<p>ಶಿರಸಿ: ‘ಕೃಷಿ ವಲಯ ಹಾಗೂ ಮಾರುಕಟ್ಟೆಗಳ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೋಟ್ಯಂತರ ರೂಪಾಯಿ ಅನುದಾನ ತಂದು ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.</p>.<p>ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ₹2.14 ಕೋಟಿ ಅಂದಾಜು ವೆಚ್ಚದ ಕಾಂಪೌಂಡ್ ಹಾಗೂ ಸಿ.ಸಿ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಈಚೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ತಾಲ್ಲೂಕಿನ ರೈತರು ಹಾಗೂ ವರ್ತಕರ ಆರ್ಥಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿರುವ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ’ ಎಂದರು.</p>.<p>‘ಎಪಿಎಂಸಿಗೆ ಪ್ರತಿದಿನ ನೂರಾರು ರೈತರು ಹಾಗೂ ವ್ಯಾಪಾರಸ್ಥರು ಬರುತ್ತಾರೆ. ಹಾಗಾಗಿ, ಮಾರುಕಟ್ಟೆ ಆವರಣದಲ್ಲಿ ಸುರಕ್ಷತೆ ಹಾಗೂ ನೈರ್ಮಲ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಬಲಿಷ್ಠವಾದ ಕಾಂಪೌಂಡ್ ಹಾಗೂ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಿ.ಸಿ ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ಈ ಕಾಮಗಾರಿಗಳಿಂದ ಮಾರುಕಟ್ಟೆಯ ಚಿತ್ರಣವೇ ಬದಲಾಗಲಿದ್ದು, ರೈತರಿಗೆ ಪೂರಕ ವಾತಾವರಣ ಸಿಗಲಿದೆ’ ಎಂದರು.</p>.<p>‘ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ರಾಜಿ ಇಲ್ಲ. ನಿಗದಿತ ಕಾಲಮಿತಿಯೊಳಗೆ ಹಾಗೂ ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಬೇಕೆಂದು ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಎಪಿಎಂಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕರ ತೆರಿಗೆ ಹಣ ಸದ್ಬಳಕೆಯಾಗಬೇಕು’ ಎಂದು ಎಚ್ಚರಿಸಿದರು.</p>.<p>ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಮುಖರು, ವಿವಿಧ ಸಹಕಾರ ಸಂಘಗಳ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ರೈತ ಮುಖಂಡರು, ವರ್ತಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-20-305358522</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ಕೃಷಿ ವಲಯ ಹಾಗೂ ಮಾರುಕಟ್ಟೆಗಳ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೋಟ್ಯಂತರ ರೂಪಾಯಿ ಅನುದಾನ ತಂದು ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.</p>.<p>ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ₹2.14 ಕೋಟಿ ಅಂದಾಜು ವೆಚ್ಚದ ಕಾಂಪೌಂಡ್ ಹಾಗೂ ಸಿ.ಸಿ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಈಚೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ತಾಲ್ಲೂಕಿನ ರೈತರು ಹಾಗೂ ವರ್ತಕರ ಆರ್ಥಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿರುವ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ’ ಎಂದರು.</p>.<p>‘ಎಪಿಎಂಸಿಗೆ ಪ್ರತಿದಿನ ನೂರಾರು ರೈತರು ಹಾಗೂ ವ್ಯಾಪಾರಸ್ಥರು ಬರುತ್ತಾರೆ. ಹಾಗಾಗಿ, ಮಾರುಕಟ್ಟೆ ಆವರಣದಲ್ಲಿ ಸುರಕ್ಷತೆ ಹಾಗೂ ನೈರ್ಮಲ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಬಲಿಷ್ಠವಾದ ಕಾಂಪೌಂಡ್ ಹಾಗೂ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಿ.ಸಿ ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ಈ ಕಾಮಗಾರಿಗಳಿಂದ ಮಾರುಕಟ್ಟೆಯ ಚಿತ್ರಣವೇ ಬದಲಾಗಲಿದ್ದು, ರೈತರಿಗೆ ಪೂರಕ ವಾತಾವರಣ ಸಿಗಲಿದೆ’ ಎಂದರು.</p>.<p>‘ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ರಾಜಿ ಇಲ್ಲ. ನಿಗದಿತ ಕಾಲಮಿತಿಯೊಳಗೆ ಹಾಗೂ ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಬೇಕೆಂದು ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಎಪಿಎಂಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕರ ತೆರಿಗೆ ಹಣ ಸದ್ಬಳಕೆಯಾಗಬೇಕು’ ಎಂದು ಎಚ್ಚರಿಸಿದರು.</p>.<p>ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಮುಖರು, ವಿವಿಧ ಸಹಕಾರ ಸಂಘಗಳ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ರೈತ ಮುಖಂಡರು, ವರ್ತಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-20-305358522</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>