<p><strong>ಶಿರಸಿ</strong>: ಶಿರಸಿ ಪ್ರತ್ಯೇಕ ಜಿಲ್ಲೆ ಹಾಗೂ ಬನವಾಸಿ ಹೊಸ ತಾಲ್ಲೂಕು ರಚನೆಗೆ ಆಗ್ರಹಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿಯವರು ಸೋಮವಾರ ನಗರದಲ್ಲಿರುವ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಕೆಲದಿನಗಳ ಹಿಂದೆ ಪತ್ರ ಚಳುವಳಿ ಆರಂಭಿಸಿದ್ದ ಸಮಿತಿ ಈಗ ವಿಧಾನ ಸಭಾಧ್ಯಕ್ಷರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆ ರಚನೆಗೆ ಒತ್ತಾಯಿಸಿ ಘೋಷಣೆ ಕೂಗಲಾಯಿತು.</p>.<p>ಬನವಾಸಿ ತಾಲ್ಲೂಕಾಗಲು ಅರ್ಹತೆ ಹೊಂದಿದ್ದು, ಜಿಲ್ಲೆಯ ಘಟ್ಟದ ಮೇಲಿನ ತಾಲ್ಲೂಕುಗಳನ್ನು ಸೇರಿಸಿ ಹೊಸ ಜಿಲ್ಲೆ ಹಾಗೂ ಬನವಾಸಿ ಹೊಸ ತಾಲ್ಲೂಕು ರಚನೆಗೆ ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು. ಕಾಗೇರಿ ಅವರ ನಾಯಕತ್ವದಲ್ಲೇ ಈ ಕೆಲಸವಾಗಲಿ ಎಂದು ಒತ್ತಾಯಿಸಿದರು.</p>.<p>ಸಮಿತಿಯ ಉಪೇಂದ್ರ ಪೈ, ಮಂಜು ಮೊಗೇರ, ಎಮ್.ಎಮ್.ಭಟ್ಟ, ಪವಿತ್ರಾ ಹೊಸೂರು, ಪರಮಾನಂದ ಹೆಗಡೆ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಶಿರಸಿ ಪ್ರತ್ಯೇಕ ಜಿಲ್ಲೆ ಹಾಗೂ ಬನವಾಸಿ ಹೊಸ ತಾಲ್ಲೂಕು ರಚನೆಗೆ ಆಗ್ರಹಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿಯವರು ಸೋಮವಾರ ನಗರದಲ್ಲಿರುವ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಕೆಲದಿನಗಳ ಹಿಂದೆ ಪತ್ರ ಚಳುವಳಿ ಆರಂಭಿಸಿದ್ದ ಸಮಿತಿ ಈಗ ವಿಧಾನ ಸಭಾಧ್ಯಕ್ಷರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆ ರಚನೆಗೆ ಒತ್ತಾಯಿಸಿ ಘೋಷಣೆ ಕೂಗಲಾಯಿತು.</p>.<p>ಬನವಾಸಿ ತಾಲ್ಲೂಕಾಗಲು ಅರ್ಹತೆ ಹೊಂದಿದ್ದು, ಜಿಲ್ಲೆಯ ಘಟ್ಟದ ಮೇಲಿನ ತಾಲ್ಲೂಕುಗಳನ್ನು ಸೇರಿಸಿ ಹೊಸ ಜಿಲ್ಲೆ ಹಾಗೂ ಬನವಾಸಿ ಹೊಸ ತಾಲ್ಲೂಕು ರಚನೆಗೆ ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು. ಕಾಗೇರಿ ಅವರ ನಾಯಕತ್ವದಲ್ಲೇ ಈ ಕೆಲಸವಾಗಲಿ ಎಂದು ಒತ್ತಾಯಿಸಿದರು.</p>.<p>ಸಮಿತಿಯ ಉಪೇಂದ್ರ ಪೈ, ಮಂಜು ಮೊಗೇರ, ಎಮ್.ಎಮ್.ಭಟ್ಟ, ಪವಿತ್ರಾ ಹೊಸೂರು, ಪರಮಾನಂದ ಹೆಗಡೆ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>