<p><strong>ಶಿರಸಿ:</strong> ಕೃಷಿ ಹಾಗೂ ತೋಟಗಾರಿಕಾ ಕ್ಷೇತ್ರದ ಮಣ್ಣಿನ ಆರೋಗ್ಯ ಕಾಯ್ದುಕೊಳ್ಳುವಲ್ಲಿ ರೈತರಿಗೆ ಪೂರಕವಾಗಿರುವ ಮಣ್ಣು ಪರೀಕ್ಷಾ ಕೇಂದ್ರ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿಯಲ್ಲಿ ಮಾತ್ರವಿದ್ದು, ದೂರದ ತಾಲ್ಲೂಕುಗಳಿಂದ ಮಣ್ಣು ಪರೀಕ್ಷೆಗೆ ತರುವುದು ರೈತರಿಗೆ ಹೊರೆಯಾಗಿ ಮಾರ್ಪಟ್ಟಿದೆ.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಯಡಿ ರೈತರ ಹೊಲದ ಮಣ್ಣಿನ ಗುಣಮಟ್ಟ ಪರಿಶೀಲಿಸಿ ಕೃಷಿ ಇಲಾಖೆ ಮಣ್ಣಿನ ಆರೋಗ್ಯ ಕಾರ್ಡ್ ನೀಡುತ್ತದೆ. ಕೃಷಿ ಇಲಾಖೆಯು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆ, ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಮಣ್ಣು ಪರೀಕ್ಷೆ ನಡೆಯುತ್ತವೆ. ಮಣ್ಣಿನ ಫಲವತ್ತತೆ ಪರಿಶೀಲಿಸಲಾಗುತ್ತದೆ. ಇದರ ಆಧಾರದ ಮೇಲೆ ಬೆಳೆ ಆಯ್ಕೆ ಮಾಡುವುದು ಸುಲಭ.</p>.<p>ಶಿರಸಿಯಲ್ಲಿ ಮೂರು ಮಣ್ಣು ಪರೀಕ್ಷಾ ಕೇಂದ್ರಗಳಿವೆ. ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಹಾಗೂ ಟಿಎಸ್ಎಸ್ನ ಕೇಂದ್ರಗಳಲ್ಲಿ ಮಣ್ಣು ಪರೀಕ್ಷೆ ಮಾಡಲಾಗುತ್ತದೆ. ಕೃಷಿ ಇಲಾಖೆಯಿಂದ ವಾರ್ಷಿಕ ಉಚಿತವಾಗಿ 10 ಸಾವಿರ ಮಣ್ಣಿನ ಮಾದರಿ ಸಂಗ್ರಹಿಸಲಾಗುತ್ತದೆ. ಉಳಿದಂತೆ ರೈತರು ಪರೀಕ್ಷೆಗೆ ಶುಲ್ಕ ಪಾವತಿಸಬೇಕಾಗುತ್ತದೆ.</p>.<p>‘ಜಿಲ್ಲೆಯಲ್ಲಿ ಕಳೆದ ವರ್ಷ 10 ಸಾವಿರ ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆಯಾಗಿದೆ. ಈ ವರ್ಷ ಈವರೆಗೆ 6 ಸಾವಿರ ಗುರಿ ಸಾಧನೆಯಾಗಿದ್ದು, ಇನ್ನೂ 4 ಸಾವಿರ ಮಾದರಿ ಪರೀಕ್ಷೆ ಆಗಬೇಕಿದೆ’ ಎನ್ನುತ್ತಾರೆ ಇಲಾಖೆ ಅಧಿಕಾರಿಗಳು.</p>.<p>‘ಇಲಾಖೆಯಿಂದ ಪ್ರತಿ ತಾಲ್ಲೂಕಿನ 5 ಹಳ್ಳಿಗಳನ್ನು ಆಯ್ಕೆ ಮಾಡಿಕೊಂಡು, ಸರ್ವೆ ಸಂಖ್ಯೆ ಪ್ರಕಾರ ಅಲ್ಲಿನ ಸುಮಾರು 200-300 ಮಾದರಿಗಳನ್ನು ಸಂಗ್ರಹಿಸಲಾಗುತ್ತದೆ. ಸರ್ವೆ ಸಂಖ್ಯೆ ಆಧರಿಸಿ ಇದನ್ನು ನಡೆಸಲಾಗುತ್ತದೆ. ಇಲಾಖೆಯೇ ರೈತರ ಕೃಷಿ ಭೂಮಿಗೆ ತೆರಳಿ ಮಣ್ಣು ಸಂಗ್ರಹಿಸಿದರೆ, ಅದನ್ನು ಉಚಿತವಾಗಿ ಮಾಡಲಾಗುತ್ತದೆ. ರೈತರು ಪರೀಕ್ಷೆಗೆ ತಂದರೆ ₹200 ಶುಲ್ಕ ಪಾವತಿಸಬೇಕು. ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತಿಳಿಸಿದರೆ ಮಣ್ಣು ಮಾದರಿ ಸಂಗ್ರಹಿಸಲು ಅವರು ನೆರವಾಗುತ್ತಾರೆ’ ಎಂದು ಕೃಷಿ ಇಲಾಖೆ ಉಪನಿರ್ದೇಶಕ ಎಚ್.ನಟರಾಜ್ ಮಾಹಿತಿ ನೀಡಿದರು.</p>.<p>‘ಮಣ್ಣನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಮಾಡಿಸಲು ವೆಚ್ಚವಾಗುತ್ತದೆ. ಇಲಾಖೆಯೂ ಶುಲ್ಕ ವಿಧಿಸುತ್ತದೆ. ಅಲ್ಲದೆ ವರದಿ ಪಡೆಯಲು ಮತ್ತೆ ಅಲೆದಾಡಬೇಕು. ಬೇರೆ ಬೇರೆ ಕಡೆ ಪರೀಕ್ಷಿಸಿದಾಗ ಬೇರೆ ಬೇರೆ ವರದಿ ಬರುತ್ತದೆ. ಇದು ರೈತರನ್ನು ಗೊಂದಲಕ್ಕೆ ಸಿಲುಕಿಸುತ್ತದೆ. ಒಮ್ಮೆ ಮಣ್ಣು ಪರೀಕ್ಷೆ ಮಾಡಿಸಲು ಕನಿಷ್ಠವೆಂದರೂ ₹1,000 ಖರ್ಚಾಗುತ್ತದೆ. ದೂರದ ಊರುಗಳಿಂದ ಶಿರಸಿಗೆ ಬರಲು ಸಮಯ, ಹಣ ವ್ಯರ್ಥವಾಗುತ್ತದೆ. ಆಯಾ ತಾಲ್ಲೂಕು ಕೇಂದ್ರದಲ್ಲಿ ಮಣ್ಣು ಪರೀಕ್ಷಾ ಕೇಂದ್ರ ಸ್ಥಾಪಿಸಿದರೆ ರೈತರಿಗೆ ಅನುಕೂಲ’ ಎನ್ನುತ್ತಾರೆ ಜೊಯಿಡಾದ ರಾಮದಾಸ ವೆಳಿಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಕೃಷಿ ಹಾಗೂ ತೋಟಗಾರಿಕಾ ಕ್ಷೇತ್ರದ ಮಣ್ಣಿನ ಆರೋಗ್ಯ ಕಾಯ್ದುಕೊಳ್ಳುವಲ್ಲಿ ರೈತರಿಗೆ ಪೂರಕವಾಗಿರುವ ಮಣ್ಣು ಪರೀಕ್ಷಾ ಕೇಂದ್ರ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿಯಲ್ಲಿ ಮಾತ್ರವಿದ್ದು, ದೂರದ ತಾಲ್ಲೂಕುಗಳಿಂದ ಮಣ್ಣು ಪರೀಕ್ಷೆಗೆ ತರುವುದು ರೈತರಿಗೆ ಹೊರೆಯಾಗಿ ಮಾರ್ಪಟ್ಟಿದೆ.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಯಡಿ ರೈತರ ಹೊಲದ ಮಣ್ಣಿನ ಗುಣಮಟ್ಟ ಪರಿಶೀಲಿಸಿ ಕೃಷಿ ಇಲಾಖೆ ಮಣ್ಣಿನ ಆರೋಗ್ಯ ಕಾರ್ಡ್ ನೀಡುತ್ತದೆ. ಕೃಷಿ ಇಲಾಖೆಯು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆ, ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಮಣ್ಣು ಪರೀಕ್ಷೆ ನಡೆಯುತ್ತವೆ. ಮಣ್ಣಿನ ಫಲವತ್ತತೆ ಪರಿಶೀಲಿಸಲಾಗುತ್ತದೆ. ಇದರ ಆಧಾರದ ಮೇಲೆ ಬೆಳೆ ಆಯ್ಕೆ ಮಾಡುವುದು ಸುಲಭ.</p>.<p>ಶಿರಸಿಯಲ್ಲಿ ಮೂರು ಮಣ್ಣು ಪರೀಕ್ಷಾ ಕೇಂದ್ರಗಳಿವೆ. ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಹಾಗೂ ಟಿಎಸ್ಎಸ್ನ ಕೇಂದ್ರಗಳಲ್ಲಿ ಮಣ್ಣು ಪರೀಕ್ಷೆ ಮಾಡಲಾಗುತ್ತದೆ. ಕೃಷಿ ಇಲಾಖೆಯಿಂದ ವಾರ್ಷಿಕ ಉಚಿತವಾಗಿ 10 ಸಾವಿರ ಮಣ್ಣಿನ ಮಾದರಿ ಸಂಗ್ರಹಿಸಲಾಗುತ್ತದೆ. ಉಳಿದಂತೆ ರೈತರು ಪರೀಕ್ಷೆಗೆ ಶುಲ್ಕ ಪಾವತಿಸಬೇಕಾಗುತ್ತದೆ.</p>.<p>‘ಜಿಲ್ಲೆಯಲ್ಲಿ ಕಳೆದ ವರ್ಷ 10 ಸಾವಿರ ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆಯಾಗಿದೆ. ಈ ವರ್ಷ ಈವರೆಗೆ 6 ಸಾವಿರ ಗುರಿ ಸಾಧನೆಯಾಗಿದ್ದು, ಇನ್ನೂ 4 ಸಾವಿರ ಮಾದರಿ ಪರೀಕ್ಷೆ ಆಗಬೇಕಿದೆ’ ಎನ್ನುತ್ತಾರೆ ಇಲಾಖೆ ಅಧಿಕಾರಿಗಳು.</p>.<p>‘ಇಲಾಖೆಯಿಂದ ಪ್ರತಿ ತಾಲ್ಲೂಕಿನ 5 ಹಳ್ಳಿಗಳನ್ನು ಆಯ್ಕೆ ಮಾಡಿಕೊಂಡು, ಸರ್ವೆ ಸಂಖ್ಯೆ ಪ್ರಕಾರ ಅಲ್ಲಿನ ಸುಮಾರು 200-300 ಮಾದರಿಗಳನ್ನು ಸಂಗ್ರಹಿಸಲಾಗುತ್ತದೆ. ಸರ್ವೆ ಸಂಖ್ಯೆ ಆಧರಿಸಿ ಇದನ್ನು ನಡೆಸಲಾಗುತ್ತದೆ. ಇಲಾಖೆಯೇ ರೈತರ ಕೃಷಿ ಭೂಮಿಗೆ ತೆರಳಿ ಮಣ್ಣು ಸಂಗ್ರಹಿಸಿದರೆ, ಅದನ್ನು ಉಚಿತವಾಗಿ ಮಾಡಲಾಗುತ್ತದೆ. ರೈತರು ಪರೀಕ್ಷೆಗೆ ತಂದರೆ ₹200 ಶುಲ್ಕ ಪಾವತಿಸಬೇಕು. ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತಿಳಿಸಿದರೆ ಮಣ್ಣು ಮಾದರಿ ಸಂಗ್ರಹಿಸಲು ಅವರು ನೆರವಾಗುತ್ತಾರೆ’ ಎಂದು ಕೃಷಿ ಇಲಾಖೆ ಉಪನಿರ್ದೇಶಕ ಎಚ್.ನಟರಾಜ್ ಮಾಹಿತಿ ನೀಡಿದರು.</p>.<p>‘ಮಣ್ಣನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಮಾಡಿಸಲು ವೆಚ್ಚವಾಗುತ್ತದೆ. ಇಲಾಖೆಯೂ ಶುಲ್ಕ ವಿಧಿಸುತ್ತದೆ. ಅಲ್ಲದೆ ವರದಿ ಪಡೆಯಲು ಮತ್ತೆ ಅಲೆದಾಡಬೇಕು. ಬೇರೆ ಬೇರೆ ಕಡೆ ಪರೀಕ್ಷಿಸಿದಾಗ ಬೇರೆ ಬೇರೆ ವರದಿ ಬರುತ್ತದೆ. ಇದು ರೈತರನ್ನು ಗೊಂದಲಕ್ಕೆ ಸಿಲುಕಿಸುತ್ತದೆ. ಒಮ್ಮೆ ಮಣ್ಣು ಪರೀಕ್ಷೆ ಮಾಡಿಸಲು ಕನಿಷ್ಠವೆಂದರೂ ₹1,000 ಖರ್ಚಾಗುತ್ತದೆ. ದೂರದ ಊರುಗಳಿಂದ ಶಿರಸಿಗೆ ಬರಲು ಸಮಯ, ಹಣ ವ್ಯರ್ಥವಾಗುತ್ತದೆ. ಆಯಾ ತಾಲ್ಲೂಕು ಕೇಂದ್ರದಲ್ಲಿ ಮಣ್ಣು ಪರೀಕ್ಷಾ ಕೇಂದ್ರ ಸ್ಥಾಪಿಸಿದರೆ ರೈತರಿಗೆ ಅನುಕೂಲ’ ಎನ್ನುತ್ತಾರೆ ಜೊಯಿಡಾದ ರಾಮದಾಸ ವೆಳಿಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>