<p><strong>ಶಿರಸಿ</strong>: ಮನುಷ್ಯ ಜನ್ಮ ಅತ್ಯಂತ ಶ್ರೇಷ್ಠ. ಹಾಗಾಗಿ ಅದು ಪಾವನ ಆಗಬೇಕಾದರೆ ಅನನ್ಯ ಭಕ್ತಿಯಿಂದ ದೇವರನ್ನು ಪೂಜಿಸಬೇಕು. ಏಕಾಗ್ರತೆಯಿಂದ ಭಗವಂತನ ಧ್ಯಾನ ಮಾಡಿ ಜೀವನ ಪಾವನ ಮಾಡಿಕೊಳ್ಳಬೇಕು ಎಂದು ಕರ್ಕಿ ದೈವಜ್ಞ ಮಠಾಧೀಶ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿ ಹೇಳಿದರು.</p>.<p>ಅವರು ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಸುತ್ತಿರುವ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.</p>.<p>ಭಕ್ತಿಯೇ ಮುಕ್ತಿಗೆ ಕಾರಣ. ಅನನ್ಯ ಭಕ್ತಿಯಿಂದ ದೇವರನ್ನು ಆರಾಧಿಸಬೇಕು. ಮುಂದೆ ಮಾಡಿದರಾಯಿತು ಎಂದು ನಿರ್ಲಕ್ಷ ಮಾಡಬೇಡಿ. ಸಂಸಾರಿಗಳಾಗಿ ನಾವೇನು ಮಾಡುವುದು ಎನ್ನುವ ಉದಾಸೀನ ಬೇಡ. ಸಂಸಾರದಲ್ಲಿದ್ದೆ ಭಗವಂತನ ಧ್ಯಾನಕ್ಕೆ ಸಮಯ ಮೀಸಲಿಡಿ. ಜೀವನದಲ್ಲಿ ಸಮಸ್ಯೆ ಬರಬಹುದು. ಆ ಸಮಸ್ಯೆ ಎದುರಿಸಲು ಧೈರ್ಯ, ಶಕ್ತಿ ಆ ಭಗವಂತ ಕೊಡಬೇಕು. ಅದರಿಂದ ಹೊರಗೆ ಬರಲು ಅವನ ಆಶೀರ್ವಾದ ಬೇಕು. ಹಾಗಾಗಿ ಏಕಾಗ್ರತೆಯಿಂದ ದೇವರ ಧ್ಯಾನ ಮಾಡಿ. ಭಗವಂತನ ನಿರಂತರ ಸೇವೆಯಿಂದ ಜನ್ಮ ಸಾರ್ಥಕ ಆಗುತ್ತದೆ ಎಂದರು. ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಮನುಷ್ಯ ಜನ್ಮ ಅತ್ಯಂತ ಶ್ರೇಷ್ಠ. ಹಾಗಾಗಿ ಅದು ಪಾವನ ಆಗಬೇಕಾದರೆ ಅನನ್ಯ ಭಕ್ತಿಯಿಂದ ದೇವರನ್ನು ಪೂಜಿಸಬೇಕು. ಏಕಾಗ್ರತೆಯಿಂದ ಭಗವಂತನ ಧ್ಯಾನ ಮಾಡಿ ಜೀವನ ಪಾವನ ಮಾಡಿಕೊಳ್ಳಬೇಕು ಎಂದು ಕರ್ಕಿ ದೈವಜ್ಞ ಮಠಾಧೀಶ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿ ಹೇಳಿದರು.</p>.<p>ಅವರು ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಸುತ್ತಿರುವ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.</p>.<p>ಭಕ್ತಿಯೇ ಮುಕ್ತಿಗೆ ಕಾರಣ. ಅನನ್ಯ ಭಕ್ತಿಯಿಂದ ದೇವರನ್ನು ಆರಾಧಿಸಬೇಕು. ಮುಂದೆ ಮಾಡಿದರಾಯಿತು ಎಂದು ನಿರ್ಲಕ್ಷ ಮಾಡಬೇಡಿ. ಸಂಸಾರಿಗಳಾಗಿ ನಾವೇನು ಮಾಡುವುದು ಎನ್ನುವ ಉದಾಸೀನ ಬೇಡ. ಸಂಸಾರದಲ್ಲಿದ್ದೆ ಭಗವಂತನ ಧ್ಯಾನಕ್ಕೆ ಸಮಯ ಮೀಸಲಿಡಿ. ಜೀವನದಲ್ಲಿ ಸಮಸ್ಯೆ ಬರಬಹುದು. ಆ ಸಮಸ್ಯೆ ಎದುರಿಸಲು ಧೈರ್ಯ, ಶಕ್ತಿ ಆ ಭಗವಂತ ಕೊಡಬೇಕು. ಅದರಿಂದ ಹೊರಗೆ ಬರಲು ಅವನ ಆಶೀರ್ವಾದ ಬೇಕು. ಹಾಗಾಗಿ ಏಕಾಗ್ರತೆಯಿಂದ ದೇವರ ಧ್ಯಾನ ಮಾಡಿ. ಭಗವಂತನ ನಿರಂತರ ಸೇವೆಯಿಂದ ಜನ್ಮ ಸಾರ್ಥಕ ಆಗುತ್ತದೆ ಎಂದರು. ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>