<p><strong>ಭಟ್ಕಳ:</strong> ತಾಲ್ಲೂಕಿನ ಜಾಲಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶ್ರೀಧರ ಶೇಟ್ ಶಿರಾಲಿ ಈ ಬಾರಿಯ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆಯಾಗಿದ್ದಾರೆ.</p>.<p>ಕವಿ, ಲೇಖಕ, ವ್ಯಂಗ್ಯಚಿತ್ರಕಾರರಾಗಿ ಬಹುಮುಖ ಪ್ರತಿಭೆಯಿಂದಾಗಿ ಜನಮನ್ನಣೆ ಗಳಿಸಿದ್ದಾರೆ. ಇಂಗ್ಲಿಷ್ ಭಾಷಾ ಶಿಕ್ಷಕರಾಗಿರುವ ಅವರ ಪರಿಣಾಮಕಾರಿ ಬೋಧನೆಯ ಪರಿಣಾಮದಿಂದ ಪ್ರೌಢಶಾಲೆ ನಿರಂತರ 8 ವರ್ಷಗಳಿಂದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರರಷ್ಟು ಫಲಿತಾಂಶ ಸಾಧಿಸುತ್ತ ಬಂದಿದೆ. ಈ ಸಾಧನೆಗೆ ಎರಡು ಬಾರಿ ಧಾರವಾಡದ ಡಾ.ಎಚ್.ಎಫ್.ಕಟ್ಟೀಮನಿ ಪ್ರತಿಷ್ಠಾನದ ‘ಶಿಕ್ಷಕ ಪರಿಶ್ರಮ ಹಿರಿಮೆಗೆ ಗೌರವ’ ಪ್ರಶಸ್ತಿಗೆ ಆಯ್ಕೆಯಾಗಿದ್ದರು.</p>.<p>ಹಸಿವು ಸಾಯುವುದಿಲ್ಲ, ಬೇಲಿಯ ಹೂವು, ಬೆರಳ ಸಂಧಿಯಿಂದ, ಕಾವ್ಯ ಜ್ಯೋತಿ ಇತ್ಯಾದಿ ಕವನ ಸಂಕಲಗಳು ಸೇರಿದಂತೆ ಒಟ್ಟು ಏಳು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ‘ಬೇಲಿಯ ಹೂವು’ ಎಂಬ ಮಕ್ಕಳ ಕವನವು ಎನ್ಸಿಇಆರ್ಟಿಯು ಐದನೇ ತರಗತಿಯ ‘ಕನ್ನಡ ಚಂದನ’ ಪಠ್ಯಪುಸ್ತಕದಲ್ಲಿ ಪ್ರಕಟಿಸಿದೆ.</p>.<p>‘ರಾಜ್ಯಮಟ್ಟದ ಪ್ರಶಸ್ತಿ ಸಂದಿರುವುದು ಮತ್ತಷ್ಟು ಸಾಧನೆಗಳನ್ನು ಮಾಡಲು ಪ್ರೋತ್ಸಾಹ ನೀಡಿದಂತಾಗಿದೆ’ ಎಂದು ಶಿಕ್ಷಕ ಶ್ರೀಧರ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ತಾಲ್ಲೂಕಿನ ಜಾಲಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶ್ರೀಧರ ಶೇಟ್ ಶಿರಾಲಿ ಈ ಬಾರಿಯ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆಯಾಗಿದ್ದಾರೆ.</p>.<p>ಕವಿ, ಲೇಖಕ, ವ್ಯಂಗ್ಯಚಿತ್ರಕಾರರಾಗಿ ಬಹುಮುಖ ಪ್ರತಿಭೆಯಿಂದಾಗಿ ಜನಮನ್ನಣೆ ಗಳಿಸಿದ್ದಾರೆ. ಇಂಗ್ಲಿಷ್ ಭಾಷಾ ಶಿಕ್ಷಕರಾಗಿರುವ ಅವರ ಪರಿಣಾಮಕಾರಿ ಬೋಧನೆಯ ಪರಿಣಾಮದಿಂದ ಪ್ರೌಢಶಾಲೆ ನಿರಂತರ 8 ವರ್ಷಗಳಿಂದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರರಷ್ಟು ಫಲಿತಾಂಶ ಸಾಧಿಸುತ್ತ ಬಂದಿದೆ. ಈ ಸಾಧನೆಗೆ ಎರಡು ಬಾರಿ ಧಾರವಾಡದ ಡಾ.ಎಚ್.ಎಫ್.ಕಟ್ಟೀಮನಿ ಪ್ರತಿಷ್ಠಾನದ ‘ಶಿಕ್ಷಕ ಪರಿಶ್ರಮ ಹಿರಿಮೆಗೆ ಗೌರವ’ ಪ್ರಶಸ್ತಿಗೆ ಆಯ್ಕೆಯಾಗಿದ್ದರು.</p>.<p>ಹಸಿವು ಸಾಯುವುದಿಲ್ಲ, ಬೇಲಿಯ ಹೂವು, ಬೆರಳ ಸಂಧಿಯಿಂದ, ಕಾವ್ಯ ಜ್ಯೋತಿ ಇತ್ಯಾದಿ ಕವನ ಸಂಕಲಗಳು ಸೇರಿದಂತೆ ಒಟ್ಟು ಏಳು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ‘ಬೇಲಿಯ ಹೂವು’ ಎಂಬ ಮಕ್ಕಳ ಕವನವು ಎನ್ಸಿಇಆರ್ಟಿಯು ಐದನೇ ತರಗತಿಯ ‘ಕನ್ನಡ ಚಂದನ’ ಪಠ್ಯಪುಸ್ತಕದಲ್ಲಿ ಪ್ರಕಟಿಸಿದೆ.</p>.<p>‘ರಾಜ್ಯಮಟ್ಟದ ಪ್ರಶಸ್ತಿ ಸಂದಿರುವುದು ಮತ್ತಷ್ಟು ಸಾಧನೆಗಳನ್ನು ಮಾಡಲು ಪ್ರೋತ್ಸಾಹ ನೀಡಿದಂತಾಗಿದೆ’ ಎಂದು ಶಿಕ್ಷಕ ಶ್ರೀಧರ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>