ಹಿಂದೂ ಸನಾತನ ಸಂಸ್ಕೃತಿಯ ಸಂರಕ್ಷಣೆ ಹಾಗೂ ಹೊಸ ವರ್ಷದ ಸ್ವಾಗತಕ್ಕಾಗಿ ನಗರದಲ್ಲಿ ಗುರುವಾರ ಸಂಜೆ 6.30ಕ್ಕೆ ಯುಗಾದಿ ಉತ್ಸವ ಸಮಿತಿಯಿಂದ ಶೋಭಾಯಾತ್ರೆ ಆಯೋಜಿಸಲಾಗಿದೆ. ವಿಕಾಸಾಶ್ರಮ ಮೈದಾನದಿಂದ ಹೊರಡುವ ಯಾತ್ರೆಯು ಮಾರಿಕಾಂಬಾ ದೇವಸ್ಥಾನದಲ್ಲಿ ಸಮಾರೋಪಗೊಳ್ಳಲಿದೆ. ಈ ಧಾರ್ಮಿಕ ಸಭೆಯಲ್ಲಿ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಬಣ್ಣದಮಠದ ಶಿವಲಿಂಗ ಸ್ವಾಮೀಜಿ ಹಾಗೂ ಜೈನಮಠದ ಭಟ್ಟಾಕಳಂಕ ಭಟ್ಟಾರಕ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಕಾರ್ಯದರ್ಶಿ ಗಜಾನನ ಪೈ ಮುಖ್ಯ ವಕ್ತಾರರಾಗಿ ಆಗಮಿಸಲಿದ್ದಾರೆ.