ಯೋಜನೆಯಲ್ಲಿ ಮಾರ್ಪಾಡು ಮಾಡಲು ಒತ್ತಾಯ
ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಒಳಪಡಬೇಕಾದರೆ ಕನಿಷ್ಠ ₹25 ಕೋಟಿ ವ್ಯವಹಾರ ನಡೆಸಬೇಕೆಂಬ ನಿಯಮವನ್ನು ರಾಷ್ಟ್ರೀಯ ತೋಟಗಾರಿಕಾ ಇಲಾಖೆ ರೂಪಿಸಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಚಿಕ್ಕ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದನ್ನು ರಾಜ್ಯ ತೋಟಗಾರಿಕಾ ಇಲಾಖೆಯ ಅಡಿಗೆ ತಂದು ಪ್ರತಿ ರೈತರು ಹಾಗೂ ಸಹಕಾರ ಸಂಘಸಂಸ್ಥೆಗಳು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಜಿಲ್ಲೆಯ ಸಂಸದರು ಮನವಿ ಸಲ್ಲಿಸಿ ಯೋಜನೆಯಲ್ಲಿ ಮಾರ್ಪಾಡು ಮಾಡಬೇಕೆಂಬ ಒತ್ತಾಯ ರೈತರಿಂದ ಕೇಳಿಬರುತ್ತಿದೆ.