ಶ್ರೀನಿವಾಸ ನಾಯ್ಕ ಅವರ ಪರ ವಕೀಲ ನಾಗರಾಜ ನಾಯ್ಕ ಅವರು ವಾದ ಮಂಡಿಸಿ ಗಡಿಪಾರು ಪ್ರಕರಣಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಶ್ರೀನಿವಾಸ ನಾಯ್ಕರಿಗೆ ಜಿಲ್ಲಾಡಳಿತ ಈಚೆಗೆ ನೋಟಿಸ್ ಜಾರಿ ಮಾಡಿ 1 ವರ್ಷದ ಗಡಿಪಾರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ಇದರ ವಿರುದ್ಧ ಶ್ರೀನಿವಾಸ ನಾಯ್ಕ ಅವರು ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಬುಧವಾರ ಮಧ್ಯಾಹ್ನ ಜಿಲ್ಲಾ ನ್ಯಾಯಾಲಯ ಗಡಿಪಾರು ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ನೀಡಿದೆ.