‘ಗ್ರಾಮೀಣ ಭಾಗದ ರೈತರು, ಭಕ್ತರ ಮನೆಗಳಿಗೆ ಆಹ್ವಾನ ಪತ್ರಿಕೆ ತಲುಪುತ್ತದೆ. ಪ್ರತಿ ಊರಿಗೆ 200–300 ಆಮಂತ್ರಣ ಪತ್ರಿಕೆ ಕಳುಹಿಸಿದರೆ, ಊರವರೇ ಮುಂದಾಗಿ ಅದನ್ನು ಮನೆಗಳಿಗೆ ತಲುಪಿಸುತ್ತಾರೆ. ಮನೆಯಲ್ಲಿನ ವಿಶೇಷ ಕಾರ್ಯಕ್ರಮಕ್ಕೆ ಆಹ್ವಾನಿಸುವ ರೀತಿಯಲ್ಲಿಯೇ ಮಾರಿ ಜಾತ್ರೆ ಆಮಂತ್ರಣ ಕೂಡ ನೀಡುವುದು ವಿಶೇಷ’ ಎನ್ನುತ್ತಾರೆ ದೇವಾಲಯ ಧರ್ಮದರ್ಶಿ ಮಂಡಳದ ಉಪಾಧ್ಯಕ್ಷ ಸುಧೇಶ ಜೋಗಳೇಕರ್.