ಈ ಕುರಿತು ಶುಕ್ರವಾರ ಮಾಹಿತಿ ನೀಡಿರುವ ಅವರು, ‘ಶಿರಸಿ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ಸರಾಸರಿ ₹ 414.66ರಂತೆ ₹ 29.57 ಕೋಟಿ, ಸಿದ್ದಾಪುರ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 428.60ರಂತೆ ₹ 13.48 ಕೋಟಿ, ಮುಂಡಗೋಡ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 625.93ರಂತೆ ₹ 9.26 ಕೋಟಿ, ಯಲ್ಲಾಪುರ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 458.88ರಂತೆ ₹ 16.78 ಕೋಟಿ, ಜೊಯಿಡಾ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 269.75ರಂತೆ ₹ 1.31 ಕೋಟಿ, ಅಂಕೋಲಾ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 471.96
ರಂತೆ ₹ 4.62 ಕೋಟಿ, ಕುಮಟಾ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 191.73ರಂತೆ ₹ 52.82 ಲಕ್ಷ, ಹೊನ್ನಾವರ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 190.17ರಂತೆ ₹ 1.76 ಕೋಟಿ, ಭಟ್ಕಳ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 335.56ರಂತೆ ₹ 1.06 ಕೋಟಿ ಪರಿಹಾರ ದೊರಕಿದೆ. ಹಳಿಯಾಳ ಮತ್ತು ಕಾರವಾರ ತಾಲ್ಲೂಕುಗಳಿಗೆ ಪರಿಹಾರ ದೊರೆತಿಲ್ಲ. ಮುಂದಿನ ಕಂತಿನಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.