<p>ಶಿರಸಿ: ತಾಲ್ಲೂಕಿನ ಮುರೇಗಾರ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರ ನಿಧಿಯಿಂದ ಮಂಜೂರಾದ ಲಕ್ಷಾಂತರ ರೂಪಾಯಿ ಅನುದಾನವು ಗುತ್ತಿಗೆದಾರರ ನಿಷ್ಕಾಳಜಿಯಿಂದಾಗಿ ವ್ಯರ್ಥವಾಗುತ್ತಿದ್ದು, ಶಾಸಕರು ಕೂಡಲೇ ಈ ಅವೈಜ್ಞಾನಿಕ ಕಾಮಗಾರಿಯನ್ನು ನಿಲ್ಲಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ಸ್ಥಳದಲ್ಲಿ ರಸ್ತೆ ನಿರ್ಮಿಸಲು ಸೂಚಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಹಲವು ವರ್ಷಗಳ ನಿರಂತರ ಬೇಡಿಕೆಯ ನಂತರ ಗ್ರಾಮಕ್ಕೆ ಶಾಸಕರ ಅನುದಾನದಡಿ ₹15 ಲಕ್ಷ ರಸ್ತೆ ಅಭಿವೃದ್ಧಿಗೆ ಮಂಜೂರಾಗಿದೆ. ಆದರೆ, ಈ ಹಣವನ್ನು ತೀರಾ ಕಡಿಮೆ ಜನಸಂಚಾರವಿರುವ ಹಾಗೂ ಮನೆಗಳೇ ಇಲ್ಲದ ಮುರೇಗಾರ-ಮುದ್ದಿನಪಾಲ ರಸ್ತೆ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ. ಜನರು ಓಡಾಡದ ಹಾಗೂ ಮನೆಗಳೇ ಇಲ್ಲದ ಕಾಡಿನ ಹಾದಿಯಂತಹ ರಸ್ತೆಯನ್ನು ಡಾಂಬರೀಕರಣ ಮಾಡುತ್ತಿರುವುದು ಶಾಸಕರ ಅನುದಾನದ ದುರುಪಯೋಗ’ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಗ್ರಾಮಸ್ಥರ ಪ್ರಕಾರ, ಮುರೇಗಾರ ಗ್ರಾಮಕ್ಕೆ ಎರಡು ಸಂಪರ್ಕ ರಸ್ತೆಗಳಿದ್ದು, ಸದ್ಯ ಕಾಮಗಾರಿ ನಡೆಯುತ್ತಿರುವ ರಸ್ತೆಗಿಂತ ಸಾಲಕಣಿ-ಮುರೇಗಾರ ರಸ್ತೆಯು ಅತ್ಯಂತ ಪ್ರಮುಖವಾದುದಾಗಿದೆ. ಸುಮಾರು 4 ಕಿ.ಮೀ. ಉದ್ದದ ಈ ಮುಖ್ಯ ರಸ್ತೆಯಲ್ಲಿ ಈಗಾಗಲೇ 2 ಕಿ.ಮೀ. ಡಾಂಬರೀಕರಣವಾಗಿದ್ದು, ಉಳಿದ ಭಾಗ ಸಂಪೂರ್ಣ ಮೆಟ್ಲಿಂಗ್ ಆಗಿದೆ. ನಿತ್ಯ ನೂರಾರು ಜನ ಬಳಸುವ ಈ ಮುಖ್ಯರಸ್ತೆಯನ್ನು ಅಭಿವೃದ್ಧಿಪಡಿಸುವುದನ್ನು ಬಿಟ್ಟು, ಅಪ್ರಯೋಜಕ ರಸ್ತೆಗೆ ಹಣ ವಿನಿಯೋಗಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>‘ಗ್ರಾಮದ ಅಭಿವೃದ್ಧಿಗೆಂದು ಮಂಜೂರಾದ ಹಣವು ಯಾವುದೋ ದುರುದ್ದೇಶಕ್ಕೋ ಅಥವಾ ಗುತ್ತಿಗೆದಾರರ ಸ್ವಾರ್ಥಕ್ಕೋ ವ್ಯರ್ಥವಾಗುತ್ತಿರುವುದು ಶಾಸಕರ ಗಮನಕ್ಕೆ ಬಂದಂತಿಲ್ಲ. ಕೂಡಲೇ ಶಾಸಕರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಹಾಲಿಯಿರುವ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು. ಸಾರ್ವಜನಿಕರಿಗೆ ನಿಜವಾಗಿಯೂ ಅಗತ್ಯವಿರುವ ಸಾಲಕಣಿ-ಮುರೇಗಾರ ಮುಖ್ಯರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು’ ಎಂದು ಗ್ರಾಮಸ್ಥರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-20-662305847</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ತಾಲ್ಲೂಕಿನ ಮುರೇಗಾರ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರ ನಿಧಿಯಿಂದ ಮಂಜೂರಾದ ಲಕ್ಷಾಂತರ ರೂಪಾಯಿ ಅನುದಾನವು ಗುತ್ತಿಗೆದಾರರ ನಿಷ್ಕಾಳಜಿಯಿಂದಾಗಿ ವ್ಯರ್ಥವಾಗುತ್ತಿದ್ದು, ಶಾಸಕರು ಕೂಡಲೇ ಈ ಅವೈಜ್ಞಾನಿಕ ಕಾಮಗಾರಿಯನ್ನು ನಿಲ್ಲಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ಸ್ಥಳದಲ್ಲಿ ರಸ್ತೆ ನಿರ್ಮಿಸಲು ಸೂಚಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಹಲವು ವರ್ಷಗಳ ನಿರಂತರ ಬೇಡಿಕೆಯ ನಂತರ ಗ್ರಾಮಕ್ಕೆ ಶಾಸಕರ ಅನುದಾನದಡಿ ₹15 ಲಕ್ಷ ರಸ್ತೆ ಅಭಿವೃದ್ಧಿಗೆ ಮಂಜೂರಾಗಿದೆ. ಆದರೆ, ಈ ಹಣವನ್ನು ತೀರಾ ಕಡಿಮೆ ಜನಸಂಚಾರವಿರುವ ಹಾಗೂ ಮನೆಗಳೇ ಇಲ್ಲದ ಮುರೇಗಾರ-ಮುದ್ದಿನಪಾಲ ರಸ್ತೆ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ. ಜನರು ಓಡಾಡದ ಹಾಗೂ ಮನೆಗಳೇ ಇಲ್ಲದ ಕಾಡಿನ ಹಾದಿಯಂತಹ ರಸ್ತೆಯನ್ನು ಡಾಂಬರೀಕರಣ ಮಾಡುತ್ತಿರುವುದು ಶಾಸಕರ ಅನುದಾನದ ದುರುಪಯೋಗ’ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಗ್ರಾಮಸ್ಥರ ಪ್ರಕಾರ, ಮುರೇಗಾರ ಗ್ರಾಮಕ್ಕೆ ಎರಡು ಸಂಪರ್ಕ ರಸ್ತೆಗಳಿದ್ದು, ಸದ್ಯ ಕಾಮಗಾರಿ ನಡೆಯುತ್ತಿರುವ ರಸ್ತೆಗಿಂತ ಸಾಲಕಣಿ-ಮುರೇಗಾರ ರಸ್ತೆಯು ಅತ್ಯಂತ ಪ್ರಮುಖವಾದುದಾಗಿದೆ. ಸುಮಾರು 4 ಕಿ.ಮೀ. ಉದ್ದದ ಈ ಮುಖ್ಯ ರಸ್ತೆಯಲ್ಲಿ ಈಗಾಗಲೇ 2 ಕಿ.ಮೀ. ಡಾಂಬರೀಕರಣವಾಗಿದ್ದು, ಉಳಿದ ಭಾಗ ಸಂಪೂರ್ಣ ಮೆಟ್ಲಿಂಗ್ ಆಗಿದೆ. ನಿತ್ಯ ನೂರಾರು ಜನ ಬಳಸುವ ಈ ಮುಖ್ಯರಸ್ತೆಯನ್ನು ಅಭಿವೃದ್ಧಿಪಡಿಸುವುದನ್ನು ಬಿಟ್ಟು, ಅಪ್ರಯೋಜಕ ರಸ್ತೆಗೆ ಹಣ ವಿನಿಯೋಗಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>‘ಗ್ರಾಮದ ಅಭಿವೃದ್ಧಿಗೆಂದು ಮಂಜೂರಾದ ಹಣವು ಯಾವುದೋ ದುರುದ್ದೇಶಕ್ಕೋ ಅಥವಾ ಗುತ್ತಿಗೆದಾರರ ಸ್ವಾರ್ಥಕ್ಕೋ ವ್ಯರ್ಥವಾಗುತ್ತಿರುವುದು ಶಾಸಕರ ಗಮನಕ್ಕೆ ಬಂದಂತಿಲ್ಲ. ಕೂಡಲೇ ಶಾಸಕರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಹಾಲಿಯಿರುವ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು. ಸಾರ್ವಜನಿಕರಿಗೆ ನಿಜವಾಗಿಯೂ ಅಗತ್ಯವಿರುವ ಸಾಲಕಣಿ-ಮುರೇಗಾರ ಮುಖ್ಯರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು’ ಎಂದು ಗ್ರಾಮಸ್ಥರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-20-662305847</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>