮೇ 28 ರಂದು ಸಂಜೆ 6.15ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ನಂತರ ಇಟಗಿ ಮಹಾಬಲೇಶ್ವರ ಭಟ್ಟ ವಿರಚಿತ ‘ಗೋ ಮಹಿಮೆ’ ಹಾಗೂ ಕವಿ ಮಾಲೆಕೊಡಲು ಶಂಭು ಗಣಪತಿ ಭಟ್ಟ ವಿರಚಿತ ‘ಚಂದ್ರಹಾಸ ಚರಿತ್ರ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.</p>.<p>ಮೇ 29ರ ಸಂಜೆ ಕನ್ಯಾನ ವೆಂಕಟರಮಣ ಭಟ್ಟ ವಿರಚಿತ ‘ಭಸ್ಮಾಸುರ ಮೋಹಿನಿ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಮೇ 30 ರಂದು ಕವಿ ತಿರುಮಲ ವಿರಚಿತ ‘ಕಾರ್ತವೀರ್ಯಾರ್ಜುನ ಕಾಳಗ’ ಎಂಬ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.</p>.<p>ಮೇ 31 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ನಂತರ ಕವಿ ದೇವಿದಾಸ ವಿರಚಿತ ದಕ್ಷಯಜ್ಞ ಎಂಬ ಯಕ್ಷಗಾನ ಪ್ರರ್ಶನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಲಾಸಕ್ತರು ಭಾಗಿಯಾಗಿ ಕಲೆಯನ್ನು ಪ್ರೋತ್ಸಾಹಿಸಬೇಕೆಂದು ಕಲಾಭಾಸ್ಕರದ ಅಧ್ಯಕ್ಷ ಇಟಗಿಮಹಾಬಲೇಶ್ವರ ಹಾಗೂ ಕಾರ್ಯದರ್ಶಿ ವಿನಾಯಕ ಹೆಗಡೆ ಕವಲಕೊಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-20-799877292</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>