<p><strong>ಭಟ್ಕಳ</strong>: ತಾಲ್ಲೂಕಿನ ಪ್ರಸಿದ್ಧ ಸೋಡಿಗದ್ದೆ ಮಹಾಸತಿ ದೇವಿಯ ಜಾತ್ರೆ ಅಂಗವಾಗಿ ಶನಿವಾರ ವಿಶೇಷ ಕೆಂಡ ಸೇವೆ ಜರಗಿತು. ಸಾವಿರಾರು ಭಕ್ತರು ಕೆಂಡ ಸೇವೆ ಮಾಡಿ ದೇವರಿಗೆ ಹರಕೆ ಒಪ್ಪಿಸಿದರು.</p>.<p>ಬೆಳಿಗ್ಗೆ ಆರಂಭವಾದ ಕೆಂಡ ಸೇವೆಯಲ್ಲಿ ಭಕ್ತರು ಶ್ರದ್ಧಾ– ಭಕ್ತಿಯಿಂದ ಪಾಲ್ಗೊಂಡಿದ್ದರು. ಚಿಕ್ಕ ಮಕ್ಕಳನ್ನು ಪೂಜಾರಿಗಳು ಹಾಗೂ ಪೋಷಕರು ಎತ್ತಿಕೊಂಡು ಕೆಂಡ ಹಾಯ್ದರೆ, ಹಲವರು ಭಕ್ತರು ಕೆಂಡದ ಮೇಲೆ ನಡೆದು ತಮ್ಮ ಹರಕೆ ತೀರಿಸಿದರು.</p>.<p>ಜಾತ್ರೆಯಲ್ಲಿ 10 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಿ ಮಹಾಸತಿ ಅಮ್ಮನವರ ದರ್ಶನ ಪಡೆದರು. ಈ ಹೂವಿನ ಪೂಜೆ, ಬಂಗಾರದ ತೊಟ್ಟಿಲು ಸಮರ್ಪಣೆ, ಬೆಳ್ಳಿ, ಬಂಗಾರದ ಕಣ್ಣು, ಬಂಗಾರದ ಆಭರಣ ಇತ್ಯಾದಿಗಳನ್ನು ಭಕ್ತಿ ಪೂರ್ವಕವಾಗಿ ದೇವಿಗೆ ಸಮರ್ಪಿಸುವ ಕಾರ್ಯವೂ ಭಕ್ತರಿಂದ ನಡೆಯುತ್ತದೆ. 9 ದಿನ ವಿಜೃಂಭಣೆಯಿಂದ ನಡೆಯುವ ಜಾತ್ರೆಯಲ್ಲಿ ನಿತ್ಯ ಸಾವಿರಾರು ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. </p>.<p>ಪ್ರತಿ ವರ್ಷದಂತೆ ದಕ್ಷಿಣ ಕನ್ನಡ ಜಿಲ್ಲೆಯ ಭಕ್ತರು ಎತ್ತಿನ ಗಾಡಿ ಸಿಂಗರಿಸಿಕೊಂಡು, ತಮ್ಮ ಹರಕೆ ತೀರಿಸಿದರಲ್ಲದೇ, ಜಾತ್ರೆಗೆ ಸಾಂಪ್ರದಾಯಿಕ ಮೆರುಗು ತಂದರು.</p>.<p>ಜಾತ್ರೆಯಲ್ಲಿ ಅನಾಹುತವಾಗದಂತ ಸಲುವಾಗಿ, ದೇವಸ್ಥಾನ ಅಭಿವೃದ್ಧಿ ಸಮಿತಿ, ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು ಹಾಗೂ ಪೊಲೀಸರು ಸುಸಜ್ಜಿತ ಭದ್ರತಾ ವ್ಯವಸ್ಥೆ ಕಲಿಸಿದ್ದರು.</p>.<p>ಜಾತ್ರೆಯ ಸಮಯದಲ್ಲಿ ನಿತ್ಯ ಅನ್ನ ಸಂತರ್ಪಣೆ ಸೇವೆ ನಡೆಯಲಿದ್ದು, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಗಳು ನಡೆಯಲಿದೆ. ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್ ನಾಗೇಂದ್ರಕೊಳಶೆಟ್ಟಿ, ಆಡಳಿತ ಕಮಿಟಿಯ ಅಧ್ಯಕ್ಷ ದೇವಿದಾಸ ಮೊಗೇರ ಕಾರ್ಯದರ್ಶಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ</strong>: ತಾಲ್ಲೂಕಿನ ಪ್ರಸಿದ್ಧ ಸೋಡಿಗದ್ದೆ ಮಹಾಸತಿ ದೇವಿಯ ಜಾತ್ರೆ ಅಂಗವಾಗಿ ಶನಿವಾರ ವಿಶೇಷ ಕೆಂಡ ಸೇವೆ ಜರಗಿತು. ಸಾವಿರಾರು ಭಕ್ತರು ಕೆಂಡ ಸೇವೆ ಮಾಡಿ ದೇವರಿಗೆ ಹರಕೆ ಒಪ್ಪಿಸಿದರು.</p>.<p>ಬೆಳಿಗ್ಗೆ ಆರಂಭವಾದ ಕೆಂಡ ಸೇವೆಯಲ್ಲಿ ಭಕ್ತರು ಶ್ರದ್ಧಾ– ಭಕ್ತಿಯಿಂದ ಪಾಲ್ಗೊಂಡಿದ್ದರು. ಚಿಕ್ಕ ಮಕ್ಕಳನ್ನು ಪೂಜಾರಿಗಳು ಹಾಗೂ ಪೋಷಕರು ಎತ್ತಿಕೊಂಡು ಕೆಂಡ ಹಾಯ್ದರೆ, ಹಲವರು ಭಕ್ತರು ಕೆಂಡದ ಮೇಲೆ ನಡೆದು ತಮ್ಮ ಹರಕೆ ತೀರಿಸಿದರು.</p>.<p>ಜಾತ್ರೆಯಲ್ಲಿ 10 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಿ ಮಹಾಸತಿ ಅಮ್ಮನವರ ದರ್ಶನ ಪಡೆದರು. ಈ ಹೂವಿನ ಪೂಜೆ, ಬಂಗಾರದ ತೊಟ್ಟಿಲು ಸಮರ್ಪಣೆ, ಬೆಳ್ಳಿ, ಬಂಗಾರದ ಕಣ್ಣು, ಬಂಗಾರದ ಆಭರಣ ಇತ್ಯಾದಿಗಳನ್ನು ಭಕ್ತಿ ಪೂರ್ವಕವಾಗಿ ದೇವಿಗೆ ಸಮರ್ಪಿಸುವ ಕಾರ್ಯವೂ ಭಕ್ತರಿಂದ ನಡೆಯುತ್ತದೆ. 9 ದಿನ ವಿಜೃಂಭಣೆಯಿಂದ ನಡೆಯುವ ಜಾತ್ರೆಯಲ್ಲಿ ನಿತ್ಯ ಸಾವಿರಾರು ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. </p>.<p>ಪ್ರತಿ ವರ್ಷದಂತೆ ದಕ್ಷಿಣ ಕನ್ನಡ ಜಿಲ್ಲೆಯ ಭಕ್ತರು ಎತ್ತಿನ ಗಾಡಿ ಸಿಂಗರಿಸಿಕೊಂಡು, ತಮ್ಮ ಹರಕೆ ತೀರಿಸಿದರಲ್ಲದೇ, ಜಾತ್ರೆಗೆ ಸಾಂಪ್ರದಾಯಿಕ ಮೆರುಗು ತಂದರು.</p>.<p>ಜಾತ್ರೆಯಲ್ಲಿ ಅನಾಹುತವಾಗದಂತ ಸಲುವಾಗಿ, ದೇವಸ್ಥಾನ ಅಭಿವೃದ್ಧಿ ಸಮಿತಿ, ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು ಹಾಗೂ ಪೊಲೀಸರು ಸುಸಜ್ಜಿತ ಭದ್ರತಾ ವ್ಯವಸ್ಥೆ ಕಲಿಸಿದ್ದರು.</p>.<p>ಜಾತ್ರೆಯ ಸಮಯದಲ್ಲಿ ನಿತ್ಯ ಅನ್ನ ಸಂತರ್ಪಣೆ ಸೇವೆ ನಡೆಯಲಿದ್ದು, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಗಳು ನಡೆಯಲಿದೆ. ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್ ನಾಗೇಂದ್ರಕೊಳಶೆಟ್ಟಿ, ಆಡಳಿತ ಕಮಿಟಿಯ ಅಧ್ಯಕ್ಷ ದೇವಿದಾಸ ಮೊಗೇರ ಕಾರ್ಯದರ್ಶಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>