<p><strong>ಶಿರಸಿ:</strong> ಎರಡು ವರ್ಷಗಳಿಗೊಮ್ಮೆ ನಡೆಯುವ ಇಲ್ಲಿನ ಮಾರಿಕಾಂಬಾ ದೇವಿ ಜಾತ್ರೆ ವೇಳೆ ದೇವಿಯನ್ನು ಗದ್ದುಗೆಗೆ ಕರೆದೊಯ್ಯುವ ರಥ ನಿರ್ಮಾಣದ ಸಲುವಾಗಿ ಬಳಸಲು ಬೇಕಾದ ತಾರಿಮರಕ್ಕೆ ಕಚ್ಚು ಹಾಕುವ ಧಾರ್ಮಿಕ ಕಾರ್ಯ ಶುಕ್ರವಾರ ನಡೆಯಿತು.</p>.<p>ಬಿಕ್ನಳ್ಳಿ ಗ್ರಾಮದ ಖಾಸಗಿ ಜಮೀನಿನಲ್ಲಿದ್ದ ಮರವನ್ನು ಪಡೆಯಲಾಗುತ್ತಿದ್ದು, ಅದಕ್ಕೆ ಸಾಂಪ್ರದಾಯಿಕ ಪದ್ಧತಿಯಲ್ಲಿ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಮಂಡಳದವರು, ಬಾಬುದಾರರು, ಭಕ್ತರ ಸಮ್ಮುಖದಲ್ಲಿ ಪೂಜೆ ನಡೆದ ಬಳಿಕ ಮರದ ಬುಡಕ್ಕೆ ಕಚ್ಚು ಹಾಕಲಾಯಿತು.</p>.<p>ಉತ್ತರ ದಿಕ್ಕಿನ ನಾಲ್ಕನೇ ಹೊರಬೀಡು ನಡೆಯುವ ಗ್ರಾಮದಲ್ಲೇ ತಾರಿಮರ ಕಡಿಯುವ ಸಂಪ್ರದಾಯವಿದೆ. ಈ ಹಿಂದೆ ಎಸಳೆ ಗ್ರಾಮದ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಮರ ತರಲಾಗುತ್ತಿತ್ತು. ಈ ಕಾರಣಕ್ಕೆ ಆರು ವರ್ಷಗಳ ಹಿಂದೆ ದೇವಸ್ಥಾನದ ಅಂದಿನ ಧರ್ಮದರ್ಶಿ ಮಂಡಳದ ವಿರುದ್ಧ ಪ್ರಕರಣವೂ ದಾಖಲಾಗಿತ್ತು. ಹೀಗಾಗಿ ಮಾಲ್ಕಿ ಜಮೀನಿನಲ್ಲಿರುವ ಮರ ಪಡೆಯುವ ಸಂಪ್ರದಾಯ ಆರಂಭಗೊಂಡಿದೆ. </p>.<p>ಕಚ್ಚು ಹಾಕಲಾದ ತಾರಿಮರದ ತುಂಡುಗಳನ್ನು ಮಂಗಳವಾರ ಭಕ್ತರು, ಬಡಗಿಗಳು ಎತ್ತಿನ ಬಂಡಿಗಳ ಮೂಲಕ ದೇವಸ್ಥನದ ಎದುರು ತಂದು ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ರಥ ನಿರ್ಮಾಣ ಪ್ರಕ್ರಿಯೆ ಆರಂಭಗೊಳ್ಳುತ್ತದೆ ಎಂದು ದೇವಸ್ಥಾನದ ಧರ್ಮದರ್ಶಿ ಮಂಡಳದ ಅಧ್ಯಕ್ಷ ರವೀಂದ್ರ ಜಿ.ನಾಯ್ಕ ತಿಳಿಸಿದ್ದಾರೆ.</p>.<p>ವೃಕ್ಷ ಪೂಜೆ ಸಂದರ್ಭದಲ್ಲಿ ಶಾಸಕ ಭೀಮಣ್ಣ ನಾಯ್ಕ, ಉಪಾಧ್ಯಕ್ಷ ಸುಧೇಶ ಜೋಗಳೇಕರ, ಸದಸ್ಯರಾದ ಸುಧೀರ ಹಂದ್ರಾಳ, ವತ್ಸಲಾ ಹೆಗಡೆ, ಶಿವಾನಂದ ಶೆಟ್ಟಿ, ಬಾಬುದಾರ ಪ್ರಮುಖ ಜಗದೀಶ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಎರಡು ವರ್ಷಗಳಿಗೊಮ್ಮೆ ನಡೆಯುವ ಇಲ್ಲಿನ ಮಾರಿಕಾಂಬಾ ದೇವಿ ಜಾತ್ರೆ ವೇಳೆ ದೇವಿಯನ್ನು ಗದ್ದುಗೆಗೆ ಕರೆದೊಯ್ಯುವ ರಥ ನಿರ್ಮಾಣದ ಸಲುವಾಗಿ ಬಳಸಲು ಬೇಕಾದ ತಾರಿಮರಕ್ಕೆ ಕಚ್ಚು ಹಾಕುವ ಧಾರ್ಮಿಕ ಕಾರ್ಯ ಶುಕ್ರವಾರ ನಡೆಯಿತು.</p>.<p>ಬಿಕ್ನಳ್ಳಿ ಗ್ರಾಮದ ಖಾಸಗಿ ಜಮೀನಿನಲ್ಲಿದ್ದ ಮರವನ್ನು ಪಡೆಯಲಾಗುತ್ತಿದ್ದು, ಅದಕ್ಕೆ ಸಾಂಪ್ರದಾಯಿಕ ಪದ್ಧತಿಯಲ್ಲಿ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಮಂಡಳದವರು, ಬಾಬುದಾರರು, ಭಕ್ತರ ಸಮ್ಮುಖದಲ್ಲಿ ಪೂಜೆ ನಡೆದ ಬಳಿಕ ಮರದ ಬುಡಕ್ಕೆ ಕಚ್ಚು ಹಾಕಲಾಯಿತು.</p>.<p>ಉತ್ತರ ದಿಕ್ಕಿನ ನಾಲ್ಕನೇ ಹೊರಬೀಡು ನಡೆಯುವ ಗ್ರಾಮದಲ್ಲೇ ತಾರಿಮರ ಕಡಿಯುವ ಸಂಪ್ರದಾಯವಿದೆ. ಈ ಹಿಂದೆ ಎಸಳೆ ಗ್ರಾಮದ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಮರ ತರಲಾಗುತ್ತಿತ್ತು. ಈ ಕಾರಣಕ್ಕೆ ಆರು ವರ್ಷಗಳ ಹಿಂದೆ ದೇವಸ್ಥಾನದ ಅಂದಿನ ಧರ್ಮದರ್ಶಿ ಮಂಡಳದ ವಿರುದ್ಧ ಪ್ರಕರಣವೂ ದಾಖಲಾಗಿತ್ತು. ಹೀಗಾಗಿ ಮಾಲ್ಕಿ ಜಮೀನಿನಲ್ಲಿರುವ ಮರ ಪಡೆಯುವ ಸಂಪ್ರದಾಯ ಆರಂಭಗೊಂಡಿದೆ. </p>.<p>ಕಚ್ಚು ಹಾಕಲಾದ ತಾರಿಮರದ ತುಂಡುಗಳನ್ನು ಮಂಗಳವಾರ ಭಕ್ತರು, ಬಡಗಿಗಳು ಎತ್ತಿನ ಬಂಡಿಗಳ ಮೂಲಕ ದೇವಸ್ಥನದ ಎದುರು ತಂದು ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ರಥ ನಿರ್ಮಾಣ ಪ್ರಕ್ರಿಯೆ ಆರಂಭಗೊಳ್ಳುತ್ತದೆ ಎಂದು ದೇವಸ್ಥಾನದ ಧರ್ಮದರ್ಶಿ ಮಂಡಳದ ಅಧ್ಯಕ್ಷ ರವೀಂದ್ರ ಜಿ.ನಾಯ್ಕ ತಿಳಿಸಿದ್ದಾರೆ.</p>.<p>ವೃಕ್ಷ ಪೂಜೆ ಸಂದರ್ಭದಲ್ಲಿ ಶಾಸಕ ಭೀಮಣ್ಣ ನಾಯ್ಕ, ಉಪಾಧ್ಯಕ್ಷ ಸುಧೇಶ ಜೋಗಳೇಕರ, ಸದಸ್ಯರಾದ ಸುಧೀರ ಹಂದ್ರಾಳ, ವತ್ಸಲಾ ಹೆಗಡೆ, ಶಿವಾನಂದ ಶೆಟ್ಟಿ, ಬಾಬುದಾರ ಪ್ರಮುಖ ಜಗದೀಶ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>