<p><strong>ಶಿರಸಿ:</strong> ನಗರದ ವಿವಿಧ ಉದ್ಯಾನಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದಕ್ಕಾಗಿ ನಗರಸಭೆಯ 15ನೇ ಹಣಕಾಸು ಯೋಜನೆ ಅಡಿಯಲ್ಲಿ 15 ಕಸದ ತೊಟ್ಟಿಗಳನ್ನು ಖರೀದಿಸಿದ್ದು, ಅದರಲ್ಲಿ 8 ಕಸದ ತೊಟ್ಟಿಗಳನ್ನು ನಗರದ ಹೃದಯ ಭಾಗದಲ್ಲಿರುವ ದೇವಿಕೆರೆ ಉದ್ಯಾನದಲ್ಲಿ ಅಳವಡಿಸಲಾಗಿದೆ.</p>.<p>ಬುಧವಾರ ದೇವಿಕೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಸದ ತೊಟ್ಟಿ ಅಳವಡಿಕೆಯನ್ನು ಸಾಂಕೇತಿಕವಾಗಿ ಉದ್ಘಾಟನೆ ಮಾಡಲಾಯಿತು. ಉಳಿದ ಕಸದ ತೊಟ್ಟಿಗಳನ್ನು ಅವಶ್ಯ ಇರುವ ಉದ್ಯಾನದಲ್ಲಿ ಅಳವಡಿಸಲಾಗುವುದು. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಹೇಳಿದರು.</p>.<p>ನಗರಸಭೆ ಉಪಾಧ್ಯಕ್ಷ ರಮಾಕಾಂತ ಭಟ್, ಸ್ಥಾಯಿ ಸಮಿತಿ ಅದ್ಯಕ್ಷ ರಾಘು ಶೆಟ್ಟಿ, ಸದಸ್ಯರಾದ ಕುಮಾರ ಬೋರ್ಕರ್, ಆನಂದ ಸಾಲೇರ್, ಗಣಪತಿ ನಾಯ್ಕ, ಪ್ರಭಾರಿ ಪೌರಾಯುಕ್ತ ಶಿವರಾಜ, ಕಂದಾಯ ಅಧಿಕಾರಿ ಆರ್.ಎಂ. ವೆರ್ಣೇಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ನಗರದ ವಿವಿಧ ಉದ್ಯಾನಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದಕ್ಕಾಗಿ ನಗರಸಭೆಯ 15ನೇ ಹಣಕಾಸು ಯೋಜನೆ ಅಡಿಯಲ್ಲಿ 15 ಕಸದ ತೊಟ್ಟಿಗಳನ್ನು ಖರೀದಿಸಿದ್ದು, ಅದರಲ್ಲಿ 8 ಕಸದ ತೊಟ್ಟಿಗಳನ್ನು ನಗರದ ಹೃದಯ ಭಾಗದಲ್ಲಿರುವ ದೇವಿಕೆರೆ ಉದ್ಯಾನದಲ್ಲಿ ಅಳವಡಿಸಲಾಗಿದೆ.</p>.<p>ಬುಧವಾರ ದೇವಿಕೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಸದ ತೊಟ್ಟಿ ಅಳವಡಿಕೆಯನ್ನು ಸಾಂಕೇತಿಕವಾಗಿ ಉದ್ಘಾಟನೆ ಮಾಡಲಾಯಿತು. ಉಳಿದ ಕಸದ ತೊಟ್ಟಿಗಳನ್ನು ಅವಶ್ಯ ಇರುವ ಉದ್ಯಾನದಲ್ಲಿ ಅಳವಡಿಸಲಾಗುವುದು. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಹೇಳಿದರು.</p>.<p>ನಗರಸಭೆ ಉಪಾಧ್ಯಕ್ಷ ರಮಾಕಾಂತ ಭಟ್, ಸ್ಥಾಯಿ ಸಮಿತಿ ಅದ್ಯಕ್ಷ ರಾಘು ಶೆಟ್ಟಿ, ಸದಸ್ಯರಾದ ಕುಮಾರ ಬೋರ್ಕರ್, ಆನಂದ ಸಾಲೇರ್, ಗಣಪತಿ ನಾಯ್ಕ, ಪ್ರಭಾರಿ ಪೌರಾಯುಕ್ತ ಶಿವರಾಜ, ಕಂದಾಯ ಅಧಿಕಾರಿ ಆರ್.ಎಂ. ವೆರ್ಣೇಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>