<p>ಶಿರಸಿ: ಆಡುಭಾಷೆಯಿಂದ ಉದ್ಭವಿಸಿದ ಸಾಹಿತ್ಯ ಅಜರಾಮರವಾಗುತ್ತದೆ. ಹಾಗಾಗಿ ಜನಮಾನಸದಿಂದ ಮರೆಯಾಗುತ್ತಿರುವ ಆಡುಭಾಷೆಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಾಹಿತ್ಯ ಚಿಂತಕರ ಚಾವಡಿಯ ಸಂಸ್ಥಾಪಕ ಎಸ್.ಎಸ್.ಭಟ್ ಹೇಳಿದರು. </p>.<p>ನಗರದ ನೆಮ್ಮದಿ ಕುಟೀರದಲ್ಲಿ ಸೋಮವಾರ ನಡೆದ ಆಡುಭಾಷಾ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಪ್ರಾದೇಶಿಕ ಸೊಗಡಿನ ತಾಯಿಯ ಬಾಯಿನುಡಿಗಳು ನಮ್ಮ ಪರಂಪರಾಗತ ಜನಪದ ಭಾಷೆಯ ಸೊಗಡಿನ ಸ್ವಾದಿಷ್ಟ ಅನುಭವ ಅದ್ಭುತವಾಗಿರುತ್ತದೆ. ಮಾತೃಗಿಂತ ಶ್ರೇಷ್ಠ ಭಾಷೆ ಮತ್ತೊಂದಿಲ್ಲ ಎಂದರು. </p>.<p>ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಬರಹಗಾರ್ತಿ ದಾಕ್ಷಾಯಿಣಿ ಪಿ.ಸಿ ಮಾತನಾಡಿ, ತಂತ್ರಜ್ಞಾನವು ಉತ್ತುಂಗ ಸ್ಥಿತಿಯಲ್ಲಿರುವ ಈ ಕಾಲಘಟ್ಟದಲ್ಲಿ ಆಡುಭಾಷೆ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಲಿದೆ. ಮನುಷ್ಯ ತನ್ನ ಜೀವನದಲ್ಲಿ ಅದೆಷ್ಟೇ ಭಾಷೆಗಳನ್ನು ಕಲಿತರೂ ಮಾತೃಭಾಷೆ ಮರೆಯಬಾರದು ಎಂದು ತಿಳಿಸಿದರು. </p>.<p>ಬರಹಗಾರ ಜಗದೀಶ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿ, ಬರಹಗಾರರಲ್ಲಿ ಉದ್ಭವಿಸುವ ಸಾಹಿತ್ಯ ಶಕ್ತಿಯುತವಾಗಿದ್ದಲ್ಲಿ ಎಲ್ಲ ಕಡೆ ಪ್ರಭಾವ ಬೀರಿ, ಬಳಿಕ ಪ್ರಶಸ್ತಿ, ಗೌರವಾದರ ರೂಪದಲ್ಲಿ ಪುನಃ ಬರಹಗಾರನಲ್ಲಿಗೇ ಬರಲಿದೆ ಎಂದರು. </p>.<p>ಆಡುಭಾಷಾ ಕವಿಗೋಷ್ಠಿಯಲ್ಲಿ ರಮೇಶ ಹೆಗಡೆ ಕೆರೆಕೋಣ (ಪ್ರಥಮ), ದಿನೇಶ ಅಮ್ಮಿನಳ್ಳಿ (ದ್ವತೀಯ), ಪೂರ್ಣಿಮಾ ಹೆಗಡೆ (ತೃತೀಯ) ಬಹುಮಾನ ಪಡೆದುಕೊಂಡರು.</p>.<p>ಶೋಭಾ ಭಟ್ ಮತ್ತು ರೋಹಿಣಿ ಹೆಗಡೆ ನಿರ್ಣಾಯಕರಾಗಿ ಕಾರ್ಯ ನಿರ್ವಹಿಸಿದರು. ಸಾಹಿತಿ ಎಂ.ಎಸ್.ಹೆಗಡೆ ಮತ್ತು ಚುಟುಕು ಕವಿ ದತ್ತಗುರು ಕಂಠಿ ಉಪಸ್ಥಿತರಿದ್ದರು. </p>.<p>ಕಥೆಗಾರ ಕೆ.ಮಹೇಶ ಸ್ವಾಗತಿಸಿದರು. ರೇಣುಕಾ ಬ್ಯಾಗದ್ದೆ ಪ್ರಾರ್ಥಿಸಿದರು. ಕವಯತ್ರಿ ಯಶಸ್ವಿನಿಮೂರ್ತಿ ನಿರ್ವಹಿಸಿದರು. ಎಸ್.ಎಮ್ ಹೆಗಡೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ಆಡುಭಾಷೆಯಿಂದ ಉದ್ಭವಿಸಿದ ಸಾಹಿತ್ಯ ಅಜರಾಮರವಾಗುತ್ತದೆ. ಹಾಗಾಗಿ ಜನಮಾನಸದಿಂದ ಮರೆಯಾಗುತ್ತಿರುವ ಆಡುಭಾಷೆಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಾಹಿತ್ಯ ಚಿಂತಕರ ಚಾವಡಿಯ ಸಂಸ್ಥಾಪಕ ಎಸ್.ಎಸ್.ಭಟ್ ಹೇಳಿದರು. </p>.<p>ನಗರದ ನೆಮ್ಮದಿ ಕುಟೀರದಲ್ಲಿ ಸೋಮವಾರ ನಡೆದ ಆಡುಭಾಷಾ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಪ್ರಾದೇಶಿಕ ಸೊಗಡಿನ ತಾಯಿಯ ಬಾಯಿನುಡಿಗಳು ನಮ್ಮ ಪರಂಪರಾಗತ ಜನಪದ ಭಾಷೆಯ ಸೊಗಡಿನ ಸ್ವಾದಿಷ್ಟ ಅನುಭವ ಅದ್ಭುತವಾಗಿರುತ್ತದೆ. ಮಾತೃಗಿಂತ ಶ್ರೇಷ್ಠ ಭಾಷೆ ಮತ್ತೊಂದಿಲ್ಲ ಎಂದರು. </p>.<p>ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಬರಹಗಾರ್ತಿ ದಾಕ್ಷಾಯಿಣಿ ಪಿ.ಸಿ ಮಾತನಾಡಿ, ತಂತ್ರಜ್ಞಾನವು ಉತ್ತುಂಗ ಸ್ಥಿತಿಯಲ್ಲಿರುವ ಈ ಕಾಲಘಟ್ಟದಲ್ಲಿ ಆಡುಭಾಷೆ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಲಿದೆ. ಮನುಷ್ಯ ತನ್ನ ಜೀವನದಲ್ಲಿ ಅದೆಷ್ಟೇ ಭಾಷೆಗಳನ್ನು ಕಲಿತರೂ ಮಾತೃಭಾಷೆ ಮರೆಯಬಾರದು ಎಂದು ತಿಳಿಸಿದರು. </p>.<p>ಬರಹಗಾರ ಜಗದೀಶ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿ, ಬರಹಗಾರರಲ್ಲಿ ಉದ್ಭವಿಸುವ ಸಾಹಿತ್ಯ ಶಕ್ತಿಯುತವಾಗಿದ್ದಲ್ಲಿ ಎಲ್ಲ ಕಡೆ ಪ್ರಭಾವ ಬೀರಿ, ಬಳಿಕ ಪ್ರಶಸ್ತಿ, ಗೌರವಾದರ ರೂಪದಲ್ಲಿ ಪುನಃ ಬರಹಗಾರನಲ್ಲಿಗೇ ಬರಲಿದೆ ಎಂದರು. </p>.<p>ಆಡುಭಾಷಾ ಕವಿಗೋಷ್ಠಿಯಲ್ಲಿ ರಮೇಶ ಹೆಗಡೆ ಕೆರೆಕೋಣ (ಪ್ರಥಮ), ದಿನೇಶ ಅಮ್ಮಿನಳ್ಳಿ (ದ್ವತೀಯ), ಪೂರ್ಣಿಮಾ ಹೆಗಡೆ (ತೃತೀಯ) ಬಹುಮಾನ ಪಡೆದುಕೊಂಡರು.</p>.<p>ಶೋಭಾ ಭಟ್ ಮತ್ತು ರೋಹಿಣಿ ಹೆಗಡೆ ನಿರ್ಣಾಯಕರಾಗಿ ಕಾರ್ಯ ನಿರ್ವಹಿಸಿದರು. ಸಾಹಿತಿ ಎಂ.ಎಸ್.ಹೆಗಡೆ ಮತ್ತು ಚುಟುಕು ಕವಿ ದತ್ತಗುರು ಕಂಠಿ ಉಪಸ್ಥಿತರಿದ್ದರು. </p>.<p>ಕಥೆಗಾರ ಕೆ.ಮಹೇಶ ಸ್ವಾಗತಿಸಿದರು. ರೇಣುಕಾ ಬ್ಯಾಗದ್ದೆ ಪ್ರಾರ್ಥಿಸಿದರು. ಕವಯತ್ರಿ ಯಶಸ್ವಿನಿಮೂರ್ತಿ ನಿರ್ವಹಿಸಿದರು. ಎಸ್.ಎಮ್ ಹೆಗಡೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>