<p><strong>ಶಿರಸಿ</strong>: ನದಿಗಳ ನಿಸರ್ಗದತ್ತ ಹರಿವಿಗೆ ಅಡ್ಡಗಾಲು ಹಾಕುವ ಸರ್ಕಾರದ ನಡೆಯನ್ನು ವಿರೋಧಿಸಿ ಆರಂಭವಾಗಿರುವ ಸಹಿ ಮತ್ತು ಪತ್ರ ಅಭಿಯಾನ ಈಗ ಬೃಹತ್ ಜನಾಂದೋಲನವಾಗಿ ರೂಪುಗೊಂಡಿದೆ. ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ತಿರುವು ಯೋಜನೆ ವಿರುದ್ಧ ಸುಮಾರು 40 ಸಾವಿರ ಆಕ್ಷೇಪಣೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿವೆ. </p>.<p>ನದಿ ಜೋಡಣೆ ವಿರೋಧಿಸಿ ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಗೌರವಾಧ್ಯಕ್ಷ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ಅಭಿಯಾನ ನಡೆಯುತ್ತಿದೆ. ನಗರವೂ ಸೇರಿದಂತೆ ಗ್ರಾಮೀಣ ಪ್ರದೇಶದ ಅಲ್ಲಲ್ಲಿ ಜನಜಾಗೃತಿ ಸಭೆ ನಡೆಸಿ, ಪತ್ರ ಸಂಗ್ರಹ ನಡೆದಿದೆ.</p>.<p>‘ನದಿ ಪೂಜೆ, ಗಂಗಾರತಿ ಸಂದರ್ಭದಲ್ಲಿ ಪೂಜೆಯ ಜತೆ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಯೋಜನೆ ವಿರೋಧಿಸಿ ಸಹಿ ಹಾಕುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ’ ಎಂದು ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಪ್ರಮುಖರು ಹೇಳಿದ್ದಾರೆ.</p>.<p>‘ಜಾತ್ರೆ ಹಾಗೂ ರಥೋತ್ಸವಗಳಂತಹ ಜನದಟ್ಟಣೆಯ ಪ್ರದೇಶಗಳಲ್ಲಿ ಸ್ವಯಂಪ್ರೇರಿತರಾಗಿ ಜನರು ಸಹಿ ಹಾಕುತ್ತಿರುವುದು ಯೋಜನೆಯ ವಿರುದ್ಧದ ತೀವ್ರ ಆಕ್ರೋಶಕ್ಕೆ ಸಾಕ್ಷಿಯಾಗಿದೆ. ಈವರೆಗೆ 20 ಸಾವಿರಕ್ಕೂ ಹೆಚ್ಚು ಜನರು ಯೋಜನೆ ವಿರೋಧಿಸಿ ಸಹಿ ಹಾಕಿದ್ದಾರೆ. ಅದನ್ನು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿ ಅವರಿಗೆ ಕಳುಹಿಸಲಾಗಿದೆ. ಸ್ವಸಹಾಯ ಸಂಘಗಳು, ವಿವಿಧ ಸಂಘಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಯೋಜನೆ ಸ್ಥಗಿತಗೊಳಿಸುವಂತೆ ಅಧಿಕೃತ ಠರಾವು ಮಾಡಿ ಸರ್ಕಾರಗಳಿಗೆ ಕಳುಹಿಸಿವೆ’ ಎಂದು ಸಮಿತಿ ಅಧ್ಯಕ್ಷ ಅನಂತ ಅಶೀಸರ ಮಾಹಿತಿ ನೀಡಿದರು. </p>.<p>‘ಯುವಜನತೆಯೂ ಪತ್ರಗಳ ಮೂಲಕ ತಮ್ಮ ಭವಿಷ್ಯದ ಆತಂಕವನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದಾರೆ. ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪತ್ರ ಬರೆದು ಅಂಚೆಯ ಮೂಲಕ ಸರ್ಕಾರಗಳಿಗೆ ರವಾನಿಸಿದ್ದಾರೆ. ಈ ಅಭಿಯಾನ ನಿರಂತರವಾಗಿದ್ದು, ಯೋಜನೆ ಸ್ಥಗಿತದವರೆಗೂ ಮುಂದುವರೆಯಲಿದೆ’ ಎಂದರು. </p>.<p>‘ಈ ಚಳವಳಿಯು ಕೇವಲ ಒಂದು ಪ್ರತಿಭಟನೆಯಾಗಿ ಉಳಿಯದೆ, ಬೃಹತ್ ಜನಾಂದೋಲನವಾಗಿ ರೂಪಾಂತರಗೊಂಡಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಅಭಿಯಾನದ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ’ ಎನ್ನುತ್ತಾರೆ ಅವರು.</p>.<div><blockquote>ನದಿ ತಿರುವು ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ಸರ್ಕಾರವನ್ನು ಎಚ್ಚರಿಸಲು ಪತ್ರ ಚಳವಳಿ ಆರಂಭಿಸಿದ್ದೇವೆ. ಲಕ್ಷ ಲಕ್ಷ ಪತ್ರಗಳನ್ನು ಬರೆದು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕಿದೆ </blockquote><span class="attribution">ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸ್ವರ್ಣವಲ್ಲಿ ಮಠದ ಪೀಠಾಧಿಪತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ನದಿಗಳ ನಿಸರ್ಗದತ್ತ ಹರಿವಿಗೆ ಅಡ್ಡಗಾಲು ಹಾಕುವ ಸರ್ಕಾರದ ನಡೆಯನ್ನು ವಿರೋಧಿಸಿ ಆರಂಭವಾಗಿರುವ ಸಹಿ ಮತ್ತು ಪತ್ರ ಅಭಿಯಾನ ಈಗ ಬೃಹತ್ ಜನಾಂದೋಲನವಾಗಿ ರೂಪುಗೊಂಡಿದೆ. ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ತಿರುವು ಯೋಜನೆ ವಿರುದ್ಧ ಸುಮಾರು 40 ಸಾವಿರ ಆಕ್ಷೇಪಣೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿವೆ. </p>.<p>ನದಿ ಜೋಡಣೆ ವಿರೋಧಿಸಿ ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಗೌರವಾಧ್ಯಕ್ಷ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ಅಭಿಯಾನ ನಡೆಯುತ್ತಿದೆ. ನಗರವೂ ಸೇರಿದಂತೆ ಗ್ರಾಮೀಣ ಪ್ರದೇಶದ ಅಲ್ಲಲ್ಲಿ ಜನಜಾಗೃತಿ ಸಭೆ ನಡೆಸಿ, ಪತ್ರ ಸಂಗ್ರಹ ನಡೆದಿದೆ.</p>.<p>‘ನದಿ ಪೂಜೆ, ಗಂಗಾರತಿ ಸಂದರ್ಭದಲ್ಲಿ ಪೂಜೆಯ ಜತೆ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಯೋಜನೆ ವಿರೋಧಿಸಿ ಸಹಿ ಹಾಕುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ’ ಎಂದು ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಪ್ರಮುಖರು ಹೇಳಿದ್ದಾರೆ.</p>.<p>‘ಜಾತ್ರೆ ಹಾಗೂ ರಥೋತ್ಸವಗಳಂತಹ ಜನದಟ್ಟಣೆಯ ಪ್ರದೇಶಗಳಲ್ಲಿ ಸ್ವಯಂಪ್ರೇರಿತರಾಗಿ ಜನರು ಸಹಿ ಹಾಕುತ್ತಿರುವುದು ಯೋಜನೆಯ ವಿರುದ್ಧದ ತೀವ್ರ ಆಕ್ರೋಶಕ್ಕೆ ಸಾಕ್ಷಿಯಾಗಿದೆ. ಈವರೆಗೆ 20 ಸಾವಿರಕ್ಕೂ ಹೆಚ್ಚು ಜನರು ಯೋಜನೆ ವಿರೋಧಿಸಿ ಸಹಿ ಹಾಕಿದ್ದಾರೆ. ಅದನ್ನು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿ ಅವರಿಗೆ ಕಳುಹಿಸಲಾಗಿದೆ. ಸ್ವಸಹಾಯ ಸಂಘಗಳು, ವಿವಿಧ ಸಂಘಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಯೋಜನೆ ಸ್ಥಗಿತಗೊಳಿಸುವಂತೆ ಅಧಿಕೃತ ಠರಾವು ಮಾಡಿ ಸರ್ಕಾರಗಳಿಗೆ ಕಳುಹಿಸಿವೆ’ ಎಂದು ಸಮಿತಿ ಅಧ್ಯಕ್ಷ ಅನಂತ ಅಶೀಸರ ಮಾಹಿತಿ ನೀಡಿದರು. </p>.<p>‘ಯುವಜನತೆಯೂ ಪತ್ರಗಳ ಮೂಲಕ ತಮ್ಮ ಭವಿಷ್ಯದ ಆತಂಕವನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದಾರೆ. ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪತ್ರ ಬರೆದು ಅಂಚೆಯ ಮೂಲಕ ಸರ್ಕಾರಗಳಿಗೆ ರವಾನಿಸಿದ್ದಾರೆ. ಈ ಅಭಿಯಾನ ನಿರಂತರವಾಗಿದ್ದು, ಯೋಜನೆ ಸ್ಥಗಿತದವರೆಗೂ ಮುಂದುವರೆಯಲಿದೆ’ ಎಂದರು. </p>.<p>‘ಈ ಚಳವಳಿಯು ಕೇವಲ ಒಂದು ಪ್ರತಿಭಟನೆಯಾಗಿ ಉಳಿಯದೆ, ಬೃಹತ್ ಜನಾಂದೋಲನವಾಗಿ ರೂಪಾಂತರಗೊಂಡಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಅಭಿಯಾನದ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ’ ಎನ್ನುತ್ತಾರೆ ಅವರು.</p>.<div><blockquote>ನದಿ ತಿರುವು ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ಸರ್ಕಾರವನ್ನು ಎಚ್ಚರಿಸಲು ಪತ್ರ ಚಳವಳಿ ಆರಂಭಿಸಿದ್ದೇವೆ. ಲಕ್ಷ ಲಕ್ಷ ಪತ್ರಗಳನ್ನು ಬರೆದು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕಿದೆ </blockquote><span class="attribution">ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸ್ವರ್ಣವಲ್ಲಿ ಮಠದ ಪೀಠಾಧಿಪತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>