<p>ಶಿರಸಿ: ತಾಲ್ಲೂಕಿನ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಸಲಾಗುವ ನರಸಿಂಹ ಜಯಂತಿ ಹಿನ್ನೆಲೆಯ ರಥೋತ್ಸವ ಸೋಮವಾರ ಬೆಳಗಿನ ಜಾವ ಸಂಪನ್ನಗೊಂಡಿತು. </p>.<p>ಸಂಸ್ಥಾನದ ಆರಾಧ್ಯ ದೇವರಾದ ಲಕ್ಷ್ಮೀನರಸಿಂಹ ದೇವರ ರಥೋತ್ಸವು ಮಠಾಧೀಶ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಿತು.</p>.<p>ರಥೋತ್ಸವದ ಅಂಗವಾಗಿ ಕಲ್ಪೋಕ್ತ ಮಹಾ ಪೂಜೆ, ಮಹಾ ಮಂಗಳಾರತಿ, ಮಹಾರಥೋತ್ಸವಕ್ಕೆ ದೇವರನ್ನು ಪಲ್ಲಕ್ಕಿಯ ಮೇಲೆ ಮೆರವಣಿಗೆ ಮಾಡುವ ಮೂಲಕ ಚಂಡೆ, ವೇದಘೋಷ, ವಾದ್ಯಗಳ ಮೂಲಕ ಒಯ್ದು ತಡರಾತ್ರಿ ಮಹಾರಥದಲ್ಲಿ ದೇವರ ಸ್ಥಾಪನೆ ನಡೆಯಿತು. </p>.<p>ರಥದಲ್ಲಿ ದೇವರನ್ನು ರಥಾರೂಢಗೊಳಿಸುವಾಗ ಭಕ್ತರು ಹರ್ಘೋದ್ಘಾರ ಮೊಳಗಿಸಿದರು. ಸ್ವಾಮೀಜಿ ಅವರು ಪೂಜೆ ನಡೆಸಿದರು. ರಾತ್ರಿ 1 ಗಂಟೆ ವೇಳೆಗೆ ರಥ ಎಳೆಯುವ ಕಾರ್ಯಕ್ರಮ ಜರುಗಿತು. </p>.<p>ಸ್ವರ್ಣವಲ್ಲೀ ಸ್ವಾಮೀಜಿ ಸೂಚನೆ ಮೇರೆಗೆ ರಥೋತ್ಸವ ವೇಳೆ ಸುಡುಮದ್ದು ಪ್ರದರ್ಶನ ಕೈ ಬಿಡಲಾಗಿತ್ತು. ಪ್ರತೀ ವರ್ಷ ಅಂಕೋಲಾದ ಕ್ರೈಸ್ತ ಸಮುದಾಯದವರು ಈ ಸೇವೆ ಸಲ್ಲಿಸುತ್ತಿದ್ದರು. ರಥೋತ್ಸವದ ಸಂಭ್ರಮಕ್ಕೆ ಇದು ಮೆರಗಾಗುತ್ತಿತ್ತು. ಈ ವೇಳೆ ಯುದ್ಧದಲ್ಲಿ ಭಾರತಕ್ಕೆ ವಿಜಯ ಪ್ರಾಪ್ತವಾಗಲೆಂದು ಹಾಗೂ ಸೈನಿಕರ ರಕ್ಷಣೆಗೂ ವಿಶೇಷವಾಗಿ ಪ್ರಾರ್ಥಿಸಲಾಯಿತು. </p>.<p>ರಾತ್ರಿ ಯಕ್ಷ ಶಾಲ್ಮಲಾ ನೇತೃತ್ವದಲ್ಲಿ ಕಲಾವಿದರಿಂದ ಕಂಸ ದಿಗ್ವಿಜಯ -ಕಂಸ ವಧೆ ಯಕ್ಷಗಾನ ಬಯಲಾಟ ನಡೆಯಿತು. ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ, ಕಾರ್ಯದರ್ಶಿ ಜಿ.ವಿ.ಹೆಗಡೆ ಗೊಡವೆಮನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ತಾಲ್ಲೂಕಿನ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಸಲಾಗುವ ನರಸಿಂಹ ಜಯಂತಿ ಹಿನ್ನೆಲೆಯ ರಥೋತ್ಸವ ಸೋಮವಾರ ಬೆಳಗಿನ ಜಾವ ಸಂಪನ್ನಗೊಂಡಿತು. </p>.<p>ಸಂಸ್ಥಾನದ ಆರಾಧ್ಯ ದೇವರಾದ ಲಕ್ಷ್ಮೀನರಸಿಂಹ ದೇವರ ರಥೋತ್ಸವು ಮಠಾಧೀಶ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಿತು.</p>.<p>ರಥೋತ್ಸವದ ಅಂಗವಾಗಿ ಕಲ್ಪೋಕ್ತ ಮಹಾ ಪೂಜೆ, ಮಹಾ ಮಂಗಳಾರತಿ, ಮಹಾರಥೋತ್ಸವಕ್ಕೆ ದೇವರನ್ನು ಪಲ್ಲಕ್ಕಿಯ ಮೇಲೆ ಮೆರವಣಿಗೆ ಮಾಡುವ ಮೂಲಕ ಚಂಡೆ, ವೇದಘೋಷ, ವಾದ್ಯಗಳ ಮೂಲಕ ಒಯ್ದು ತಡರಾತ್ರಿ ಮಹಾರಥದಲ್ಲಿ ದೇವರ ಸ್ಥಾಪನೆ ನಡೆಯಿತು. </p>.<p>ರಥದಲ್ಲಿ ದೇವರನ್ನು ರಥಾರೂಢಗೊಳಿಸುವಾಗ ಭಕ್ತರು ಹರ್ಘೋದ್ಘಾರ ಮೊಳಗಿಸಿದರು. ಸ್ವಾಮೀಜಿ ಅವರು ಪೂಜೆ ನಡೆಸಿದರು. ರಾತ್ರಿ 1 ಗಂಟೆ ವೇಳೆಗೆ ರಥ ಎಳೆಯುವ ಕಾರ್ಯಕ್ರಮ ಜರುಗಿತು. </p>.<p>ಸ್ವರ್ಣವಲ್ಲೀ ಸ್ವಾಮೀಜಿ ಸೂಚನೆ ಮೇರೆಗೆ ರಥೋತ್ಸವ ವೇಳೆ ಸುಡುಮದ್ದು ಪ್ರದರ್ಶನ ಕೈ ಬಿಡಲಾಗಿತ್ತು. ಪ್ರತೀ ವರ್ಷ ಅಂಕೋಲಾದ ಕ್ರೈಸ್ತ ಸಮುದಾಯದವರು ಈ ಸೇವೆ ಸಲ್ಲಿಸುತ್ತಿದ್ದರು. ರಥೋತ್ಸವದ ಸಂಭ್ರಮಕ್ಕೆ ಇದು ಮೆರಗಾಗುತ್ತಿತ್ತು. ಈ ವೇಳೆ ಯುದ್ಧದಲ್ಲಿ ಭಾರತಕ್ಕೆ ವಿಜಯ ಪ್ರಾಪ್ತವಾಗಲೆಂದು ಹಾಗೂ ಸೈನಿಕರ ರಕ್ಷಣೆಗೂ ವಿಶೇಷವಾಗಿ ಪ್ರಾರ್ಥಿಸಲಾಯಿತು. </p>.<p>ರಾತ್ರಿ ಯಕ್ಷ ಶಾಲ್ಮಲಾ ನೇತೃತ್ವದಲ್ಲಿ ಕಲಾವಿದರಿಂದ ಕಂಸ ದಿಗ್ವಿಜಯ -ಕಂಸ ವಧೆ ಯಕ್ಷಗಾನ ಬಯಲಾಟ ನಡೆಯಿತು. ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ, ಕಾರ್ಯದರ್ಶಿ ಜಿ.ವಿ.ಹೆಗಡೆ ಗೊಡವೆಮನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>