<p><strong>ಶಿರಸಿ</strong>: ಬಿಸಿಲಿನ ಬೇಗೆ ಹೆಚ್ಚುತ್ತಲೇ ಇದೆ. ಮಳೆಯ ನಿರೀಕ್ಷೆ ಎಲ್ಲರಲ್ಲೂ ಮನೆ ಮಾಡಿದೆ. ಒಂದೊಮ್ಮೆ ಮಳೆ ಬಂದರೆ ಹೂಳು ತುಂಬಿದ ಬಹುತೇಕ ಚರಂಡಿಗಳ ನೀರು ರಸ್ತೆಯ ಮೇಲೆ ಹರಿಯುವ ಆತಂಕ ಸಾರ್ವಜನಿಕರಿಂದ ವ್ಯಕ್ತವಾಗಿದೆ. </p>.<p>ನಗರದಲ್ಲಿ ತೆರೆದ ಚರಂಡಿ ವ್ಯವಸ್ಥೆ ಇದೆ. ಎಲ್ಲ ಚರಂಡಿಗಳೂ ಹೂಳು ತುಂಬಿದ್ದು, ಕೆಸರು ನೀರು ಮುಂದೆ ಸಾಗದೇ ತೊಂದರೆ ಅನುಭವಿಸುವಂತಾಗಿದೆ. ಇತ್ತೀಚೆಗೆ ನಡೆದ ಮಾರಿಕಾಂಬಾ ಜಾತ್ರೆ ನಂತರ ಚರಂಡಿಗಳು ತ್ಯಾಜ್ಯದಿಂದ ತುಂಬಿದ್ದು, ಸ್ವಚ್ಛತೆ ಕಾರ್ಯ ಪೂರ್ಣವಾಗಿಲ್ಲ ಎಂಬುದು ಜನರ ದೂರು. </p>.<p>‘ಬಿಸಿಲಿನ ತಾಪಕ್ಕೆ ಚರಂಡಿಯ ದುರ್ವಾಸನೆ ಜನರ ನಿದ್ದೆಗೆಡಿಸಿದೆ. ಅಲ್ಲದೆ ಸೊಳ್ಳೆಗಳ ಕಾಟವೂ ವಿಪರೀತವಾಗಿದೆ. ಬಿಸಿಲು ಇದ್ದಾಗಲೇ ಇಷ್ಟೊಂದು ತೊಂದರೆ ಅನುಭವಿಸುತ್ತಿರುವ ಜನರು, ಮಳೆ ಶುರುವಾದ ಮೇಲೆ ಇನ್ನಷ್ಟು ತೊಂದರೆ ಅನುಭವಿಸುವಂತಾಗಲಿದೆ’ ಎನ್ನುತ್ತಾರೆ ನಗರದ ನಿವಾಸಿಗಳು.</p>.<p>‘ಚರಂಡಿಗಳಲ್ಲಿ ತುಂಬಿರುವ ಹೂಳು ಸ್ವಚ್ಛ ಮಾಡಲು ಈಗಲೇ ನಗರಸಭೆ ಕ್ರಮ ಕೈಗೊಳ್ಳಬೇಕು. ಇಲ್ಲದೇ ಇದ್ದರೆ, ಮಳೆಯ ನೀರೆಲ್ಲ ಮನೆಯ ಅಂಗಳಕ್ಕೆ ಬಂದು ನಿಲ್ಲುತ್ತದೆ. ಚರಂಡಿಗಳಲ್ಲಿ ನಿಂತಿರುವ ಕಸ-ಕಡ್ಡಿಗಳನ್ನು ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಮುಂದೆ ಸಾಗಲು ಅನುವು ಮಾಡಿದಲ್ಲಿ ಮಳೆಗಾಲವನ್ನು ಸಮರ್ಥವಾಗಿ ನಿಭಾಯಿಸಬಹುದು’ ಎನ್ನುತ್ತಾರೆ ನಗರದ ನಿವಾಸಿ ಯೋಗೀಶ ಹೆಗಡೆ.</p>.<p>‘ಚರಂಡಿಯ ಹೂಳಿನ ಸಮಸ್ಯೆ ನಗರದಾದ್ಯಂತ ಇದೆ. ಮಳೆಗಾಲಕ್ಕೂ ಮುನ್ನವೇ ಈ ಸಮಸ್ಯೆಯ ನಿವಾರಣೆ ಅಗತ್ಯವಾಗಿದೆ. ಮಳೆಯ ನೀರು ಹರಿದು ಹೋಗಲು ಆಗದೇ ಇರುವಂತಹ ಸ್ಥಿತಿ ಇದ್ದು, ಇದನ್ನು ನಿವಾರಿಸಲು ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.</p>.<p>‘ರಾತ್ರಿ ಇಡೀ ಸೊಳ್ಳೆಗಳ ಕಾಟದಿಂದ ಜನರು ತತ್ತರಿಸುವಂತಾಗಿದೆ. ಮನೆಯ ಎದುರಿಗೆ ಚರಂಡಿಯ ನೀರು ಹರಿಯುತ್ತಿದ್ದು, ಈ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದನ್ನು ನಿವಾರಿಸಲು ನಗರಸಭೆ ಹಾಗೂ ಆರೋಗ್ಯ ಇಲಾಖೆಗಳು ಅಲ್ಲಲ್ಲಿ ಚರಂಡಿಯಲ್ಲಿ ಗಪ್ಪ ಮೀನುಗಳು ಬಿಟ್ಟಿದ್ದರೆ ಅನುಕೂಲ ಆಗುತ್ತಿತ್ತು’ ಎಂಬುದು ಜನರ ಅಭಿಪ್ರಾಯ.</p>.<p><strong>ಈಗಾಗಲೇ ಕೆಲವೆಡೆ ಚರಂಡಿ ಸ್ವಚ್ಛ ಮಾಡಲಾಗಿದ್ದು ಮಳೆಗಾಲಪೂರ್ವ ಎಲ್ಲ ಚರಂಡಿ ಸ್ವಚ್ಛಗೊಳಿಸಲಾಗುವುದು </strong></p><p><strong>-ಕಾಂತರಾಜ್ ಪೌರಾಯುಕ್ತ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಬಿಸಿಲಿನ ಬೇಗೆ ಹೆಚ್ಚುತ್ತಲೇ ಇದೆ. ಮಳೆಯ ನಿರೀಕ್ಷೆ ಎಲ್ಲರಲ್ಲೂ ಮನೆ ಮಾಡಿದೆ. ಒಂದೊಮ್ಮೆ ಮಳೆ ಬಂದರೆ ಹೂಳು ತುಂಬಿದ ಬಹುತೇಕ ಚರಂಡಿಗಳ ನೀರು ರಸ್ತೆಯ ಮೇಲೆ ಹರಿಯುವ ಆತಂಕ ಸಾರ್ವಜನಿಕರಿಂದ ವ್ಯಕ್ತವಾಗಿದೆ. </p>.<p>ನಗರದಲ್ಲಿ ತೆರೆದ ಚರಂಡಿ ವ್ಯವಸ್ಥೆ ಇದೆ. ಎಲ್ಲ ಚರಂಡಿಗಳೂ ಹೂಳು ತುಂಬಿದ್ದು, ಕೆಸರು ನೀರು ಮುಂದೆ ಸಾಗದೇ ತೊಂದರೆ ಅನುಭವಿಸುವಂತಾಗಿದೆ. ಇತ್ತೀಚೆಗೆ ನಡೆದ ಮಾರಿಕಾಂಬಾ ಜಾತ್ರೆ ನಂತರ ಚರಂಡಿಗಳು ತ್ಯಾಜ್ಯದಿಂದ ತುಂಬಿದ್ದು, ಸ್ವಚ್ಛತೆ ಕಾರ್ಯ ಪೂರ್ಣವಾಗಿಲ್ಲ ಎಂಬುದು ಜನರ ದೂರು. </p>.<p>‘ಬಿಸಿಲಿನ ತಾಪಕ್ಕೆ ಚರಂಡಿಯ ದುರ್ವಾಸನೆ ಜನರ ನಿದ್ದೆಗೆಡಿಸಿದೆ. ಅಲ್ಲದೆ ಸೊಳ್ಳೆಗಳ ಕಾಟವೂ ವಿಪರೀತವಾಗಿದೆ. ಬಿಸಿಲು ಇದ್ದಾಗಲೇ ಇಷ್ಟೊಂದು ತೊಂದರೆ ಅನುಭವಿಸುತ್ತಿರುವ ಜನರು, ಮಳೆ ಶುರುವಾದ ಮೇಲೆ ಇನ್ನಷ್ಟು ತೊಂದರೆ ಅನುಭವಿಸುವಂತಾಗಲಿದೆ’ ಎನ್ನುತ್ತಾರೆ ನಗರದ ನಿವಾಸಿಗಳು.</p>.<p>‘ಚರಂಡಿಗಳಲ್ಲಿ ತುಂಬಿರುವ ಹೂಳು ಸ್ವಚ್ಛ ಮಾಡಲು ಈಗಲೇ ನಗರಸಭೆ ಕ್ರಮ ಕೈಗೊಳ್ಳಬೇಕು. ಇಲ್ಲದೇ ಇದ್ದರೆ, ಮಳೆಯ ನೀರೆಲ್ಲ ಮನೆಯ ಅಂಗಳಕ್ಕೆ ಬಂದು ನಿಲ್ಲುತ್ತದೆ. ಚರಂಡಿಗಳಲ್ಲಿ ನಿಂತಿರುವ ಕಸ-ಕಡ್ಡಿಗಳನ್ನು ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಮುಂದೆ ಸಾಗಲು ಅನುವು ಮಾಡಿದಲ್ಲಿ ಮಳೆಗಾಲವನ್ನು ಸಮರ್ಥವಾಗಿ ನಿಭಾಯಿಸಬಹುದು’ ಎನ್ನುತ್ತಾರೆ ನಗರದ ನಿವಾಸಿ ಯೋಗೀಶ ಹೆಗಡೆ.</p>.<p>‘ಚರಂಡಿಯ ಹೂಳಿನ ಸಮಸ್ಯೆ ನಗರದಾದ್ಯಂತ ಇದೆ. ಮಳೆಗಾಲಕ್ಕೂ ಮುನ್ನವೇ ಈ ಸಮಸ್ಯೆಯ ನಿವಾರಣೆ ಅಗತ್ಯವಾಗಿದೆ. ಮಳೆಯ ನೀರು ಹರಿದು ಹೋಗಲು ಆಗದೇ ಇರುವಂತಹ ಸ್ಥಿತಿ ಇದ್ದು, ಇದನ್ನು ನಿವಾರಿಸಲು ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.</p>.<p>‘ರಾತ್ರಿ ಇಡೀ ಸೊಳ್ಳೆಗಳ ಕಾಟದಿಂದ ಜನರು ತತ್ತರಿಸುವಂತಾಗಿದೆ. ಮನೆಯ ಎದುರಿಗೆ ಚರಂಡಿಯ ನೀರು ಹರಿಯುತ್ತಿದ್ದು, ಈ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದನ್ನು ನಿವಾರಿಸಲು ನಗರಸಭೆ ಹಾಗೂ ಆರೋಗ್ಯ ಇಲಾಖೆಗಳು ಅಲ್ಲಲ್ಲಿ ಚರಂಡಿಯಲ್ಲಿ ಗಪ್ಪ ಮೀನುಗಳು ಬಿಟ್ಟಿದ್ದರೆ ಅನುಕೂಲ ಆಗುತ್ತಿತ್ತು’ ಎಂಬುದು ಜನರ ಅಭಿಪ್ರಾಯ.</p>.<p><strong>ಈಗಾಗಲೇ ಕೆಲವೆಡೆ ಚರಂಡಿ ಸ್ವಚ್ಛ ಮಾಡಲಾಗಿದ್ದು ಮಳೆಗಾಲಪೂರ್ವ ಎಲ್ಲ ಚರಂಡಿ ಸ್ವಚ್ಛಗೊಳಿಸಲಾಗುವುದು </strong></p><p><strong>-ಕಾಂತರಾಜ್ ಪೌರಾಯುಕ್ತ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>