<p><strong>ಶಿರಸಿ:</strong> ‘ನಗರದ ಸೌಲಭ್ಯ ವಂಚಿತ ಪ್ರದೇಶದಲ್ಲಿ ಅಗತ್ಯವಿರುವ ಮೂಲಸೌಲಭ್ಯ ಕಲ್ಪಿಸಲು ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. </p>.<p>ನಗರಸಭೆಯ ನಗರೋತ್ಥಾನ ಹಾಗೂ ಎಸ್ಎಫ್ಸಿ ವಿಶೇಷ ಅನುದಾನದ ₹1.62 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ನಗರ ಪ್ರದೇಶ ಸೇರಿದಂತೆ ಕ್ಷೇತ್ರದ ಅಭಿವೃದ್ಧಿ ಕಾರ್ಯ ನಿರಂತರ. ನಗರ ವ್ಯಾಪ್ತಿಯಲ್ಲಿ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಸಾಕಷ್ಟು ಅನುದಾನಗಳನ್ನು ಬಿಡುಗಡೆ ಮಾಡುತ್ತಿದೆ. ಜತೆಗೆ ಕುಡಿಯುವ ನೀರಿನ ಯೋಜನೆಗೂ ಈಗಾಗಲೇ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಅವರು ನೀಡಿದ ವಿಶೇಷ ಅನುದಾನದ ₹50 ಕೋಟಿಯಲ್ಲಿ ₹7 ಕೋಟಿ ವಿವಿಧ ಕಾಮಗಾರಿಗಳಿಗೆ ನೀಡಲಾಗಿದೆ’ ಎಂದರು.</p>.<p>‘ಹಲವು ದಶಕಗಳಿಂದ ಸೌಲಭ್ಯ ವಂಚಿತವಾಗಿದ್ದ ಗಣೇಶನಗರಕ್ಕೆ ಈ ರಸ್ತೆ ಅಭಿವೃದ್ಧಿ ಅನುಕೂಲವಾಗಲಿದೆ. ದಿನನಿತ್ಯದ ಚಟುವಟಿಕೆಗಳಿಗೂ ಪೂರಕವಾಗಿದೆ. ಇನ್ನಷ್ಟು ಅಭಿವೃದ್ಧಿಗೆ ಹಂತಹಂತವಾಗಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.</p>.<p>ಇದೇ ವೇಳೆ ವಾರ್ಡ್ ನಂ. 2ರ ಗಣೇಶನಗರ ವಡ್ಡರ ಓಣಿಯಲ್ಲಿ ₹14.53 ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ ಮಾಡಿದರು.</p>.<p>ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಸದಸ್ಯ ಪ್ರದೀಪ ಶೆಟ್ಟಿ, ತಾರಾ ನಾಯ್ಕ, ವನಿತಾ ಶೆಟ್ಟಿ, ಗೀತಾ ಶೆಟ್ಟಿ, ವನೀತಾ ವಡ್ಡರ, ಪೌರಾಯುಕ್ತ ಪ್ರಕಾಶ ಚನ್ನಪ್ಪನವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ನಗರದ ಸೌಲಭ್ಯ ವಂಚಿತ ಪ್ರದೇಶದಲ್ಲಿ ಅಗತ್ಯವಿರುವ ಮೂಲಸೌಲಭ್ಯ ಕಲ್ಪಿಸಲು ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. </p>.<p>ನಗರಸಭೆಯ ನಗರೋತ್ಥಾನ ಹಾಗೂ ಎಸ್ಎಫ್ಸಿ ವಿಶೇಷ ಅನುದಾನದ ₹1.62 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ನಗರ ಪ್ರದೇಶ ಸೇರಿದಂತೆ ಕ್ಷೇತ್ರದ ಅಭಿವೃದ್ಧಿ ಕಾರ್ಯ ನಿರಂತರ. ನಗರ ವ್ಯಾಪ್ತಿಯಲ್ಲಿ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಸಾಕಷ್ಟು ಅನುದಾನಗಳನ್ನು ಬಿಡುಗಡೆ ಮಾಡುತ್ತಿದೆ. ಜತೆಗೆ ಕುಡಿಯುವ ನೀರಿನ ಯೋಜನೆಗೂ ಈಗಾಗಲೇ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಅವರು ನೀಡಿದ ವಿಶೇಷ ಅನುದಾನದ ₹50 ಕೋಟಿಯಲ್ಲಿ ₹7 ಕೋಟಿ ವಿವಿಧ ಕಾಮಗಾರಿಗಳಿಗೆ ನೀಡಲಾಗಿದೆ’ ಎಂದರು.</p>.<p>‘ಹಲವು ದಶಕಗಳಿಂದ ಸೌಲಭ್ಯ ವಂಚಿತವಾಗಿದ್ದ ಗಣೇಶನಗರಕ್ಕೆ ಈ ರಸ್ತೆ ಅಭಿವೃದ್ಧಿ ಅನುಕೂಲವಾಗಲಿದೆ. ದಿನನಿತ್ಯದ ಚಟುವಟಿಕೆಗಳಿಗೂ ಪೂರಕವಾಗಿದೆ. ಇನ್ನಷ್ಟು ಅಭಿವೃದ್ಧಿಗೆ ಹಂತಹಂತವಾಗಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.</p>.<p>ಇದೇ ವೇಳೆ ವಾರ್ಡ್ ನಂ. 2ರ ಗಣೇಶನಗರ ವಡ್ಡರ ಓಣಿಯಲ್ಲಿ ₹14.53 ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ ಮಾಡಿದರು.</p>.<p>ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಸದಸ್ಯ ಪ್ರದೀಪ ಶೆಟ್ಟಿ, ತಾರಾ ನಾಯ್ಕ, ವನಿತಾ ಶೆಟ್ಟಿ, ಗೀತಾ ಶೆಟ್ಟಿ, ವನೀತಾ ವಡ್ಡರ, ಪೌರಾಯುಕ್ತ ಪ್ರಕಾಶ ಚನ್ನಪ್ಪನವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>