<p><strong>ಶಿರಸಿ</strong>: ಔಷಧ ಮಾರಾಟ ಪ್ರತಿನಿಧಿಗಳು ಅತ್ಯಂತ ಶ್ರಮಜೀವಿಗಳು. ತಮ್ಮ ವೃತ್ತಿಯ ಜತೆಗೆ ಸಂಘಟನೆ ಮೂಲಕ ಸಾಮಾಜಿಕ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ನಗರ ಠಾಣೆ ಪಿಎಸ್ಐ ನಾಗಪ್ಪ ಬಿ., ಹೇಳಿದರು. </p>.<p>ನಗರದ ರೋಟರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಶಿರಸಿ ಘಟಕದ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸ್ವಯಂ ಕಾಯಕದ ಜತೆ ಸಮಾಜದ ಪರ ಚಿಂತನೆ ಇಂದಿನ ಅಗತ್ಯತೆಯಾಗಿದೆ ಎಂದರು. </p>.<p>ವೈದ್ಯ ಡಾ. ಜೆ.ಬಿ.ಕಾರಂತ ಮಾತನಾಡಿ, ಪ್ರತಿ ವರ್ಷ ರಾಷ್ಟ್ರೀಯ ಹಬ್ಬದ ದಿನ ಸಂಘವು ರಕ್ತದಾನ ಮಾಡುವ ವಿಚಾರ ಶ್ಲಾಘನೀಯ ಎಂದರು.</p>.<p>ಸಂಘದ ರಾಜ್ಯ ಘಟಕದ ಅಧ್ಯಕ್ಷ ಆನಂದರಾಜು ಕೆ.ಎಚ್. ಮಾತನಾಡಿ, ಔಷಧಗಳ ಬೆಲೆ ಕಡಿಮೆ ಮಾಡಬೇಕು ಹಾಗೂ ಕಾರ್ಮಿಕರ ಪರವಾದ ಕಾನೂನು ಕಡ್ಡಾಯಗೊಳಿಸಲು ಸರ್ಕಾರವನ್ನು ಒತ್ತಾಯಿಸಿದರು.</p>.<p>ಪ್ರತಿ ವರ್ಷದಂತೆ ನಿವೃತ್ತಿ ಅಂಚಿನಲ್ಲಿ ಇರುವ ಇಬ್ಬರು ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.</p>.<p>ಶಿರಸಿ ಘಟಕದ ಅಧ್ಯಕ್ಷ ಸಂತೋಷ ನವಿಲಗೋಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಾರಿಣಿ ಸದಸ್ಯ ಮಧುಕರ ಹಳ್ಕರ್ ಹಾಗೂ ರಾಜ್ಯ ಕಾರ್ಯದರ್ಶಿ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. </p>.<p>ಅರುಣ ಕೊಪ್ಪ ಸ್ವಾಗತಿಸಿದರು. ಶಿರಸಿ ಘಟಕದ ಕಾರ್ಯದರ್ಶಿ ರಮೇಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕದ ಖಜಾಂಚಿ ವಿನಾಯಕ ನಾಯ್ಕ, ಜಂಟಿ ಕಾರ್ಯದರ್ಶಿಗಳಾದ ನಿತಿನ್ ಪಾಲೇಕರ್, ಕೃಷ್ಣಮೂರ್ತಿ ನಾಯ್ಕ, ನವೀನ ನಾಯ್ಕ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಔಷಧ ಮಾರಾಟ ಪ್ರತಿನಿಧಿಗಳು ಅತ್ಯಂತ ಶ್ರಮಜೀವಿಗಳು. ತಮ್ಮ ವೃತ್ತಿಯ ಜತೆಗೆ ಸಂಘಟನೆ ಮೂಲಕ ಸಾಮಾಜಿಕ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ನಗರ ಠಾಣೆ ಪಿಎಸ್ಐ ನಾಗಪ್ಪ ಬಿ., ಹೇಳಿದರು. </p>.<p>ನಗರದ ರೋಟರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಶಿರಸಿ ಘಟಕದ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸ್ವಯಂ ಕಾಯಕದ ಜತೆ ಸಮಾಜದ ಪರ ಚಿಂತನೆ ಇಂದಿನ ಅಗತ್ಯತೆಯಾಗಿದೆ ಎಂದರು. </p>.<p>ವೈದ್ಯ ಡಾ. ಜೆ.ಬಿ.ಕಾರಂತ ಮಾತನಾಡಿ, ಪ್ರತಿ ವರ್ಷ ರಾಷ್ಟ್ರೀಯ ಹಬ್ಬದ ದಿನ ಸಂಘವು ರಕ್ತದಾನ ಮಾಡುವ ವಿಚಾರ ಶ್ಲಾಘನೀಯ ಎಂದರು.</p>.<p>ಸಂಘದ ರಾಜ್ಯ ಘಟಕದ ಅಧ್ಯಕ್ಷ ಆನಂದರಾಜು ಕೆ.ಎಚ್. ಮಾತನಾಡಿ, ಔಷಧಗಳ ಬೆಲೆ ಕಡಿಮೆ ಮಾಡಬೇಕು ಹಾಗೂ ಕಾರ್ಮಿಕರ ಪರವಾದ ಕಾನೂನು ಕಡ್ಡಾಯಗೊಳಿಸಲು ಸರ್ಕಾರವನ್ನು ಒತ್ತಾಯಿಸಿದರು.</p>.<p>ಪ್ರತಿ ವರ್ಷದಂತೆ ನಿವೃತ್ತಿ ಅಂಚಿನಲ್ಲಿ ಇರುವ ಇಬ್ಬರು ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.</p>.<p>ಶಿರಸಿ ಘಟಕದ ಅಧ್ಯಕ್ಷ ಸಂತೋಷ ನವಿಲಗೋಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಾರಿಣಿ ಸದಸ್ಯ ಮಧುಕರ ಹಳ್ಕರ್ ಹಾಗೂ ರಾಜ್ಯ ಕಾರ್ಯದರ್ಶಿ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. </p>.<p>ಅರುಣ ಕೊಪ್ಪ ಸ್ವಾಗತಿಸಿದರು. ಶಿರಸಿ ಘಟಕದ ಕಾರ್ಯದರ್ಶಿ ರಮೇಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕದ ಖಜಾಂಚಿ ವಿನಾಯಕ ನಾಯ್ಕ, ಜಂಟಿ ಕಾರ್ಯದರ್ಶಿಗಳಾದ ನಿತಿನ್ ಪಾಲೇಕರ್, ಕೃಷ್ಣಮೂರ್ತಿ ನಾಯ್ಕ, ನವೀನ ನಾಯ್ಕ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>