<p><strong>ಶಿರಸಿ</strong>: ಪ್ರತಿಯೊಬ್ಬನಿಗೂ ಆತನ ಜಾತಿ ಮುಖ್ಯ. ಆದರೆ ಅದು ಮನೆಯೊಳಗೆ ಇರಬೇಕು. ಸಮಾಜದಲ್ಲಿ ಎಲ್ಲ ಜಾತಿ ಒಂದೇ ಎನ್ನುವ ಮನೋಭಾವ ಬೆಳೆಸಿಕೊಳ್ಳಬೇಕು. ಯಾರು ಕೂಡ ಜಾತಿ ಸಿದ್ಧಾಂತಕ್ಕೆ ಕಟ್ಟು ಬೀಳಬಾರದು ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಹೇಳಿದರು. </p>.<p>ಜುನಾ ಅಖಾಡದ ಮಹಾಮಂಡಲೇಶ್ವರ ಪದವಿ ಪಡೆದ ಕಾರಣ ನಗರದ ಸುಪ್ರಿಯಾ ಇಂಟರ್ನ್ಯಾಶನಲ್ ಹೊಟೇಲ್ನಲ್ಲಿ ಆರ್ಯಈಡಿಗ, ನಾಮಧಾರಿ, ಬಿಲ್ಲವ ಅಭಿವೃದ್ಧಿ ಸಂಘದ ಶಿರಸಿ ಘಟಕದ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಸ್ವಾಮೀಜಿ ಅವರ ಪಾದುಕಾ ಪೂಜೆ, ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಾತಿಯನ್ನು ಮನೆಯೊಳಗೆ ಇಟ್ಟುಕೊಳ್ಳಿ, ಸಂಘಟನೆ ಮೂಲಕ ಬೆಳೆಸಿಕೊಳ್ಳಿ. ಆದರೆ ಎಲ್ಲ ಜಾತಿಗಳು ಮಿಳಿತವಾಗಿರುವ ಸಮಾಜದಲ್ಲಿ ಎಲ್ಲರೊಟ್ಟಿಗೆ ಬೆರೆತು ಸಾಗಬೇಕು. ಆಗ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ’ ಎಂದರು. </p>.<p>‘ಸುಖ, ಶಾಂತಿ, ನೆಮ್ಮದಿಗಾಗಿ ಪ್ರತಿಯೊಬ್ಬರು ಹಂಬಲಿಸುತ್ತಾರೆ. ಆದರೆ ನಿತ್ಯ ಸಂತೋಷವಾಗಿರಲು ನಾನೆಂಬ ಭಾವನೆ ದೂರ ಮಾಡಬೇಕು’ ಎಂದು ತಿಳಿಸಿದರು. </p>.<p>ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ‘ಹಿಂದೂ ಧಾರ್ಮಿಕ ಪರಂಪರೆಯಲ್ಲಿ ಭಗವಂತ ಹಾಗೂ ಗುರುಗಳ ಕೃಪೆ ಪಡೆದು ಆರಂಭಿಸಿದ ಕಾರ್ಯ ನಿರ್ವಿಘ್ನವಾಗಿ ನಡೆಯುತ್ತದೆ. ಈ ಕಾರಣ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಭಾಭವನ ಕಾಮಗಾರಿ ಪೂರ್ವ ಸ್ವಾಮೀಜಿ ಆಶೀರ್ವಾದ ಪಡೆಯಲಾಗಿದೆ. ನಾರಾಯಣಗುರು ನಗರದಲ್ಲಿ ₹5 ಕೋಟಿ ವೆಚ್ಚದಲ್ಲಿ ಸಭಾಭವನ, ಗುರು ಮಂದಿರ ನಿರ್ಮಿಸಲು ಚಿಂತನೆ ನಡೆಸಲಾಗಿದ್ದು, ಸಮಾಜದ ಸಹಕಾರದಿಂದಲೇ ನಿರ್ಮಿಸಲಾಗುವುದು. ಸಭಾಭವನ ನಿರ್ಮಾಣಕ್ಕೆ ಸರ್ಕಾರದ ಸಹಕಾರ ಕೂಡ ಕೇಳಲಾಗಿದೆ’ ಎಂದರು. </p>.<p>ಈ ವೇಳೆ ಸಮುದಾಯದ ಪರವಾಗಿ ಉದ್ಯಮಿ ಅಶ್ವಿನ್ ನಾಯ್ಕ ದಂಪತಿ ಸ್ವಾಮೀಜಿ ಅವರ ಪಾದುಕಾ ಪೂಜೆ ನೆರವೇರಿಸಿದರು. ಶಾಸಕ ಭೀಮಣ್ಣ ನಾಯ್ಕ ದಂಪತಿ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದರು. </p>.<p>ಪ್ರಮುಖರಾದ ಮಂಜುನಾಥ ನಾಯ್ಕ, ಎಚ್.ಆರ್.ನಾಯ್ಕ, ಟಿ.ಟಿ.ನಾಯ್ಕ, ಶ್ರೀಧರ ನಾಯ್ಕ, ನಾಗೇಶ ನಾಯ್ಕ, ನರಸಿಂಹ ನಾಯ್ಕ, ಆರ್.ಎಸ್.ನಾಯ್ಕ, ಕೆ.ಜಿ.ನಾಯ್ಕ, ವಿ.ಎನ್.ನಾಯ್ಕ ಇತರರಿದ್ದರು.</p>.<p> ಶ್ರೀರಾಮ ಕ್ಷೇತ್ರದ ಶಿರಸಿ ವಿಭಾಗದ ಜವಾಬ್ದಾರಿ ವಹಿಸಿಕೊಂಡ ವೆಂಕಟೇಶ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಶ್ರೀನಿವಾಸ ನಾಯ್ಕ ಸ್ವಾಗತಿಸಿದರು. ಕುಮಾರ ನಾಯ್ಕ ನಿರೂಪಿಸಿದರು. </p>.<div><blockquote>ಸಂಸ್ಕಾರವಿದ್ದರೆ ಸಾತ್ವಿಕತೆ ಬರುತ್ತದೆ. ಹಾಗಾಗಿ ಸಮುದಾಯದ ಯುವ ಪೀಳಿಗೆಗೆ ಸಂಸ್ಕಾರ ನೀಡುವ ಜವಾಬ್ದಾರಿ ಹಿರಿಯರ ಮೇಲಿದೆ. </blockquote><span class="attribution">ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಕನ್ಯಾಡಿ ಶ್ರೀರಾಮ ಕ್ಷೇತ್ರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಪ್ರತಿಯೊಬ್ಬನಿಗೂ ಆತನ ಜಾತಿ ಮುಖ್ಯ. ಆದರೆ ಅದು ಮನೆಯೊಳಗೆ ಇರಬೇಕು. ಸಮಾಜದಲ್ಲಿ ಎಲ್ಲ ಜಾತಿ ಒಂದೇ ಎನ್ನುವ ಮನೋಭಾವ ಬೆಳೆಸಿಕೊಳ್ಳಬೇಕು. ಯಾರು ಕೂಡ ಜಾತಿ ಸಿದ್ಧಾಂತಕ್ಕೆ ಕಟ್ಟು ಬೀಳಬಾರದು ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಹೇಳಿದರು. </p>.<p>ಜುನಾ ಅಖಾಡದ ಮಹಾಮಂಡಲೇಶ್ವರ ಪದವಿ ಪಡೆದ ಕಾರಣ ನಗರದ ಸುಪ್ರಿಯಾ ಇಂಟರ್ನ್ಯಾಶನಲ್ ಹೊಟೇಲ್ನಲ್ಲಿ ಆರ್ಯಈಡಿಗ, ನಾಮಧಾರಿ, ಬಿಲ್ಲವ ಅಭಿವೃದ್ಧಿ ಸಂಘದ ಶಿರಸಿ ಘಟಕದ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಸ್ವಾಮೀಜಿ ಅವರ ಪಾದುಕಾ ಪೂಜೆ, ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಾತಿಯನ್ನು ಮನೆಯೊಳಗೆ ಇಟ್ಟುಕೊಳ್ಳಿ, ಸಂಘಟನೆ ಮೂಲಕ ಬೆಳೆಸಿಕೊಳ್ಳಿ. ಆದರೆ ಎಲ್ಲ ಜಾತಿಗಳು ಮಿಳಿತವಾಗಿರುವ ಸಮಾಜದಲ್ಲಿ ಎಲ್ಲರೊಟ್ಟಿಗೆ ಬೆರೆತು ಸಾಗಬೇಕು. ಆಗ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ’ ಎಂದರು. </p>.<p>‘ಸುಖ, ಶಾಂತಿ, ನೆಮ್ಮದಿಗಾಗಿ ಪ್ರತಿಯೊಬ್ಬರು ಹಂಬಲಿಸುತ್ತಾರೆ. ಆದರೆ ನಿತ್ಯ ಸಂತೋಷವಾಗಿರಲು ನಾನೆಂಬ ಭಾವನೆ ದೂರ ಮಾಡಬೇಕು’ ಎಂದು ತಿಳಿಸಿದರು. </p>.<p>ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ‘ಹಿಂದೂ ಧಾರ್ಮಿಕ ಪರಂಪರೆಯಲ್ಲಿ ಭಗವಂತ ಹಾಗೂ ಗುರುಗಳ ಕೃಪೆ ಪಡೆದು ಆರಂಭಿಸಿದ ಕಾರ್ಯ ನಿರ್ವಿಘ್ನವಾಗಿ ನಡೆಯುತ್ತದೆ. ಈ ಕಾರಣ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಭಾಭವನ ಕಾಮಗಾರಿ ಪೂರ್ವ ಸ್ವಾಮೀಜಿ ಆಶೀರ್ವಾದ ಪಡೆಯಲಾಗಿದೆ. ನಾರಾಯಣಗುರು ನಗರದಲ್ಲಿ ₹5 ಕೋಟಿ ವೆಚ್ಚದಲ್ಲಿ ಸಭಾಭವನ, ಗುರು ಮಂದಿರ ನಿರ್ಮಿಸಲು ಚಿಂತನೆ ನಡೆಸಲಾಗಿದ್ದು, ಸಮಾಜದ ಸಹಕಾರದಿಂದಲೇ ನಿರ್ಮಿಸಲಾಗುವುದು. ಸಭಾಭವನ ನಿರ್ಮಾಣಕ್ಕೆ ಸರ್ಕಾರದ ಸಹಕಾರ ಕೂಡ ಕೇಳಲಾಗಿದೆ’ ಎಂದರು. </p>.<p>ಈ ವೇಳೆ ಸಮುದಾಯದ ಪರವಾಗಿ ಉದ್ಯಮಿ ಅಶ್ವಿನ್ ನಾಯ್ಕ ದಂಪತಿ ಸ್ವಾಮೀಜಿ ಅವರ ಪಾದುಕಾ ಪೂಜೆ ನೆರವೇರಿಸಿದರು. ಶಾಸಕ ಭೀಮಣ್ಣ ನಾಯ್ಕ ದಂಪತಿ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದರು. </p>.<p>ಪ್ರಮುಖರಾದ ಮಂಜುನಾಥ ನಾಯ್ಕ, ಎಚ್.ಆರ್.ನಾಯ್ಕ, ಟಿ.ಟಿ.ನಾಯ್ಕ, ಶ್ರೀಧರ ನಾಯ್ಕ, ನಾಗೇಶ ನಾಯ್ಕ, ನರಸಿಂಹ ನಾಯ್ಕ, ಆರ್.ಎಸ್.ನಾಯ್ಕ, ಕೆ.ಜಿ.ನಾಯ್ಕ, ವಿ.ಎನ್.ನಾಯ್ಕ ಇತರರಿದ್ದರು.</p>.<p> ಶ್ರೀರಾಮ ಕ್ಷೇತ್ರದ ಶಿರಸಿ ವಿಭಾಗದ ಜವಾಬ್ದಾರಿ ವಹಿಸಿಕೊಂಡ ವೆಂಕಟೇಶ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಶ್ರೀನಿವಾಸ ನಾಯ್ಕ ಸ್ವಾಗತಿಸಿದರು. ಕುಮಾರ ನಾಯ್ಕ ನಿರೂಪಿಸಿದರು. </p>.<div><blockquote>ಸಂಸ್ಕಾರವಿದ್ದರೆ ಸಾತ್ವಿಕತೆ ಬರುತ್ತದೆ. ಹಾಗಾಗಿ ಸಮುದಾಯದ ಯುವ ಪೀಳಿಗೆಗೆ ಸಂಸ್ಕಾರ ನೀಡುವ ಜವಾಬ್ದಾರಿ ಹಿರಿಯರ ಮೇಲಿದೆ. </blockquote><span class="attribution">ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಕನ್ಯಾಡಿ ಶ್ರೀರಾಮ ಕ್ಷೇತ್ರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>