<p><strong>ಶಿರಸಿ:</strong> ನಗರದ ರಾಘವೇಂದ್ರ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಗುರುವಾರ ಮತ್ತು ಶುಕ್ರವಾರ ಯಶಸ್ವಿಯಾಗಿ ನೆರವೇರಿದವು.</p>.<p>ಮಠದ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಅವರ ದೂರದೃಷ್ಟಿಯ ಚಿಂತನೆ ಹಾಗೂ ವಿದ್ವಾನ್ ಕುಮಾರ ಭಟ್ ಕೊಳಗಿಬೀಸ್ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಆಯೋಜಿಸಲಾಗಿತ್ತು. ಶುಕ್ರವಾರದಂದು ಗುರುರಾಯರ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಿಸಲಾದ ಸುಂದರ ಆಲಯದಲ್ಲಿ ಶಾಸ್ತ್ರೋಕ್ತವಾಗಿ ನಾಗಪ್ರತಿಷ್ಠೆಯನ್ನು ನೆರವೇರಿಸಲಾಯಿತು.</p>.<p>ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಬಾವಿಯಲ್ಲಿ ಗಂಗಾಪೂಜೆ ಸಲ್ಲಿಸಿ, ಆ ಪವಿತ್ರ ಜಲದಿಂದ ಗುರುರಾಯರಿಗೆ ಕುಂಭಾಭಿಷೇಕವನ್ನು ನೆರವೇರಿಸಲಾಯಿತು. ನಂತರ ನೂತನ ಶಿಲಾಮಯ ತುಳಸಿ ಬೃಂದಾವನದ ಪ್ರತಿಷ್ಠಾಪನಾ ಕಾರ್ಯಗಳು ಮಂತ್ರಘೋಷಗಳೊಂದಿಗೆ ಸಂಪನ್ನಗೊಂಡವು. ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ, ಅತ್ಯಂತ ಕಲಾತ್ಮಕವಾಗಿ ಕೆತ್ತನೆಗೊಳಿಸಲಾದ ಭವ್ಯ ಮುಖಮಂಟಪವನ್ನು ರಾಯರ ಮೂಲ ಮೃತಿಕಾ ಬೃಂದಾವನಕ್ಕೆ ಸಮರ್ಪಿಸಲಾಯಿತು. ನಂತರ ನಡೆದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಅಸಂಖ್ಯ ಭಕ್ತರು ಪಾಲ್ಗೊಂಡಿದ್ದರು.</p>.<p>ರಾಘವೇಂದ್ರ ಸೇವಾ ಸಮಿತಿಯ ಈಶ್ವರ ಹೆಗಡೆ, ಕೆ.ವಿ.ಹೆಗಡೆ, ನವೀನ ಶೆಟ್ಟಿ, ಗುರುನಾಥ ಮಾಡಗೇರಿ ಇದ್ದರು. ಸಾವಿರಾರು ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-20-976161342</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ನಗರದ ರಾಘವೇಂದ್ರ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಗುರುವಾರ ಮತ್ತು ಶುಕ್ರವಾರ ಯಶಸ್ವಿಯಾಗಿ ನೆರವೇರಿದವು.</p>.<p>ಮಠದ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಅವರ ದೂರದೃಷ್ಟಿಯ ಚಿಂತನೆ ಹಾಗೂ ವಿದ್ವಾನ್ ಕುಮಾರ ಭಟ್ ಕೊಳಗಿಬೀಸ್ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಆಯೋಜಿಸಲಾಗಿತ್ತು. ಶುಕ್ರವಾರದಂದು ಗುರುರಾಯರ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಿಸಲಾದ ಸುಂದರ ಆಲಯದಲ್ಲಿ ಶಾಸ್ತ್ರೋಕ್ತವಾಗಿ ನಾಗಪ್ರತಿಷ್ಠೆಯನ್ನು ನೆರವೇರಿಸಲಾಯಿತು.</p>.<p>ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಬಾವಿಯಲ್ಲಿ ಗಂಗಾಪೂಜೆ ಸಲ್ಲಿಸಿ, ಆ ಪವಿತ್ರ ಜಲದಿಂದ ಗುರುರಾಯರಿಗೆ ಕುಂಭಾಭಿಷೇಕವನ್ನು ನೆರವೇರಿಸಲಾಯಿತು. ನಂತರ ನೂತನ ಶಿಲಾಮಯ ತುಳಸಿ ಬೃಂದಾವನದ ಪ್ರತಿಷ್ಠಾಪನಾ ಕಾರ್ಯಗಳು ಮಂತ್ರಘೋಷಗಳೊಂದಿಗೆ ಸಂಪನ್ನಗೊಂಡವು. ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ, ಅತ್ಯಂತ ಕಲಾತ್ಮಕವಾಗಿ ಕೆತ್ತನೆಗೊಳಿಸಲಾದ ಭವ್ಯ ಮುಖಮಂಟಪವನ್ನು ರಾಯರ ಮೂಲ ಮೃತಿಕಾ ಬೃಂದಾವನಕ್ಕೆ ಸಮರ್ಪಿಸಲಾಯಿತು. ನಂತರ ನಡೆದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಅಸಂಖ್ಯ ಭಕ್ತರು ಪಾಲ್ಗೊಂಡಿದ್ದರು.</p>.<p>ರಾಘವೇಂದ್ರ ಸೇವಾ ಸಮಿತಿಯ ಈಶ್ವರ ಹೆಗಡೆ, ಕೆ.ವಿ.ಹೆಗಡೆ, ನವೀನ ಶೆಟ್ಟಿ, ಗುರುನಾಥ ಮಾಡಗೇರಿ ಇದ್ದರು. ಸಾವಿರಾರು ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-20-976161342</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>