ಜಿಲ್ಲಾ ಕ್ಷಯ ರೋಗ ನಿಯಂತ್ರಾಣಾಧಿಕಾರಿ ಡಾ.ಮಹಾಬಲೇಶ್ವರ ಹೆಗಡೆ ಮಾತನಾಡಿ, ‘ಕ್ಷಯರೋಗವು ಮೈಕೊ ಬ್ಯಾಕ್ಟಿರಿಯಂ ಟ್ಯುಬರ್ಕ್ಯೂಲೋಸಿಸ್ ಎಂದು ಸೂಕ್ಷ್ಮ ರೋಗಾಣುವಿನಿಂದ ಗಾಳಿಯ ಮೂಲಕ ಹರಡುತ್ತದೆ. ರೋಗಿಯು ಕೆಮ್ಮಿದಾಗ ಮತ್ತು ಸೀನಿದಾಗ ಎದುರು ಇರುವ ವ್ಯಕ್ತಿಗೆ ಹರಡುತ್ತದೆ. ಕ್ಷಯ ರೋಗದ ಪತ್ತೆಗೆ ಕಫ ಪರೀಕ್ಷೆ ಹಾಗೂ ಎಕ್ಸ್ ರೇ, ‘ಸಿ.ಬಿ.ನಾಟ್ ಅಥವಾ ಟ್ರೂನಾಟ್’ ಪರೀಕ್ಷೆಗಳ ಮೂಲಕ ಉಚಿತವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸಬಹುದು’ ಎಂದು ಮಾಹಿತಿ ನೀಡಿದರು.