<p><strong>ಶಿರಸಿ</strong>: 'ಬೇಡ್ತಿ-ವರದಾ, ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳು ಜೀವವೈವಿಧ್ಯಕ್ಕೆ ಮಾರಕವಾಗಿದ್ದು ಇದನ್ನು ಕೇಂದ್ರ, ರಾಜ್ಯ ಸರ್ಕಾರಗಳು ತಕ್ಷಣವೇ ಕೈಬಿಡಬೇಕು’ ಎಂದು ಒತ್ತಾಯಿಸಿ ಶಿರಸಿಯ ಎಂಇಎಸ್ ಕಾಲೇಜು ಮೈದಾನದಲ್ಲಿ ಜನವರಿ 11ರಂದು ಜನ ಸಮಾವೇಶ ನಡೆಯಲಿದೆ.</p>.<p>ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಗೌರವಾಧ್ಯಕ್ಷ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರು, ‘ಸಮಾವೇಶದಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಮೂಲಕ ಬೃಹತ್ ಹೋರಾಟಕ್ಕೆ ಚಾಲನೆ ನೀಡಲಾಗುವುದು’ ಎಂದರು.</p>.<p>‘ಕುಡಿಯುವ ನೀರು ಮತ್ತು ಕೃಷಿ ನೀರಾವರಿ ನೆಪವೊಡ್ಡಿ ನದಿ ಜೋಡಣೆ ವಿಸ್ತ್ರತ ಯೋಜನಾ ವರದಿ ರೂಪಿಸಲು ಸರ್ಕಾರಗಳು ಮುಂದಾಗಿವೆ. ಆದರೆ, ಈ ಯೋಜನೆಯಲ್ಲಿ ಮೂರು ಜಲಾಶಯಗಳು, ಕಿಲೋಮೀಟರ್ಗಟ್ಟಲೆ ಉದ್ದದ ಸುರಂಗ ಮಾರ್ಗ ಮತ್ತು ಕಾಲುವೆಗಳ ನಿರ್ಮಾಣವು ಸೇರಿದೆ. ಇದು ಜಾರಿಯಾದಲ್ಲಿ ಲಕ್ಷಾಂತರ ಎಕರೆ ವಿಸ್ತೀರ್ಣದ ದಟ್ಟ ಅರಣ್ಯ ಮತ್ತು ಪರಿಸರ ನಾಶವಾಗುವುದು ನಿಶ್ಚಿತ’ ಎಂದು ಸೋಮವಾರ ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: 'ಬೇಡ್ತಿ-ವರದಾ, ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳು ಜೀವವೈವಿಧ್ಯಕ್ಕೆ ಮಾರಕವಾಗಿದ್ದು ಇದನ್ನು ಕೇಂದ್ರ, ರಾಜ್ಯ ಸರ್ಕಾರಗಳು ತಕ್ಷಣವೇ ಕೈಬಿಡಬೇಕು’ ಎಂದು ಒತ್ತಾಯಿಸಿ ಶಿರಸಿಯ ಎಂಇಎಸ್ ಕಾಲೇಜು ಮೈದಾನದಲ್ಲಿ ಜನವರಿ 11ರಂದು ಜನ ಸಮಾವೇಶ ನಡೆಯಲಿದೆ.</p>.<p>ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಗೌರವಾಧ್ಯಕ್ಷ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರು, ‘ಸಮಾವೇಶದಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಮೂಲಕ ಬೃಹತ್ ಹೋರಾಟಕ್ಕೆ ಚಾಲನೆ ನೀಡಲಾಗುವುದು’ ಎಂದರು.</p>.<p>‘ಕುಡಿಯುವ ನೀರು ಮತ್ತು ಕೃಷಿ ನೀರಾವರಿ ನೆಪವೊಡ್ಡಿ ನದಿ ಜೋಡಣೆ ವಿಸ್ತ್ರತ ಯೋಜನಾ ವರದಿ ರೂಪಿಸಲು ಸರ್ಕಾರಗಳು ಮುಂದಾಗಿವೆ. ಆದರೆ, ಈ ಯೋಜನೆಯಲ್ಲಿ ಮೂರು ಜಲಾಶಯಗಳು, ಕಿಲೋಮೀಟರ್ಗಟ್ಟಲೆ ಉದ್ದದ ಸುರಂಗ ಮಾರ್ಗ ಮತ್ತು ಕಾಲುವೆಗಳ ನಿರ್ಮಾಣವು ಸೇರಿದೆ. ಇದು ಜಾರಿಯಾದಲ್ಲಿ ಲಕ್ಷಾಂತರ ಎಕರೆ ವಿಸ್ತೀರ್ಣದ ದಟ್ಟ ಅರಣ್ಯ ಮತ್ತು ಪರಿಸರ ನಾಶವಾಗುವುದು ನಿಶ್ಚಿತ’ ಎಂದು ಸೋಮವಾರ ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>