<p>ಶಿರಸಿ: ‘ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೀಡಿದ ಅರ್ಜಿಗಳ ಕುರಿತು ಯಾವುದೇ ಇಲಾಖೆ ಸರಿಯಾಗಿ ಸ್ಪಂದಿಸದಿರುವುದು ಖೇದಕರ. ಈ ಕೂಡಲೇ ಎಲ್ಲಾ ಬಾಕಿ ಅರ್ಜಿಗಳನ್ನು ಇತ್ಯರ್ಥಪಡಿಸಿ, ಮೇ 15ರೊಳಗೆ ತಹಶೀಲ್ದಾರರಿಗೆ ಸಮಗ್ರ ವರದಿ ಸಲ್ಲಿಸಬೇಕು’ ಎಂದು ಶಾಸಕ ಭೀಮಣ್ಣ ನಾಯ್ಕ ಎಚ್ಚರಿಕೆ ನೀಡಿದರು.</p>.<p>ಸೋಮವಾರ ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಹೋಬಳಿ ಮಟ್ಟದ ಜನಸ್ಪಂದನದಲ್ಲಿ ಬಂದ 428 ಅರ್ಜಿಗಳ ಪೈಕಿ ಕೇವಲ 4 ಅರ್ಜಿಗಳು ಮಾತ್ರ ವಿಲೇವಾರಿ ಆಗಿರುವುದು ಸರಿಯಲ್ಲ. ಜನರು ವಿಶ್ವಾಸದಿಂದ ನೀಡಿದ ಅರ್ಜಿಗಳಿಗೆ ತಾರ್ಕಿಕ ಅಂತ್ಯ ಹಾಡದ ಅಧಿಕಾರಿಗಳ ಧೋರಣೆ ಖಂಡನೀಯ. ಮೇ 15ರೊಳಗೆ ತಹಶೀಲ್ದಾರರಿಗೆ ಸಮಗ್ರ ವರದಿ ಸಲ್ಲಿಕೆಯಾಗಬೇಕು. ಇಲ್ಲದಿದ್ದರೆ ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಅನಿವಾರ್ಯ’ ಎಂದರು.</p>.<p>‘ತಾಲ್ಲೂಕಿನ 32 ಮಳೆ ಮಾಪನ ಯಂತ್ರಗಳಲ್ಲಿ 16 ಯಂತ್ರಗಳು ಕೆಟ್ಟು ನಿಂತಿವೆ. ಇದರಿಂದಾಗಿ ಬೆಳೆ ವಿಮೆ ಪರಿಹಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ. ಒಂದು ವಾರದೊಳಗೆ ಈ ಕುರಿತು ಗ್ರಾಮ ಪಂಚಾಯಿತಿಗಳಿಂದ ತಹಶೀಲ್ದಾರ್ ಅವರಿಗೆ ವರದಿ ನೀಡಬೇಕು’ ಎಂದು ಸೂಚಿಸಿದ ಅವರು, ‘ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾಯಂ ನೀರಿನ ಸಮಸ್ಯೆ ಇರುವ ಪ್ರದೇಶಗಳ ವರದಿ ಸಿದ್ಧಪಡಿಸಿ ಶಾಶ್ವತ ಪರಿಹಾರಕ್ಕೆ ಕ್ರಮವಹಿಸಬೇಕು’ ಎಂದು ಸೂಚಿಸಿದರು.</p>.<p>‘ಲ್ಯಾಂಡ್ ಆರ್ಮಿ, ನಿರ್ಮಿತಿ ಕೇಂದ್ರಗಳ ಕಾಮಗಾರಿಗಳಲ್ಲಿ ಮರಳಿನ ಬದಲು ಕಲ್ಲಿನ ದೂಳು ಬಳಸುತ್ತಿರುವ ಬಗ್ಗೆ ದೂರುಗಳಿದ್ದು, ಗುಣಮಟ್ಟ ಕಾಯ್ದುಕೊಳ್ಳಬೇಕು’ ಎಂದು ಎಚ್ಚರಿಸಿದರು. ನವೆಂಬರ್ ವೇಳೆಗೆ ಹೊಸ ಆಡಳಿತ ಸಂಕೀರ್ಣ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.</p>.<p>ಸಭೆಯಲ್ಲಿ ತಹಶೀಲ್ದಾರ್ ಪಟ್ಟರಾಜ ಗೌಡ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಬಿ.ಪಿ.ಸತೀಶ, ಇಒ ಚನ್ನಬಸಪ್ಪ ಹಾವಣಗಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-20-811782444</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೀಡಿದ ಅರ್ಜಿಗಳ ಕುರಿತು ಯಾವುದೇ ಇಲಾಖೆ ಸರಿಯಾಗಿ ಸ್ಪಂದಿಸದಿರುವುದು ಖೇದಕರ. ಈ ಕೂಡಲೇ ಎಲ್ಲಾ ಬಾಕಿ ಅರ್ಜಿಗಳನ್ನು ಇತ್ಯರ್ಥಪಡಿಸಿ, ಮೇ 15ರೊಳಗೆ ತಹಶೀಲ್ದಾರರಿಗೆ ಸಮಗ್ರ ವರದಿ ಸಲ್ಲಿಸಬೇಕು’ ಎಂದು ಶಾಸಕ ಭೀಮಣ್ಣ ನಾಯ್ಕ ಎಚ್ಚರಿಕೆ ನೀಡಿದರು.</p>.<p>ಸೋಮವಾರ ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಹೋಬಳಿ ಮಟ್ಟದ ಜನಸ್ಪಂದನದಲ್ಲಿ ಬಂದ 428 ಅರ್ಜಿಗಳ ಪೈಕಿ ಕೇವಲ 4 ಅರ್ಜಿಗಳು ಮಾತ್ರ ವಿಲೇವಾರಿ ಆಗಿರುವುದು ಸರಿಯಲ್ಲ. ಜನರು ವಿಶ್ವಾಸದಿಂದ ನೀಡಿದ ಅರ್ಜಿಗಳಿಗೆ ತಾರ್ಕಿಕ ಅಂತ್ಯ ಹಾಡದ ಅಧಿಕಾರಿಗಳ ಧೋರಣೆ ಖಂಡನೀಯ. ಮೇ 15ರೊಳಗೆ ತಹಶೀಲ್ದಾರರಿಗೆ ಸಮಗ್ರ ವರದಿ ಸಲ್ಲಿಕೆಯಾಗಬೇಕು. ಇಲ್ಲದಿದ್ದರೆ ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಅನಿವಾರ್ಯ’ ಎಂದರು.</p>.<p>‘ತಾಲ್ಲೂಕಿನ 32 ಮಳೆ ಮಾಪನ ಯಂತ್ರಗಳಲ್ಲಿ 16 ಯಂತ್ರಗಳು ಕೆಟ್ಟು ನಿಂತಿವೆ. ಇದರಿಂದಾಗಿ ಬೆಳೆ ವಿಮೆ ಪರಿಹಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ. ಒಂದು ವಾರದೊಳಗೆ ಈ ಕುರಿತು ಗ್ರಾಮ ಪಂಚಾಯಿತಿಗಳಿಂದ ತಹಶೀಲ್ದಾರ್ ಅವರಿಗೆ ವರದಿ ನೀಡಬೇಕು’ ಎಂದು ಸೂಚಿಸಿದ ಅವರು, ‘ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾಯಂ ನೀರಿನ ಸಮಸ್ಯೆ ಇರುವ ಪ್ರದೇಶಗಳ ವರದಿ ಸಿದ್ಧಪಡಿಸಿ ಶಾಶ್ವತ ಪರಿಹಾರಕ್ಕೆ ಕ್ರಮವಹಿಸಬೇಕು’ ಎಂದು ಸೂಚಿಸಿದರು.</p>.<p>‘ಲ್ಯಾಂಡ್ ಆರ್ಮಿ, ನಿರ್ಮಿತಿ ಕೇಂದ್ರಗಳ ಕಾಮಗಾರಿಗಳಲ್ಲಿ ಮರಳಿನ ಬದಲು ಕಲ್ಲಿನ ದೂಳು ಬಳಸುತ್ತಿರುವ ಬಗ್ಗೆ ದೂರುಗಳಿದ್ದು, ಗುಣಮಟ್ಟ ಕಾಯ್ದುಕೊಳ್ಳಬೇಕು’ ಎಂದು ಎಚ್ಚರಿಸಿದರು. ನವೆಂಬರ್ ವೇಳೆಗೆ ಹೊಸ ಆಡಳಿತ ಸಂಕೀರ್ಣ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.</p>.<p>ಸಭೆಯಲ್ಲಿ ತಹಶೀಲ್ದಾರ್ ಪಟ್ಟರಾಜ ಗೌಡ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಬಿ.ಪಿ.ಸತೀಶ, ಇಒ ಚನ್ನಬಸಪ್ಪ ಹಾವಣಗಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-20-811782444</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>