<p><strong>ಹಳಿಯಾಳ:</strong> ಇಲ್ಲಿನ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (ಮಾರ್ಕೆಟಿಂಗ್ ಸೊಸೈಟಿಯ ) ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀನಿವಾಸ ಘೋಟ್ನೇಕರ ಹಾಗೂ ಉಪಾಧ್ಯಕ್ಷರಾಗಿ ಹರಿದಾಸ ಬೋಬ್ಲಿ ಅವಿರೋಧವಾಗಿ ಆಯ್ಕೆಯಾದರು.</p>.<p>ಶುಕ್ರವಾರ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಚುನಾವಣಾಧಿಕಾರಿ ಘೋಷಿಸಿದರು.</p>.<p>ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶ್ರೀನಿವಾಸ ಘೋಟ್ನೇಕರ ಮಾತನಾಡಿ, ‘ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಎಸ್.ಎಲ್.ಘೋಟ್ನೇಕರ , ಮಾಜಿ ಶಾಸಕ ಸುನೀಲ ಹೆಗಡೆ ಮಾರ್ಗದರ್ಶನದಲ್ಲಿ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೊಸೈಟಿಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ’ ಎಂದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್.ಘೋಟ್ನೇಕರ, ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ‘ಸೊಸೈಟಿ ಪ್ರಗತಿಗಾಗಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಹಾಗೂ ರೈತರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ’ ಎಂದು ತಿಳಿಸಿದರು.</p>.<p>ಬಿಜೆಪಿ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮತ್ತಿತರ ಸೊಸೈಟಿ ನಿರ್ದೇಶಕರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳಿಯಾಳ:</strong> ಇಲ್ಲಿನ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (ಮಾರ್ಕೆಟಿಂಗ್ ಸೊಸೈಟಿಯ ) ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀನಿವಾಸ ಘೋಟ್ನೇಕರ ಹಾಗೂ ಉಪಾಧ್ಯಕ್ಷರಾಗಿ ಹರಿದಾಸ ಬೋಬ್ಲಿ ಅವಿರೋಧವಾಗಿ ಆಯ್ಕೆಯಾದರು.</p>.<p>ಶುಕ್ರವಾರ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಚುನಾವಣಾಧಿಕಾರಿ ಘೋಷಿಸಿದರು.</p>.<p>ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶ್ರೀನಿವಾಸ ಘೋಟ್ನೇಕರ ಮಾತನಾಡಿ, ‘ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಎಸ್.ಎಲ್.ಘೋಟ್ನೇಕರ , ಮಾಜಿ ಶಾಸಕ ಸುನೀಲ ಹೆಗಡೆ ಮಾರ್ಗದರ್ಶನದಲ್ಲಿ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೊಸೈಟಿಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ’ ಎಂದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್.ಘೋಟ್ನೇಕರ, ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ‘ಸೊಸೈಟಿ ಪ್ರಗತಿಗಾಗಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಹಾಗೂ ರೈತರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ’ ಎಂದು ತಿಳಿಸಿದರು.</p>.<p>ಬಿಜೆಪಿ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮತ್ತಿತರ ಸೊಸೈಟಿ ನಿರ್ದೇಶಕರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>