ಬೆಂಗಳೂರಿನಲ್ಲಿ ಗುರುವಾರ ನಡೆದ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಗೆ ತಕ್ಕಂತೆ ಅಗತ್ಯ ಮೂಲ ಸೌಕರ್ಯ, ತಜ್ಞ ವೈದ್ಯರು, ಕಟ್ಟಡ, ಯಂತ್ರೋಪಕರಣ, ಸಿಬ್ಬಂದಿ ಮೊದಲಾದ ವಿಷಯಗಳನ್ನು ಚರ್ಚಿಸಲಾಯಿತು. ಶಿರಸಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚಿಸಬೇಕು. ಶಿರಸಿ ಮತ್ತು ಸಿದ್ದಾಪುರ ತಾಲ್ಲೂಕುಗಳ ಅಗತ್ಯಕ್ಕೆ ಸಂಬಂಧಿಸಿ, ವಾರದ ಒಳಗೆ ಪ್ರತ್ಯೇಕ ಸಭೆ ಕರೆದು, ಪ್ರಸ್ತಾವ ಸಲ್ಲಿಸಬೇಕು ಎಂದು ಕಾಗೇರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕಕುಮಾರ್ ಅವರಿಗೆ ಹೇಳಿದರು.