<p><strong>ಶಿರಸಿ:</strong> ಪಾಕಿಸ್ತಾನದ ಜತೆ ಕಾದಾಟದಲ್ಲಿರುವ ಭಾರತೀಯ ಯೋಧರಿಗೆ ಶ್ರೇಯಸ್ಸಾಗಲೆಂದು ಪ್ರಾರ್ಥಿಸಿ ಶಾಸಕ ಭೀಮಣ್ಣ ನಾಯ್ಕ ನೇತೃತ್ವದಲ್ಲಿ ಶಿರಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಶನಿವಾರ ಪೂಜೆ ಸಲ್ಲಿಸಲಾಯಿತು.</p>.<p>ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಕಾರವಾಗಿ ಭಾರತ ಸೇನೆಯು ನಡೆಸುತ್ತಿರುವ ‘ಆಪರೇಷನ್ ಸಿಂಧೂರ’ ಯಶಸ್ಸಾಗಲಿ ಎಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲಾಯಿತು. </p>.<p>ಬಳಿಕ ದೇವಸ್ಥಾನದ ದ್ವಾರದಲ್ಲಿ ಭಾರತದ ಧ್ವಜವನ್ನು ಪ್ರದರ್ಶಿಸಿ ಮಾತನಾಡಿದ ಶಾಸಕ ಭೀಮಣ್ಣ, ‘ಪಾಕಿಸ್ತಾನದ ಉಗ್ರರು ಪಹಲ್ಗಾಮದಲ್ಲಿ ನಮ್ಮ ಭಾರತೀಯರ ನೆತ್ತರು ಹರಿಸಿರುವುದು ಸಹಿಸಲಾರದ ಅಕ್ಷಮ್ಯ ಅಪರಾಧ. ಇದಕ್ಕೆ ಪ್ರತಿಕಾರವಾಗಿ ನಾವು ಪಾಕಿಸ್ತಾನಕ್ಕೆ ಊಹಿಸಲಾಗದ, ಮುಟ್ಟಿ ನೋಡಿಕೊಳ್ಳುವಂತಹ ತಕ್ಕ ಪಾಠ ಕಲಿಸುತ್ತಿದ್ದೇವೆ’ ಎಂದರು.</p>.<p>ನಗರ ಯೋಜನಾ ಪ್ರಾಧಿಕಾರದ ಅದ್ಯಕ್ಷ ಜಗದೀಶ ಗೌಡ, ಪ್ರಮುಖರಾದ ಸತೀಶ ನಾಯ್ಕ, ನಾಗರಾಜ ಮುರುಡೇಶ್ವರ, ಪ್ರದೀಪ ಶೆಟ್ಟಿ, ಗಣೇಶ ದಾವಣಗೆರೆ, ಶೈಲೇಶ ಜೋಗಳೆಕರ್, ಜೋಫಿ ಪೀಟರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಪಾಕಿಸ್ತಾನದ ಜತೆ ಕಾದಾಟದಲ್ಲಿರುವ ಭಾರತೀಯ ಯೋಧರಿಗೆ ಶ್ರೇಯಸ್ಸಾಗಲೆಂದು ಪ್ರಾರ್ಥಿಸಿ ಶಾಸಕ ಭೀಮಣ್ಣ ನಾಯ್ಕ ನೇತೃತ್ವದಲ್ಲಿ ಶಿರಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಶನಿವಾರ ಪೂಜೆ ಸಲ್ಲಿಸಲಾಯಿತು.</p>.<p>ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಕಾರವಾಗಿ ಭಾರತ ಸೇನೆಯು ನಡೆಸುತ್ತಿರುವ ‘ಆಪರೇಷನ್ ಸಿಂಧೂರ’ ಯಶಸ್ಸಾಗಲಿ ಎಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲಾಯಿತು. </p>.<p>ಬಳಿಕ ದೇವಸ್ಥಾನದ ದ್ವಾರದಲ್ಲಿ ಭಾರತದ ಧ್ವಜವನ್ನು ಪ್ರದರ್ಶಿಸಿ ಮಾತನಾಡಿದ ಶಾಸಕ ಭೀಮಣ್ಣ, ‘ಪಾಕಿಸ್ತಾನದ ಉಗ್ರರು ಪಹಲ್ಗಾಮದಲ್ಲಿ ನಮ್ಮ ಭಾರತೀಯರ ನೆತ್ತರು ಹರಿಸಿರುವುದು ಸಹಿಸಲಾರದ ಅಕ್ಷಮ್ಯ ಅಪರಾಧ. ಇದಕ್ಕೆ ಪ್ರತಿಕಾರವಾಗಿ ನಾವು ಪಾಕಿಸ್ತಾನಕ್ಕೆ ಊಹಿಸಲಾಗದ, ಮುಟ್ಟಿ ನೋಡಿಕೊಳ್ಳುವಂತಹ ತಕ್ಕ ಪಾಠ ಕಲಿಸುತ್ತಿದ್ದೇವೆ’ ಎಂದರು.</p>.<p>ನಗರ ಯೋಜನಾ ಪ್ರಾಧಿಕಾರದ ಅದ್ಯಕ್ಷ ಜಗದೀಶ ಗೌಡ, ಪ್ರಮುಖರಾದ ಸತೀಶ ನಾಯ್ಕ, ನಾಗರಾಜ ಮುರುಡೇಶ್ವರ, ಪ್ರದೀಪ ಶೆಟ್ಟಿ, ಗಣೇಶ ದಾವಣಗೆರೆ, ಶೈಲೇಶ ಜೋಗಳೆಕರ್, ಜೋಫಿ ಪೀಟರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>