<p><strong>ಶಿರಸಿ:</strong> ಕ್ಷೇತ್ರಾದ್ಯಂತ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸುವುದು ಮತ್ತು ಜನಸಾಮಾನ್ಯರ ಮನೆಬಾಗಿಲಿಗೆ ಸರ್ಕಾರಿ ಸೇವೆಗಳನ್ನು ತಲುಪಿಸುವುದು ಕಾಂಗ್ರೆಸ್ ಸರ್ಕಾರದ ಆದ್ಯತೆಯಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. </p>.<p>ಸೋಮವಾರ ಇಸಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರಾಯಣಗುರು ನಗರದ ಅಭಯ ವಿನಾಯಕ ದೇವಸ್ಥಾನದ ಎದುರಿನ ರಸ್ತೆ ಸುಧಾರಣೆಗೆ ₹50 ಲಕ್ಷ, ಚಿಪಗಿ ಫಾರೆಸ್ಟ್ ಕಾಲೊನಿ ರಸ್ತೆಗೆ ₹20 ಲಕ್ಷ, ಖಾನನಗರ ಸಂಪರ್ಕ ರಸ್ತೆಗೆ ₹25 ಲಕ್ಷ ಹಾಗೂ ಮೊಸರುಗುಳಿ ಮತ್ತು ಜಂಬೆಕೊಪ್ಪ ಭಾಗದ ರಸ್ತೆ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿ ಅವರು ಮಾತನಾಡಿದರು.</p>.<p>’ಧಾರ್ಮಿಕ ಕೇಂದ್ರಗಳಿಗೆ ಮತ್ತು ಗ್ರಾಮೀಣ ವಸತಿ ಪ್ರದೇಶಗಳಿಗೆ ಉತ್ತಮ ರಸ್ತೆ ನಿರ್ಮಿಸುವ ಮೂಲಕ ಭಕ್ತರಿಗೆ ಹಾಗೂ ರೈತರಿಗೆ ಅನುಕೂಲ ಮಾಡಿಕೊಡುವುದು ಸರ್ಕಾರದ ಸಂಕಲ್ಪವಾಗಿದೆ. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು’ ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಇಸಳೂರಿನಲ್ಲಿ ನೂತನ ಗ್ರಾಮ ಒನ್ ಕೇಂದ್ರ ಉದ್ಘಾಟಿಸಿದ ಶಾಸಕರು, ‘ಗ್ರಾಮೀಣ ಜನರು ಸಣ್ಣಪುಟ್ಟ ಕೆಲಸಗಳಿಗಾಗಿ ನಗರಕ್ಕೆ ಅಲೆಯುವುದನ್ನು ತಪ್ಪಿಸಲು ಈ ಕೇಂದ್ರ ಸಹಕಾರಿಯಾಗಲಿದೆ’ ಎಂದರು. </p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ಶೆಟ್ಟರ, ಪ್ರಮುಖರಾದ ವಿವೇಕ ಪೂಜಾರಿ, ದುಶ್ಯಂತರಾಜ್ ಕೊಲ್ಲೂರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಕ್ಷೇತ್ರಾದ್ಯಂತ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸುವುದು ಮತ್ತು ಜನಸಾಮಾನ್ಯರ ಮನೆಬಾಗಿಲಿಗೆ ಸರ್ಕಾರಿ ಸೇವೆಗಳನ್ನು ತಲುಪಿಸುವುದು ಕಾಂಗ್ರೆಸ್ ಸರ್ಕಾರದ ಆದ್ಯತೆಯಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. </p>.<p>ಸೋಮವಾರ ಇಸಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರಾಯಣಗುರು ನಗರದ ಅಭಯ ವಿನಾಯಕ ದೇವಸ್ಥಾನದ ಎದುರಿನ ರಸ್ತೆ ಸುಧಾರಣೆಗೆ ₹50 ಲಕ್ಷ, ಚಿಪಗಿ ಫಾರೆಸ್ಟ್ ಕಾಲೊನಿ ರಸ್ತೆಗೆ ₹20 ಲಕ್ಷ, ಖಾನನಗರ ಸಂಪರ್ಕ ರಸ್ತೆಗೆ ₹25 ಲಕ್ಷ ಹಾಗೂ ಮೊಸರುಗುಳಿ ಮತ್ತು ಜಂಬೆಕೊಪ್ಪ ಭಾಗದ ರಸ್ತೆ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿ ಅವರು ಮಾತನಾಡಿದರು.</p>.<p>’ಧಾರ್ಮಿಕ ಕೇಂದ್ರಗಳಿಗೆ ಮತ್ತು ಗ್ರಾಮೀಣ ವಸತಿ ಪ್ರದೇಶಗಳಿಗೆ ಉತ್ತಮ ರಸ್ತೆ ನಿರ್ಮಿಸುವ ಮೂಲಕ ಭಕ್ತರಿಗೆ ಹಾಗೂ ರೈತರಿಗೆ ಅನುಕೂಲ ಮಾಡಿಕೊಡುವುದು ಸರ್ಕಾರದ ಸಂಕಲ್ಪವಾಗಿದೆ. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು’ ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಇಸಳೂರಿನಲ್ಲಿ ನೂತನ ಗ್ರಾಮ ಒನ್ ಕೇಂದ್ರ ಉದ್ಘಾಟಿಸಿದ ಶಾಸಕರು, ‘ಗ್ರಾಮೀಣ ಜನರು ಸಣ್ಣಪುಟ್ಟ ಕೆಲಸಗಳಿಗಾಗಿ ನಗರಕ್ಕೆ ಅಲೆಯುವುದನ್ನು ತಪ್ಪಿಸಲು ಈ ಕೇಂದ್ರ ಸಹಕಾರಿಯಾಗಲಿದೆ’ ಎಂದರು. </p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ಶೆಟ್ಟರ, ಪ್ರಮುಖರಾದ ವಿವೇಕ ಪೂಜಾರಿ, ದುಶ್ಯಂತರಾಜ್ ಕೊಲ್ಲೂರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>