<p>ಶಿರಸಿ: ಮಾರುಕಟ್ಟೆಯಲ್ಲಿ ಸಿಗುವ ಕರಿದ ತಿನಿಸುಗಳು ತಿನ್ನುವವನ ಜೀವನವನ್ನು ಬೇಗ ಮುಗಿಸುತ್ತವೆ ಎಂದು ನಿಸರ್ಗಮನೆ ವೈದ್ಯ ಡಾ.ಪ್ರವೀಣ ಜೆಕಬ್ ಹೇಳಿದರು. </p>.<p>ಇಲ್ಲಿನ ಇಸಳೂರಿನಲ್ಲಿರುವ ಶ್ರೀನಿಕೇತನ ಶಾಲೆಯಲ್ಲಿ ಶನಿವಾರ ಪೋಷಣ ಮಾಸಾಚರಣೆ ಪ್ರಯುಕ್ತ 4ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆರೋಗ್ಯಕರ ಆಹಾರ–ಜಂಕ್ ಫುಡ್ ವಿಷಯದ ಕುರಿತು ಆಯೋಜಿಸಿದ್ದ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಾಯಿ ಚಪಲಕ್ಕೆ ಕರಿದ ತಿನಿಸುಗಳನ್ನು ತಿನ್ನಬೇಡಿ. ಹಣ್ಣು, ಹಸಿ ತರಕಾರಿ, ಮೊಳಕೆ ಕಾಳು ತಿಂದರೆ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು. ಜೊತೆಗೆ ಮಕ್ಕಳಿಗೆ ಆರೋಗ್ಯಕರ ಮತ್ತು ಅನಾರೋಗ್ಯಕರ ಆಹಾರಗಳ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ತಮ್ಮ ಸಾಕ್ಷ್ಯಚಿತ್ರಗಳ ಮೂಲಕ ತಿಳಿಸಿಕೊಟ್ಟರು.</p>.<p>ವನಸ್ತ್ರೀ ಮಾತೃ ಮಂಡಳಿಯ ವಿದ್ಯಾ ಭಟ್ ಅವರು ಸಂಗ್ರಹಿಸಿದ 350ಕ್ಕೂ ಹೆಚ್ಚು ಧಾನ್ಯಗಳನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಿದರು.</p>.<p>8ರಿಂದ 10ನೇ ವಿದ್ಯಾರ್ಥಿಗಳಿಗೆ ‘ಕುಕಿಂಗ್ ವಿದೌಟ್ ಫೈಯರ್’ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮಕ್ಕಳು ಹಾಗೂ ನಿರ್ಣಾಯಕ ಶಿಕ್ಷಕರು ವಿವಿಧ ಫ್ರೂಟ್ ಮತ್ತು ವೆಜಿಟೇಬಲ್ ಸಲಾಡ್ಗಳನ್ನು ಸವಿದು ಸಂತಸಪಟ್ಟರು.</p>.<p>ಕಾರ್ಯಕ್ರಮದಲ್ಲಿ ಶ್ರೀನಿಕೇತನ ಶಾಲೆಯ ಪ್ರಾಂಶುಪಾಲ ವಸಂತ ಭಟ್ ಹಾಗೂ ಉಪಪ್ರಾಚಾರ್ಯೆ ವಸುಧಾ ಹೆಗಡೆ ಉಪಸ್ಥಿತರಿದ್ದು, ಮಕ್ಕಳಲ್ಲಿ ಆರೋಗ್ಯಕರ ಆಹಾರವನ್ನು ಸೇವಿಸುವ ಬಗ್ಗೆ ಜಾಗೃತಿಯನ್ನು ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ಮಾರುಕಟ್ಟೆಯಲ್ಲಿ ಸಿಗುವ ಕರಿದ ತಿನಿಸುಗಳು ತಿನ್ನುವವನ ಜೀವನವನ್ನು ಬೇಗ ಮುಗಿಸುತ್ತವೆ ಎಂದು ನಿಸರ್ಗಮನೆ ವೈದ್ಯ ಡಾ.ಪ್ರವೀಣ ಜೆಕಬ್ ಹೇಳಿದರು. </p>.<p>ಇಲ್ಲಿನ ಇಸಳೂರಿನಲ್ಲಿರುವ ಶ್ರೀನಿಕೇತನ ಶಾಲೆಯಲ್ಲಿ ಶನಿವಾರ ಪೋಷಣ ಮಾಸಾಚರಣೆ ಪ್ರಯುಕ್ತ 4ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆರೋಗ್ಯಕರ ಆಹಾರ–ಜಂಕ್ ಫುಡ್ ವಿಷಯದ ಕುರಿತು ಆಯೋಜಿಸಿದ್ದ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಾಯಿ ಚಪಲಕ್ಕೆ ಕರಿದ ತಿನಿಸುಗಳನ್ನು ತಿನ್ನಬೇಡಿ. ಹಣ್ಣು, ಹಸಿ ತರಕಾರಿ, ಮೊಳಕೆ ಕಾಳು ತಿಂದರೆ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು. ಜೊತೆಗೆ ಮಕ್ಕಳಿಗೆ ಆರೋಗ್ಯಕರ ಮತ್ತು ಅನಾರೋಗ್ಯಕರ ಆಹಾರಗಳ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ತಮ್ಮ ಸಾಕ್ಷ್ಯಚಿತ್ರಗಳ ಮೂಲಕ ತಿಳಿಸಿಕೊಟ್ಟರು.</p>.<p>ವನಸ್ತ್ರೀ ಮಾತೃ ಮಂಡಳಿಯ ವಿದ್ಯಾ ಭಟ್ ಅವರು ಸಂಗ್ರಹಿಸಿದ 350ಕ್ಕೂ ಹೆಚ್ಚು ಧಾನ್ಯಗಳನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಿದರು.</p>.<p>8ರಿಂದ 10ನೇ ವಿದ್ಯಾರ್ಥಿಗಳಿಗೆ ‘ಕುಕಿಂಗ್ ವಿದೌಟ್ ಫೈಯರ್’ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮಕ್ಕಳು ಹಾಗೂ ನಿರ್ಣಾಯಕ ಶಿಕ್ಷಕರು ವಿವಿಧ ಫ್ರೂಟ್ ಮತ್ತು ವೆಜಿಟೇಬಲ್ ಸಲಾಡ್ಗಳನ್ನು ಸವಿದು ಸಂತಸಪಟ್ಟರು.</p>.<p>ಕಾರ್ಯಕ್ರಮದಲ್ಲಿ ಶ್ರೀನಿಕೇತನ ಶಾಲೆಯ ಪ್ರಾಂಶುಪಾಲ ವಸಂತ ಭಟ್ ಹಾಗೂ ಉಪಪ್ರಾಚಾರ್ಯೆ ವಸುಧಾ ಹೆಗಡೆ ಉಪಸ್ಥಿತರಿದ್ದು, ಮಕ್ಕಳಲ್ಲಿ ಆರೋಗ್ಯಕರ ಆಹಾರವನ್ನು ಸೇವಿಸುವ ಬಗ್ಗೆ ಜಾಗೃತಿಯನ್ನು ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>