ಮೇ 1 ರಂದು ಬೆಳಿಗ್ಗೆ ಮಹಾಗಣಪತಿ, ಮಹಾಬಲೇಶ್ವರ ಮತ್ತು ಪಾರ್ವತಿ ದೇವಸ್ಥಾನದಲ್ಲಿ ಸ್ವಾಮೀಜಿ ಪೂಜೆ ಸಲ್ಲಿಸಲಿದ್ದು ಬಳಿಕ ಮೇಲಿನಕೇರಿಯಲ್ಲಿರುವ ಶಂಕರ ಮಠದಲ್ಲಿ ಶ್ರೀಗಳ ದರ್ಶನ, ಪಾದಪೂಜೆ, ಗೌರವಸಮರ್ಪಣೆ, ತೀರ್ಥಪ್ರಸಾದ, ಮಂತ್ರಾಕ್ಷತೆ ವಿತರಣೆ ನಡೆಯಲಿದೆ. ಸಾರ್ವಜನಿಕರಿಗೆ ಅನ್ನ ಸಂತರ್ಪಣೆಯನ್ನೂ ಏರ್ಪಡಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.