<p><strong>ಕಾರವಾರ</strong>: 'ಹೆಚ್ಚು ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದು ಅಲ್ಪ ಸಂಖ್ಯಾತರ ಬಜೆಟ್' ಎಂದು ಬಿಜೆಪಿ ಜಿಲ್ಲಾ ಘಟಕದ ಮಾಧ್ಯಮ ವಕ್ತಾರ ನಾಗರಾಜ ನಾಯಕ ಟೀಕಿಸಿದರು.</p><p>ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಉತ್ತರ ಕನ್ನಡ ಜಿಲ್ಲೆಗೆ ಬಜೆಟ್ ನಲ್ಲಿ ಮಹತ್ತರವಾದ ಯೋಜನೆಗಳನ್ನು ಘೋಷಿಸಿಲ್ಲ. ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಎಂದೂ ಜಿಲ್ಲೆಯ ಕಾಳಜಿ ವಹಿಸಿಲ್ಲ' ಎಂದು ಆರೋಪಿಸಿದರು.</p><p>'ಅಹಿಂದ ಹೆಸರಿನಲ್ಲಿ ನಾಯಕರಾದ ಸಿದ್ದರಾಮಯ್ಯ ಅಲ್ಪಸಂಖ್ಯಾತರನ್ನು ಮಾತ್ರ ಓಲೈಸಿದ್ದು, ಹಿಂದುಳಿದ ವರ್ಗ, ದಲಿತರನ್ನು ಮರೆತಿದ್ದಾರೆ' ಎಂದು ದೂರಿದರು.</p><p>'ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಭರದಲ್ಲಿ ಬಹುಸಂಖ್ಯಾತ ವರ್ಗಕ್ಕೆ ತೆರಿಗೆ ಭಾರ ಹೇರುವ ಮೂಲಕ ಮುಖ್ಯಮಂತ್ರಿ ಕಲೆಕ್ಷನ್ ಬಜೆಟ್ ಮಂಡಿಸಿದ್ದಾರೆ' ಎಂದರು.</p><p>'ಕೃಷಿ ಕ್ಷೇತ್ರಕ್ಕೆ ಒತ್ತು ನೀಡುವ ಕೆಲಸ ಆಗಿಲ್ಲ. ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಯಾಗಿಲ್ಲ ಎಂದು ಬಿಜೆಪಿ ಮೇಲೆ ಕಾಂಗ್ರೆಸ್ ಟೀಕಿಸಿತ್ತು. ಆದರೆ ಅವರದೇ ಸರ್ಕಾರ ಆಸ್ಪತ್ರೆ ಸ್ಥಾಪನೆಗೆ ಮುಂದಾಗದಿರುವುದು ದುರಂತ' ಎಂದರು.</p><p>'ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಗೋಹತ್ಯೆ ಪ್ರಕರಣ ಹೆಚ್ಚುತ್ತಿದೆ. ಗೋ ಕಳ್ಳತನ, ಗೋ ಹತ್ಯೆ ತಡೆಯಲು ಪೊಲೀಸ್ ಇಲಾಖೆಯೂ ವಿಫಲವಾಗಿದೆ' ಎಂದು ಆರೋಪಿಸಿದರು.</p><p>'ಜಿಲ್ಲೆಯ ಅಂಕೋಲಾ, ಕುಮಟಾ, ಭಟ್ಕಳ ಸೇರಿ ಕೆಲವೆಡೆ ಈಚೆಗೆ ಗೋ ಕಳ್ಳತನ ಪ್ರಕರಣ ಅಧಿಕವಾಗಿದೆ. ಗೋ ರಕ್ಷಕರ ಮೇಲೆ ಹಲ್ಲೆ ನಡೆಸುವ ಕೃತ್ಯವೂ ನಡೆಯುತ್ತಿದೆ' ಎಂದರು.</p><p> ಈ ವೇಳೆ ಮನೋಜ್ ಭಟ್, ರೇಷ್ಮಾ ಮಾಳ್ಸೇಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: 'ಹೆಚ್ಚು ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದು ಅಲ್ಪ ಸಂಖ್ಯಾತರ ಬಜೆಟ್' ಎಂದು ಬಿಜೆಪಿ ಜಿಲ್ಲಾ ಘಟಕದ ಮಾಧ್ಯಮ ವಕ್ತಾರ ನಾಗರಾಜ ನಾಯಕ ಟೀಕಿಸಿದರು.</p><p>ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಉತ್ತರ ಕನ್ನಡ ಜಿಲ್ಲೆಗೆ ಬಜೆಟ್ ನಲ್ಲಿ ಮಹತ್ತರವಾದ ಯೋಜನೆಗಳನ್ನು ಘೋಷಿಸಿಲ್ಲ. ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಎಂದೂ ಜಿಲ್ಲೆಯ ಕಾಳಜಿ ವಹಿಸಿಲ್ಲ' ಎಂದು ಆರೋಪಿಸಿದರು.</p><p>'ಅಹಿಂದ ಹೆಸರಿನಲ್ಲಿ ನಾಯಕರಾದ ಸಿದ್ದರಾಮಯ್ಯ ಅಲ್ಪಸಂಖ್ಯಾತರನ್ನು ಮಾತ್ರ ಓಲೈಸಿದ್ದು, ಹಿಂದುಳಿದ ವರ್ಗ, ದಲಿತರನ್ನು ಮರೆತಿದ್ದಾರೆ' ಎಂದು ದೂರಿದರು.</p><p>'ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಭರದಲ್ಲಿ ಬಹುಸಂಖ್ಯಾತ ವರ್ಗಕ್ಕೆ ತೆರಿಗೆ ಭಾರ ಹೇರುವ ಮೂಲಕ ಮುಖ್ಯಮಂತ್ರಿ ಕಲೆಕ್ಷನ್ ಬಜೆಟ್ ಮಂಡಿಸಿದ್ದಾರೆ' ಎಂದರು.</p><p>'ಕೃಷಿ ಕ್ಷೇತ್ರಕ್ಕೆ ಒತ್ತು ನೀಡುವ ಕೆಲಸ ಆಗಿಲ್ಲ. ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಯಾಗಿಲ್ಲ ಎಂದು ಬಿಜೆಪಿ ಮೇಲೆ ಕಾಂಗ್ರೆಸ್ ಟೀಕಿಸಿತ್ತು. ಆದರೆ ಅವರದೇ ಸರ್ಕಾರ ಆಸ್ಪತ್ರೆ ಸ್ಥಾಪನೆಗೆ ಮುಂದಾಗದಿರುವುದು ದುರಂತ' ಎಂದರು.</p><p>'ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಗೋಹತ್ಯೆ ಪ್ರಕರಣ ಹೆಚ್ಚುತ್ತಿದೆ. ಗೋ ಕಳ್ಳತನ, ಗೋ ಹತ್ಯೆ ತಡೆಯಲು ಪೊಲೀಸ್ ಇಲಾಖೆಯೂ ವಿಫಲವಾಗಿದೆ' ಎಂದು ಆರೋಪಿಸಿದರು.</p><p>'ಜಿಲ್ಲೆಯ ಅಂಕೋಲಾ, ಕುಮಟಾ, ಭಟ್ಕಳ ಸೇರಿ ಕೆಲವೆಡೆ ಈಚೆಗೆ ಗೋ ಕಳ್ಳತನ ಪ್ರಕರಣ ಅಧಿಕವಾಗಿದೆ. ಗೋ ರಕ್ಷಕರ ಮೇಲೆ ಹಲ್ಲೆ ನಡೆಸುವ ಕೃತ್ಯವೂ ನಡೆಯುತ್ತಿದೆ' ಎಂದರು.</p><p> ಈ ವೇಳೆ ಮನೋಜ್ ಭಟ್, ರೇಷ್ಮಾ ಮಾಳ್ಸೇಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>