<p><strong>ಶಿರಸಿ</strong>: ಒಂದು ಸೂರು ನೂರು ಸೇವೆ ಎಂಬ ಧ್ಯೇಯ ವಾಖ್ಯದೊಂದಿಗೆ ತಾಲ್ಲೂಕಿನ ಹುಣಸೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಅಂಚೆ ಜನ ಸಂಪರ್ಕ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು.</p>.<p>ಈ ಎರಡು ದಿನದ ಅಭಿಯಾನದಲ್ಲಿ ವಿವಿಧ ಅಂಚೆ ಸೇವೆಗಳ ಮಾಹಿತಿ ಕಾರ್ಯಾಗಾರ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ₹10 ಲಕ್ಷಗಳ ಅಪಘಾತ ವಿಮೆ ಯೋಜನೆ, ಆಧಾರ್ ತಿದ್ದುಪಡಿ, ಆಧಾರ್ ನೋಂದಣಿ, ಅಂಚೆ ಖಾತೆ ಮತ್ತು ಅಂಚೆ ಜೀವ ವಿಮೆಗಳ ಲಾಭ ಪಡೆದುಕೊಳ್ಳಬಹುದಾಗಿದೆ. ಡೈರೆಕ್ಟ್ ಬೆನಿಫಿಟ್ ಟ್ರಾನ್ಸಫರ್ ಫಲಾನುಭವಿಗಳಿಗೆ ಐಪಿಪಿಬಿ ಮೊದಲಾದ ಆನ್-ಲೈನ್ ಖಾತೆಗಳನ್ನು ಸ್ಥಳದಲ್ಲಿಯೇ ತೆರೆಯುವ ವಿಶೇಷ ವ್ಯವಸ್ಥೆ ಮಾಡಲಾಗಿದೆ.</p>.<p>ಕಾರ್ಯಕ್ರಮದಲ್ಲಿ ಶಿರಸಿ ದಕ್ಷಿಣ ಉಪ ವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಎಂ.ಜಿ.ಕರಣ್ ಅವರು<br />ವಿವಿಧ ಅಂಚೆ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯಿತಿ ಉಪಾಧ್ಯಕ್ಷ ಗಣೀಶ ಹೆಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಅಂಚೆ ಇಲಾಖೆಯ ಎಲ್ಲಾ ಯೋಜನೆಗಳು ಜನ ಸ್ನೇಹಿ ಯೋಜನೆಗಳಾಗಿವೆ. ಪ್ರತಿಯೊಬ್ಬ ಜನಸಾಮಾನ್ಯ ಕೂಡ ಇದರ ಸದುಪಯೋಗವನ್ನು ಪಡೆಯಬೇಕು’ ಎಂದು ತಿಳಿಸಿದರು.</p>.<p>ಪಿಡಿಒ ಕಲ್ಲಪ್ಪ ಮಳಗನವರ, ಪ್ರಮುಖರಾದ ಮಂಜುನಾಥ ಹೆಗಡೆ , ಪುರುಷೋತ್ತಮ ಅಂಬಿಗ, ರಜನಿ ಹೆಗಡೆ, ಮಣಿಕಂಠ ಭೋವಿವಡ್ಡರ, ಅರವಿಂದ ಗುಡಿಗಾರ, ನಾಗರಾಜ ತಳವಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಒಂದು ಸೂರು ನೂರು ಸೇವೆ ಎಂಬ ಧ್ಯೇಯ ವಾಖ್ಯದೊಂದಿಗೆ ತಾಲ್ಲೂಕಿನ ಹುಣಸೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಅಂಚೆ ಜನ ಸಂಪರ್ಕ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು.</p>.<p>ಈ ಎರಡು ದಿನದ ಅಭಿಯಾನದಲ್ಲಿ ವಿವಿಧ ಅಂಚೆ ಸೇವೆಗಳ ಮಾಹಿತಿ ಕಾರ್ಯಾಗಾರ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ₹10 ಲಕ್ಷಗಳ ಅಪಘಾತ ವಿಮೆ ಯೋಜನೆ, ಆಧಾರ್ ತಿದ್ದುಪಡಿ, ಆಧಾರ್ ನೋಂದಣಿ, ಅಂಚೆ ಖಾತೆ ಮತ್ತು ಅಂಚೆ ಜೀವ ವಿಮೆಗಳ ಲಾಭ ಪಡೆದುಕೊಳ್ಳಬಹುದಾಗಿದೆ. ಡೈರೆಕ್ಟ್ ಬೆನಿಫಿಟ್ ಟ್ರಾನ್ಸಫರ್ ಫಲಾನುಭವಿಗಳಿಗೆ ಐಪಿಪಿಬಿ ಮೊದಲಾದ ಆನ್-ಲೈನ್ ಖಾತೆಗಳನ್ನು ಸ್ಥಳದಲ್ಲಿಯೇ ತೆರೆಯುವ ವಿಶೇಷ ವ್ಯವಸ್ಥೆ ಮಾಡಲಾಗಿದೆ.</p>.<p>ಕಾರ್ಯಕ್ರಮದಲ್ಲಿ ಶಿರಸಿ ದಕ್ಷಿಣ ಉಪ ವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಎಂ.ಜಿ.ಕರಣ್ ಅವರು<br />ವಿವಿಧ ಅಂಚೆ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯಿತಿ ಉಪಾಧ್ಯಕ್ಷ ಗಣೀಶ ಹೆಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಅಂಚೆ ಇಲಾಖೆಯ ಎಲ್ಲಾ ಯೋಜನೆಗಳು ಜನ ಸ್ನೇಹಿ ಯೋಜನೆಗಳಾಗಿವೆ. ಪ್ರತಿಯೊಬ್ಬ ಜನಸಾಮಾನ್ಯ ಕೂಡ ಇದರ ಸದುಪಯೋಗವನ್ನು ಪಡೆಯಬೇಕು’ ಎಂದು ತಿಳಿಸಿದರು.</p>.<p>ಪಿಡಿಒ ಕಲ್ಲಪ್ಪ ಮಳಗನವರ, ಪ್ರಮುಖರಾದ ಮಂಜುನಾಥ ಹೆಗಡೆ , ಪುರುಷೋತ್ತಮ ಅಂಬಿಗ, ರಜನಿ ಹೆಗಡೆ, ಮಣಿಕಂಠ ಭೋವಿವಡ್ಡರ, ಅರವಿಂದ ಗುಡಿಗಾರ, ನಾಗರಾಜ ತಳವಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>