<p><strong>ಶಿರಸಿ: </strong>ಕೊರೊನಾ ವೈರಾಣು ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಜನತಾ ಕರ್ಫ್ಯೂ ಬಗ್ಗೆ ಇಲ್ಲಿನ ಅದ್ವೈತ ಸ್ಕೇಟರ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ನ ವಿದ್ಯಾರ್ಥಿಗಳು ಶನಿವಾರ ಜಾಗೃತಿ ಮೂಡಿಸಿದರು.</p>.<p>ಸ್ಕೇಟ್ ಮಾಡುತ್ತಲೇ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮಕ್ಕಳು, ಜನರಿಗೆ ಕರಪತ್ರ ವಿತರಿಸಿದರು. ಪೌರಾಯುಕ್ತ ರಮೇಶ ನಾಯಕ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಾದ ಅದ್ವೈತ, ನಿತಿಶ್, ಕುಶಾಲ್, ರೋಹಿತ್, ಪ್ರತಿಕ್, ಕುಮಾರ, ಗಗನ, ವಿಪುಲ್, ರಾಜುಗುರು ಭಾಗವಹಿಸಿದ್ದರು. ಬೈಕ್ ಸವಾರರು, ಆಟೊರಿಕ್ಷಾ ಚಾಲಕರು, ಬಟ್ಟೆ ಅಂಗಡಿ ಹೀಗೆ ದಾರಿಯಲ್ಲಿ ಸಿಕ್ಕವರಿಗೆಲ್ಲ ಕರಪತ್ರ ನೀಡಿದರು.</p>.<p>ನಗರಸಭೆ ಸದಸ್ಯೆ ವೀಣಾ ಶೆಟ್ಟಿ, ಅದ್ವೈತ ಸ್ಕೇಟಿಂಗ್ ಕ್ಲಬ್ ಅಧ್ಯಕ್ಷ ಕಿರಣಕುಮಾರ, ತರಬೇತುದಾರರಾದ ಶ್ಯಾಮಸುಂದರ, ಸುನೀಲ ನಾಯ್ಕ, ವಿಶ್ವನಾಥ ಹಾಗೂ ಅನೇಕ ಪಾಲಕರು ಸಾರ್ವಜನಿಕರಿಗೆ ಕರಪತ್ರವನ್ನು ನೀಡುವುದರ ಮೂಲಕ ಜಾತಾದೊಂದಿಗೆವರು ಜಾಥಾದೊಂದಿಗೆ ಹೆಜ್ಜೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಕೊರೊನಾ ವೈರಾಣು ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಜನತಾ ಕರ್ಫ್ಯೂ ಬಗ್ಗೆ ಇಲ್ಲಿನ ಅದ್ವೈತ ಸ್ಕೇಟರ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ನ ವಿದ್ಯಾರ್ಥಿಗಳು ಶನಿವಾರ ಜಾಗೃತಿ ಮೂಡಿಸಿದರು.</p>.<p>ಸ್ಕೇಟ್ ಮಾಡುತ್ತಲೇ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮಕ್ಕಳು, ಜನರಿಗೆ ಕರಪತ್ರ ವಿತರಿಸಿದರು. ಪೌರಾಯುಕ್ತ ರಮೇಶ ನಾಯಕ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಾದ ಅದ್ವೈತ, ನಿತಿಶ್, ಕುಶಾಲ್, ರೋಹಿತ್, ಪ್ರತಿಕ್, ಕುಮಾರ, ಗಗನ, ವಿಪುಲ್, ರಾಜುಗುರು ಭಾಗವಹಿಸಿದ್ದರು. ಬೈಕ್ ಸವಾರರು, ಆಟೊರಿಕ್ಷಾ ಚಾಲಕರು, ಬಟ್ಟೆ ಅಂಗಡಿ ಹೀಗೆ ದಾರಿಯಲ್ಲಿ ಸಿಕ್ಕವರಿಗೆಲ್ಲ ಕರಪತ್ರ ನೀಡಿದರು.</p>.<p>ನಗರಸಭೆ ಸದಸ್ಯೆ ವೀಣಾ ಶೆಟ್ಟಿ, ಅದ್ವೈತ ಸ್ಕೇಟಿಂಗ್ ಕ್ಲಬ್ ಅಧ್ಯಕ್ಷ ಕಿರಣಕುಮಾರ, ತರಬೇತುದಾರರಾದ ಶ್ಯಾಮಸುಂದರ, ಸುನೀಲ ನಾಯ್ಕ, ವಿಶ್ವನಾಥ ಹಾಗೂ ಅನೇಕ ಪಾಲಕರು ಸಾರ್ವಜನಿಕರಿಗೆ ಕರಪತ್ರವನ್ನು ನೀಡುವುದರ ಮೂಲಕ ಜಾತಾದೊಂದಿಗೆವರು ಜಾಥಾದೊಂದಿಗೆ ಹೆಜ್ಜೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>