<p><strong>ಶಿರಸಿ:</strong> ಬೇಸಿಗೆಯ ಬಿಸಿ ಏರುತ್ತಿದ್ದಂತೆಯೇ ತಾಲ್ಲೂಕಿನ ಹಲವು ಭಾಗಗಳಲ್ಲಿ ಎದುರಾಗುವ ಕುಡಿಯುವ ನೀರಿನ ಬಿಕ್ಕಟ್ಟು ನಿಭಾಯಿಸಲು ತಾಲ್ಲೂಕು ಆಡಳಿತ ಗ್ರಾಮ ಮಟ್ಟದಲ್ಲಿ ಸಮೀಕ್ಷೆ ನಡೆಸಿ, ನೀರಿನ ಕೊರತೆ ಉಂಟಾಗಬಹುದಾದ ಗ್ರಾಮಗಳ ಸಮಗ್ರ ಪಟ್ಟಿ ಸಿದ್ಧಪಡಿಸುವ ಜತೆ ನೀರಿನ ಮೂಲ ಗುರುತಿಸುವ ಕಾರ್ಯ ನಡೆಸಿದೆ.</p>.<p>ಮಾರ್ಚ್ ಅಂತ್ಯದ ವೇಳೆಗೆ ತಾಪಮಾನ ಮಿತಿ ಮೀರುತ್ತಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುವ ಸಾಧ್ಯತೆಯಿದೆ. ಕಳೆದ ವರ್ಷ ವಾಡಿಕೆಯಂತೆ ಮಳೆಯಾಗಿದ್ದರಿಂದ ನೀರಿನ ಸಮಸ್ಯೆ ತೀವ್ರವಾಗಿರಲಿಲ್ಲ. ಆದರೆ ಈ ಬಾರಿ ಉಷ್ಣತೆ ಹೆಚ್ಚಿರುವ ಕಾರಣ ಪ್ರಮುಖ ನದಿಗಳ ಹರಿವು ಗಣನೀಯವಾಗಿ ಕುಂಠಿತಗೊಂಡಿದೆ.</p>.<p>ಅದರಲ್ಲೂ ವಿಶೇಷವಾಗಿ ಬನವಾಸಿ ಭಾಗದ ಜನರ ಜೀವನದಿಯಾದ ವರದಾ ನದಿಯ ಹರಿವು ಬಹುತೇಕ ಸ್ಥಗಿತಗೊಂಡಿದೆ. ತೆರೆದ ಬಾವಿಗಳು ಹಾಗೂ ಕೊಳವೆ ಬಾವಿಗಳಲ್ಲೂ ನೀರಿನ ಮಟ್ಟ ತಳ ಸೇರುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ತಾಲ್ಲೂಕು ಆಡಳಿತದ ಅಧಿಕಾರಿಗಳು ನೀರಿನ ಕೊರತೆ ಕಾಡುವ ಹಳ್ಳಿಗಳನ್ನು ಗುರುತಿಸಿದ್ದಾರೆ.</p>.<p>‘ಕಬ್ಬೆ, ಕೊಗೋಡು, ಬನವಾಸಿ, ಕಲಕರಡಿ, ಅಂಡಗಿ ಲಮಾಣಿ ತಾಂಡಾ, ಸುಗಾವಿಯ ಕತ್ರಿಬೇಡರ ಕೊಪ್ಪ, ಬಂಕನಾಳ ತಾಂಡಾ, ಕತ್ರಿಕೊಪ್ಪ, ಮುತ್ತಾಳಕೊಪ್ಪ, ಮಾವಿನಸರ, ಕಸದಗುಡ್ಡೆ, ಹೊಳೆಕೈ, ಸಹಸ್ರಳ್ಳಿ, ಗಿಡಮಾವಿನಕಟ್ಟಾ, ಮಂಜುಗುಣಿ, ಬೊಮ್ಮನಳ್ಳಿ ಸೇರಿದಂತೆ ಹಲವಾರು ಹಳ್ಳಿಗಳಲ್ಲಿ ಅಂತರ್ಜಲ ಕುಸಿತದ ಮುನ್ಸೂಚನೆ ಲಭ್ಯವಾಗಿದೆ. ಈ ಗ್ರಾಮಗಳನ್ನು ಅತ್ಯಂತ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದ್ದು, ಜನರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ನೀಲನಕ್ಷೆಯನ್ನು ರೂಪಿಸಲಾಗಿದೆ’ ಎನ್ನುತ್ತಾರೆ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು.</p>.<p>‘ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಸರ್ಕಾರಿ ಮೂಲಗಳಲ್ಲಿ ನೀರು ಬತ್ತಿದ ತಕ್ಷಣ, ಗುರುತಿಸಲಾದ ಖಾಸಗಿ ಬಾವಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ಗ್ರಾಮಗಳಿಗೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಪರಿಸ್ಥಿತಿ ಕೈಮೀರಿದರೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ ಮಾಹಿತಿ ನೀಡಿದರು.</p>.<p>‘ನೀರಿನ ಪೂರೈಕೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪಂಪ್ಸೆಟ್ ದುರಸ್ತಿ ಅಥವಾ ಪೈಪ್ಲೈನ್ ಸಮಸ್ಯೆಗಳಿದ್ದಲ್ಲಿ ತಡಮಾಡದೆ ಸ್ಪಂದಿಸುವಂತೆ ನಿರ್ದೇಶಿಸಲಾಗಿದೆ’ ಎನ್ನುತ್ತಾರೆ ಅವರು.</p>.<div><blockquote>ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಎದುರಾಗಬಹುದಾದ ನೀರಿನ ಕೊರತೆ ಪರಿಸ್ಥಿತಿಯನ್ನು ಎದುರಿಸಲು ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ</blockquote><span class="attribution">ಚನ್ನಬಸಪ್ಪ ಹಾವಣಗಿ, ತಾಲ್ಲೂಕು ಪಂಚಾಯಿತಿ ಇಒ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಬೇಸಿಗೆಯ ಬಿಸಿ ಏರುತ್ತಿದ್ದಂತೆಯೇ ತಾಲ್ಲೂಕಿನ ಹಲವು ಭಾಗಗಳಲ್ಲಿ ಎದುರಾಗುವ ಕುಡಿಯುವ ನೀರಿನ ಬಿಕ್ಕಟ್ಟು ನಿಭಾಯಿಸಲು ತಾಲ್ಲೂಕು ಆಡಳಿತ ಗ್ರಾಮ ಮಟ್ಟದಲ್ಲಿ ಸಮೀಕ್ಷೆ ನಡೆಸಿ, ನೀರಿನ ಕೊರತೆ ಉಂಟಾಗಬಹುದಾದ ಗ್ರಾಮಗಳ ಸಮಗ್ರ ಪಟ್ಟಿ ಸಿದ್ಧಪಡಿಸುವ ಜತೆ ನೀರಿನ ಮೂಲ ಗುರುತಿಸುವ ಕಾರ್ಯ ನಡೆಸಿದೆ.</p>.<p>ಮಾರ್ಚ್ ಅಂತ್ಯದ ವೇಳೆಗೆ ತಾಪಮಾನ ಮಿತಿ ಮೀರುತ್ತಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುವ ಸಾಧ್ಯತೆಯಿದೆ. ಕಳೆದ ವರ್ಷ ವಾಡಿಕೆಯಂತೆ ಮಳೆಯಾಗಿದ್ದರಿಂದ ನೀರಿನ ಸಮಸ್ಯೆ ತೀವ್ರವಾಗಿರಲಿಲ್ಲ. ಆದರೆ ಈ ಬಾರಿ ಉಷ್ಣತೆ ಹೆಚ್ಚಿರುವ ಕಾರಣ ಪ್ರಮುಖ ನದಿಗಳ ಹರಿವು ಗಣನೀಯವಾಗಿ ಕುಂಠಿತಗೊಂಡಿದೆ.</p>.<p>ಅದರಲ್ಲೂ ವಿಶೇಷವಾಗಿ ಬನವಾಸಿ ಭಾಗದ ಜನರ ಜೀವನದಿಯಾದ ವರದಾ ನದಿಯ ಹರಿವು ಬಹುತೇಕ ಸ್ಥಗಿತಗೊಂಡಿದೆ. ತೆರೆದ ಬಾವಿಗಳು ಹಾಗೂ ಕೊಳವೆ ಬಾವಿಗಳಲ್ಲೂ ನೀರಿನ ಮಟ್ಟ ತಳ ಸೇರುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ತಾಲ್ಲೂಕು ಆಡಳಿತದ ಅಧಿಕಾರಿಗಳು ನೀರಿನ ಕೊರತೆ ಕಾಡುವ ಹಳ್ಳಿಗಳನ್ನು ಗುರುತಿಸಿದ್ದಾರೆ.</p>.<p>‘ಕಬ್ಬೆ, ಕೊಗೋಡು, ಬನವಾಸಿ, ಕಲಕರಡಿ, ಅಂಡಗಿ ಲಮಾಣಿ ತಾಂಡಾ, ಸುಗಾವಿಯ ಕತ್ರಿಬೇಡರ ಕೊಪ್ಪ, ಬಂಕನಾಳ ತಾಂಡಾ, ಕತ್ರಿಕೊಪ್ಪ, ಮುತ್ತಾಳಕೊಪ್ಪ, ಮಾವಿನಸರ, ಕಸದಗುಡ್ಡೆ, ಹೊಳೆಕೈ, ಸಹಸ್ರಳ್ಳಿ, ಗಿಡಮಾವಿನಕಟ್ಟಾ, ಮಂಜುಗುಣಿ, ಬೊಮ್ಮನಳ್ಳಿ ಸೇರಿದಂತೆ ಹಲವಾರು ಹಳ್ಳಿಗಳಲ್ಲಿ ಅಂತರ್ಜಲ ಕುಸಿತದ ಮುನ್ಸೂಚನೆ ಲಭ್ಯವಾಗಿದೆ. ಈ ಗ್ರಾಮಗಳನ್ನು ಅತ್ಯಂತ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದ್ದು, ಜನರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ನೀಲನಕ್ಷೆಯನ್ನು ರೂಪಿಸಲಾಗಿದೆ’ ಎನ್ನುತ್ತಾರೆ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು.</p>.<p>‘ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಸರ್ಕಾರಿ ಮೂಲಗಳಲ್ಲಿ ನೀರು ಬತ್ತಿದ ತಕ್ಷಣ, ಗುರುತಿಸಲಾದ ಖಾಸಗಿ ಬಾವಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ಗ್ರಾಮಗಳಿಗೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಪರಿಸ್ಥಿತಿ ಕೈಮೀರಿದರೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ ಮಾಹಿತಿ ನೀಡಿದರು.</p>.<p>‘ನೀರಿನ ಪೂರೈಕೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪಂಪ್ಸೆಟ್ ದುರಸ್ತಿ ಅಥವಾ ಪೈಪ್ಲೈನ್ ಸಮಸ್ಯೆಗಳಿದ್ದಲ್ಲಿ ತಡಮಾಡದೆ ಸ್ಪಂದಿಸುವಂತೆ ನಿರ್ದೇಶಿಸಲಾಗಿದೆ’ ಎನ್ನುತ್ತಾರೆ ಅವರು.</p>.<div><blockquote>ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಎದುರಾಗಬಹುದಾದ ನೀರಿನ ಕೊರತೆ ಪರಿಸ್ಥಿತಿಯನ್ನು ಎದುರಿಸಲು ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ</blockquote><span class="attribution">ಚನ್ನಬಸಪ್ಪ ಹಾವಣಗಿ, ತಾಲ್ಲೂಕು ಪಂಚಾಯಿತಿ ಇಒ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>