ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಹುಲಿಗೆಮ್ಮ ಮಾತನಾಡಿ, ‘ಗೌರಿ ನಾಯ್ಕ ಅವರ ಕಾರ್ಯ ಶ್ಲಾಘನೀಯ. ಆದರೆ, ಸರ್ಕಾರಿ ಇಲಾಖೆಯ ಅನುಮತಿಯಿಲ್ಲದೇ ಬಾವಿ ತೋಡಲು ಅವಕಾಶವಿಲ್ಲ. ಈ ಕಾರಣ ಸಮಗ್ರ ವರದಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ್ ಕಾಂದು ಅವರಿಗೆ ಸಲ್ಲಿಸಲಾಗುವುದು. ಅವರು ನೀಡುವ ಸೂಚನೆ ಅನುಸರಿಸಿ, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.